ಚಾಮರಾಜನಗರ

ನದಿಗೆ ಇಳಿದು ಪ್ರತಿಭಟನೆಗೆ ಮುಂದಾದ ರೈತರಿಗೆ ತಡೆ

ಹನೂರು : ತಾಲ್ಲೂಕಿನ ಶೆಟ್ಟಳ್ಳಿ, ಮಾರ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಗ್ರಾಮಗಳಿಗೆ ಕಾವೇರಿ ನದಿ ಮೂಲದಿಂದ ಕುಡಿಯುವ ನೀರು ಕಲ್ಪಿಸುವಂತೆ ಒತ್ತಾಯಿಸಿ ನದಿಗೆ ಇಳಿದು ಪ್ರತಿಭಟನೆ ಮಾಡಲು ತೆರಳಿದ್ದ ರೈತ ಮುಖಂಡರನ್ನು ತಹಸಿಲ್ದಾರ್ ಚೈತ್ರ ನೇತೃತ್ವದಲ್ಲಿ ರಾಮಾಪುರ ಪೊಲೀಸರು ತಡೆದ ಘಟನೆ ನಡೆಯಿತು.

ಪ್ರತಿಭಟನಾನಿರತ ರೈತರು ನಾಲ್‌ರೋಡ್ ಗ್ರಾಮದಿಂದ ಬೈಕ್ ರ‍್ಯಾಲಿಯಲ್ಲಿ ಹೊರಟು ಮಾರ್ಟಳ್ಳಿ, ವಡಕೆಹಳ್ಳ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು, ದಂಟಳ್ಳಿ ಮಾರ್ಗವಾಗಿ ಕಾವೇರಿ ನದಿಗೆ ತೆರಳಿ ನದಿಯಲ್ಲಿ ಇಳಿದು ಪ್ರತಿಭಟನೆ ನಡೆಸಲು ತಯಾರಿ ಮಾಡಿಕೊಂಡಿದ್ದರು. ಆದರೆ ಪೊಲೀಸರು ರೈತರನ್ನು ಮಾರ್ಗಮಧ್ಯದಲ್ಲಿಯೇ ತಡೆದಿದ್ದಾರೆ.

ಈ ವೇಳೆ ರೈತ ಮುಖಂಡರು, ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಕಾವೇರಿ ನದಿಯ ನೀರನ್ನು ಬಳಕೆ ಮಾಡದೆ ತಮಿಳುನಾಡಿಗೆ ಹರಿಬಿಟ್ಟಿರುವ ಧೋರಣೆಯನ್ನು ಖಂಡಿಸಿ ಹಾಗೂ ನಮ್ಮ ಭಾಗದ ರೈತರಿಗೆ ನೀರು ಕೊಡದ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಶೈಲೇಂದ್ರ ಮಾತನಾಡಿ, ಕಾವೇರಿ ನದಿ ಹತ್ತಿರದಲ್ಲಿಯೇ ಹರಿಯುತ್ತಿದ್ದರೂ ಹನೂರು ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ಈ ಭಾಗದ ಕೆರೆ ಹಾಗೂ ಜಲಾಶಯಗಳಿಗೆ ಪೈಪ್‌ಲೈನ್ ಮೂಲಕ ನೀರು ಸರಬರಾಜು ಮಾಡುವಂತೆ ರೈತರು ಹಲವಾರು ಬಾರಿ ಸರ್ಕಾರಕ್ಕೆ ಮನವಿ ಮಾಡಿದ್ದರು ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಸರ್ಕಾರ ಕಡಿಮೆ ಅನುದಾನದಲ್ಲಿ ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಮಾಡಬಹುದು. ಕಾವೇರಿ ನದಿಯಿಂದ ಹಾಲೇರಿಕೆರೆ, ಕೀರೆಪಾತಿ ಕೆರೆಗಳನ್ನು ಅಭಿವೃದ್ಧಿ ಪಡಿಸಿದರೆ ಅಂತರ್ಜಲ ಮಟ್ಟ ಹೆಚ್ಚಾಗಿ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಇದರಿಂದ ಉದ್ಯೋಗ ಅರಸಿ ನೆರೆಯ ರಾಜ್ಯ, ಜಿಲ್ಲೆಗಳಿಗೆ ಹೋಗಿರುವ 37 ಸಾವಿರ ಜನರು ಮತ್ತೆ ಗ್ರಾಮಕ್ಕೆ ವಾಪಸ್ ಬರಲಿದ್ದಾರೆ. ಇದಲ್ಲದೆ ಪ್ರಾಣಿ-ಪಕ್ಷಿ ಜಾನುವಾರಗಳಿಗೂ ಅನುಕೂಲವಾಗಲಿದೆ ಎಂದರು.

