ಚಾಮರಾಜನಗರ

ಎಸ್‌ಐ ವಿರುದ್ಧ ಧಮ್ಕಿ ಆರೋಪ; ರೈತ ಸಂಘದಿಂದ ಪ್ರತಿಭಟನೆ

ಹನೂರು: ಜಮೀನಿನ ಆಸ್ತಿಗೆ ಸಂಬಂಧಪಟ್ಟಂತೆ ದೂರು ನೀಡಿದ್ದ ರೈತ ಸಂಘದ ಮಹಿಳಾ ಸದಸ್ಯರಿಗೆ ರಾಮಾಪುರ ಸಬ್ ಇನ್ಸ್ಪೆಕ್ಟರ್ ಈಶ್ವರ್ ದೂರವಾಣಿ ಮುಖಾಂತರ ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಗೌಡೇಗೌಡ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ಜನ ರೈತರು ಪೊಲೀಸ್ ಠಾಣಾ ಮುಂಭಾಗ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಅಮ್ಜದ್ ಖಾನ್ ಮಾತನಾಡಿ ರಾಮಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪಚ್ಚೆದೊಡ್ಡಿ ಗ್ರಾಮದ ಜಮೀನು ವಿಚಾರಕ್ಕೆ ಸಂಬಂಧಪಟ್ಟಂತೆ ರೈತ ಸಂಘದ ಮಹಿಳೆಯ ಮೇಲೆ ಬೆಂಗಳೂರು ಮೂಲದ ಖಾಸಗಿ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಈ ವಿಚಾರವಾಗಿ ರೈತ ಮಹಿಳೆ ತನ್ನ ಮೇಲೆ ಬೆಂಗಳೂರಿನವರು ದೂರು ನೀಡಿದ್ದಾರೆ. ನನಗೆ ನ್ಯಾಯ ಕೊಡಿಸಿ ಎಂದು ಅಳಲು ತೋಡಿಕೊಂಡಾಗ ನಾನೇ ರಾಮಾಪುರ ಪೊಲೀಸ್ ಠಾಣೆಗೆ ರೈತನ ಮಹಿಳೆಯ ಜೊತೆ ಹಾಜರಾಗಿ ದೂರು ಕೊಡಿಸಿದ್ದೆ ಈ ವೇಳೆ ಅವರನ್ನು ಕರೆಸಿ ಶಾಂತಿಯುತವಾಗಿ ಸಮಸ್ಯೆಯನ್ನು ಬಗೆಹರಿಸಿ ನಾಳೆ ಬರುತ್ತೇವೆ ಎಂದು ಗೌರವಿದಿಂದ ನಡೆದುಕೊಂಡು ಗ್ರಾಮಕ್ಕೆ ವಾಪಸ್ ತೆರಳಿದ್ದೇವೆ. ನಂತರ ರೈತ ಮಹಿಳೆಗೆ ದೂರವಾಣಿ ಕರೆ ಮಾಡಿದ ಈಶ್ವರ್ ರವರು ನಿನ್ನನ್ನು ಒದ್ದು ಒಳಗೆ ಹಾಕುತ್ತೇನೆ ಎಂದು ಧಮಕಿ ಹಾಕಿದಲ್ಲದೇ, ನನಗೂ ಅವರನ್ನು ಕರೆತಂದು ದೂರು ಕೊಡಲು ನೀನು ಯಾರು ಎಂದು ಧಮ್ಕಿ ಹಾಕಿದ್ದಲ್ಲದೆ ಬೆದರಿಕೆ ಹಾಕಿದ್ದಾರೆ, ರೈತ ಸಂಘದ ತಾಲೂಕು ಅಧ್ಯಕ್ಷರ ಜೊತೆ ಅಸಭ್ಯವಾಗಿ ನಡೆದುಕೊಳ್ಳುವ ಇವರು ಸಾಮಾನ್ಯ ಜನರಿಗೆ ಯಾವ ರೀತಿ ಸಹಕಾರ ನೀಡುತ್ತಾರೆ ಎಂದು ತರಾಟೆಗೆ ತೆಗೆದುಕೊಂಡರು. ಇನ್ನು ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಗೌಡೇಗೌಡ ಮಾತನಾಡಿ ಹನೂರು ತಾಲೂಕಿನ ರಾಮಾಪುರ ಪೊಲೀಸ್ ಠಾಣೆ ರಾಜ್ಯವಲ್ಲದೆ ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಹೆಸರುವಾಸಿಯಾಗಿದೆ. ಇದುವರೆಗೂ ಇಲ್ಲಿ ಕರ್ತವ್ಯ ನಿರ್ವಹಿಸುವ ಪಿ ಐ, ಎಸ್ ಐ ಹಾಗೂ ಸಿಬ್ಬಂದಿಗಳು ಉತ್ತಮ ಆಡಳಿತ ನೀಡುವುದರ ಮೂಲಕ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ ಇತ್ತೀಚೆಗೆ ಬಂದಿರುವ ಎಸ್ಐ ಈಶ್ವರ್ ರವರು ಜನಸಾಮಾನ್ಯರ ಮೇಲೆ ದಬ್ಬಾಳಿಕೆ ಮಾಡಿ ಧಮ್ಕಿ ಹಾಕುತ್ತಿದ್ದಾರೆ. ಇವರಿಗೆ ಕರ್ನಾಟಕ ರಾಜ್ಯ ರೈತ ಸಂಘದ ಹಿನ್ನೆಲೆ ಏನೆಂಬುದು ತಿಳಿದಿಲ್ಲ, ಇಂಥ ಅವಿವೇಕಿ ಅಧಿಕಾರಿಯನ್ನು ಯಾವ ರೀತಿ ಕಳುಹಿಸಬೇಕು ಎಂಬುದು ನಮಗೂ ತಿಳಿದಿದೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.

ಪಿ ಐ ಶಶಿಕುಮಾರ್ ಮಾತನಾಡಿ ಪೊಲೀಸ್ ಠಾಣೆಗೆ ಬರುವ ಪ್ರತಿಯೊಬ್ಬರನ್ನು ಗೌರವಿಸಬೇಕಾದದ್ದು ನಮ್ಮ ಕರ್ತವ್ಯ, ಎಸ್ಐ ರವರು ಮಾತಿನ ಭರದಲ್ಲಿ ಮಾತನಾಡಿದ್ದಾರೆ, ಮುಂದೆ ಇಂತಹ ಘಟನೆಗಳು ನಡೆಯದಂತೆ ಸೂಕ್ತ ಕ್ರಮ ವಹಿಸಲಾಗುವುದು ಎಂದು ತಿಳಿಸಿ ರೈತರಿಗೆ ಪ್ರತಿಭಟನೆ ಕೈ ಬಿಡುವಂತೆ ಮನವಿ ಮಾಡಿದರು.

ಇವರ ಮಾತಿಗೂ ಸಮಾಧಾನಗೊಳ್ಳದ ರೈತ ಮುಖಂಡರುಗಳ ಮನವೊಲಿಸಲು ಕೊಳ್ಳೇಗಾಲ ಉಪವಿಭಾಗದ ಡಿವೈಎಸ್ಪಿ ಧರ್ಮೇಂದ್ರರವರು ದೂರವಾಣಿ ಮುಖಾಂತರ ಸಂಪರ್ಕಿಸಿ ರೈತರ ಜೊತೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಅವರು ಮಾತನಾಡಿ ನಾವು ನಾಗಮಂಗಲದ ಬಂದೋಬಸ್ತ್ ಕರ್ತವ್ಯಕ್ಕೆ ಆಗಮಿಸಿದ್ದೇವೆ. ವಾಪಸ್ ಬಂದ ನಂತರ ವರದಿ ಪಡೆದುಕೊಂಡು ಹಿರಿಯ ಅಧಿಕಾರಿಗಳಿಗೆ ವರದಿ ನೀಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ನಂತರ ರೈತ ಸಂಘದ ಮುಖಂಡರುಗಳು ಪ್ರತಿಭಟನೆ ಕೈಬಿಟ್ಟರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಸಂಚಾಲಕ ಶೈಲೇಂದ್ರ ಕುಮಾರ್, ಗ್ರಾಮ ಘಟಕದ ಅಧ್ಯಕ್ಷ ಅರ್ಪುದ ರಾಜ್, ರೈತ ಮುಖಂಡರಾದ ರವಿ ನಾಯ್ಡು, ಬಸವರಾಜು ಸೇರಿದಂತೆ ನೂರಕ್ಕೂ ಹೆಚ್ಚು ಜನ ರೈತ ಮುಖಂಡರುಗಳು ಭಾಗಿಯಾಗಿದ್ದರು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

48 seconds ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

54 mins ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

1 hour ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

2 hours ago

ಪಶ್ಚಿಮಘಟ್ಟ: 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…

2 hours ago