ಕಾವೇರಿ ನದಿಗೆ ಸೇತುವೆ ನಿರ್ಮಾಣ ಮಾಡುವುದರಿಂದ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಉದ್ಯೋಗ ಅರಸಿ ಬೆಂಗಳೂರಿಗೆ ಹೋಗಿರುವ ಯುವಕ ಯುವತಿಯರಿಗೂ ಹೆಚ್ಚಿನ ಅನುಕೂಲವಾಗಲಿದೆ. ಇದಲ್ಲದೆ ರೈತರು ಬೆಳೆಯುವ ತರಕಾರಿಗಳನ್ನು ಬೆಂಗಳೂರಿಗೆ ಸುಲಭವಾಗಿ ಮಾರುಕಟ್ಟೆಗಳಲ್ಲಿ ಮಾರಾಟ ಮಾಡಲು ಅನುಕೂಲವಾಗುತ್ತದೆ ಎಂದರು.

ಮಾರ್ಟಳ್ಳಿ ಗ್ರಾಮದ ರೈತ ಮುಖಂಡರು ಮಾತನಾಡಿ, ಅರಣ್ಯ ಪ್ರದೇಶಗಳಲ್ಲಿ ಪ್ರತಿನಿತ್ಯ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗುತ್ತಿದೆ. ಇದನ್ನು ತಡೆಗಟ್ಟಲು ಅರಣ್ಯ ಇಲಾಖೆಯವರು ಶಾಶ್ವತ ಕ್ರಮ ವಹಿಸಬೇಕು. ಸಂಬಂಧ ಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದರು.

ತಹಸಿಲ್ದಾರ್ ಚೈತ್ರ ಮಾತನಾಡಿ, ರೈತರು ಕಾವೇರಿ ನದಿಯಿಂದ ಗ್ರಾಮಗಳಿಗೆ ಕುಡಿಯುವ ನೀರು ಹರಿಸುವ ಯೋಜನೆಯನ್ನು ಶೀಘ್ರವೇ ಮಾಡಿಕೊಡಬೇಕೆಂಬುದು ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಇಟ್ಟಿದ್ದಾರೆ . ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಕೊಳ್ಳೇಗಾಲ ತಾಲ್ಲೂಕು ಸಂಚಾಲಕ ಮಹೇಶ್, ಮಾರ್ಟಳ್ಳಿ ಗ್ರಾಮ ಘಟಕದ ಅಧ್ಯಕ್ಷ ಅರ್ಪುದರಾಜ್, ರೈತ ಮುಖಂಡರುಗಳಾದ ಪೆರಿಯ ನಾಯಗಂ, ಪೊನ್ನು ಸ್ವಾಮಿ, ಜಾನ್‌ಕೆನಡಿ, ಕೆಂಪರಾಜು, ಶಿವಣ್ಣ, ವೆಂಕಟೇಶ್, ಸಗಾಯಮೇರಿ, ಬಸವರಾಜು, ಸೇಟು, ಇನ್ನಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

3 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

7 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

9 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

10 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

12 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

15 hours ago