ಚಾಮರಾಜನಗರ

ನದಿಗೆ ಇಳಿದು ಪ್ರತಿಭಟನೆಗೆ ಮುಂದಾದ ರೈತರಿಗೆ ತಡೆ

ಹನೂರು : ತಾಲ್ಲೂಕಿನ ಶೆಟ್ಟಳ್ಳಿ, ಮಾರ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಗ್ರಾಮಗಳಿಗೆ ಕಾವೇರಿ ನದಿ ಮೂಲದಿಂದ ಕುಡಿಯುವ ನೀರು ಕಲ್ಪಿಸುವಂತೆ ಒತ್ತಾಯಿಸಿ ನದಿಗೆ ಇಳಿದು ಪ್ರತಿಭಟನೆ ಮಾಡಲು ತೆರಳಿದ್ದ ರೈತ ಮುಖಂಡರನ್ನು ತಹಸಿಲ್ದಾರ್ ಚೈತ್ರ ನೇತೃತ್ವದಲ್ಲಿ ರಾಮಾಪುರ ಪೊಲೀಸರು ತಡೆದ ಘಟನೆ ನಡೆಯಿತು.

ಪ್ರತಿಭಟನಾನಿರತ ರೈತರು ನಾಲ್‌ರೋಡ್ ಗ್ರಾಮದಿಂದ ಬೈಕ್ ರ‍್ಯಾಲಿಯಲ್ಲಿ ಹೊರಟು ಮಾರ್ಟಳ್ಳಿ, ವಡಕೆಹಳ್ಳ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು, ದಂಟಳ್ಳಿ ಮಾರ್ಗವಾಗಿ ಕಾವೇರಿ ನದಿಗೆ ತೆರಳಿ ನದಿಯಲ್ಲಿ ಇಳಿದು ಪ್ರತಿಭಟನೆ ನಡೆಸಲು ತಯಾರಿ ಮಾಡಿಕೊಂಡಿದ್ದರು. ಆದರೆ ಪೊಲೀಸರು ರೈತರನ್ನು ಮಾರ್ಗಮಧ್ಯದಲ್ಲಿಯೇ ತಡೆದಿದ್ದಾರೆ.

ಈ ವೇಳೆ ರೈತ ಮುಖಂಡರು, ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಕಾವೇರಿ ನದಿಯ ನೀರನ್ನು ಬಳಕೆ ಮಾಡದೆ ತಮಿಳುನಾಡಿಗೆ ಹರಿಬಿಟ್ಟಿರುವ ಧೋರಣೆಯನ್ನು ಖಂಡಿಸಿ ಹಾಗೂ ನಮ್ಮ ಭಾಗದ ರೈತರಿಗೆ ನೀರು ಕೊಡದ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಶೈಲೇಂದ್ರ ಮಾತನಾಡಿ, ಕಾವೇರಿ ನದಿ ಹತ್ತಿರದಲ್ಲಿಯೇ ಹರಿಯುತ್ತಿದ್ದರೂ ಹನೂರು ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ಈ ಭಾಗದ ಕೆರೆ ಹಾಗೂ ಜಲಾಶಯಗಳಿಗೆ ಪೈಪ್‌ಲೈನ್ ಮೂಲಕ ನೀರು ಸರಬರಾಜು ಮಾಡುವಂತೆ ರೈತರು ಹಲವಾರು ಬಾರಿ ಸರ್ಕಾರಕ್ಕೆ ಮನವಿ ಮಾಡಿದ್ದರು ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಸರ್ಕಾರ ಕಡಿಮೆ ಅನುದಾನದಲ್ಲಿ ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಮಾಡಬಹುದು. ಕಾವೇರಿ ನದಿಯಿಂದ ಹಾಲೇರಿಕೆರೆ, ಕೀರೆಪಾತಿ ಕೆರೆಗಳನ್ನು ಅಭಿವೃದ್ಧಿ ಪಡಿಸಿದರೆ ಅಂತರ್ಜಲ ಮಟ್ಟ ಹೆಚ್ಚಾಗಿ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಇದರಿಂದ ಉದ್ಯೋಗ ಅರಸಿ ನೆರೆಯ ರಾಜ್ಯ, ಜಿಲ್ಲೆಗಳಿಗೆ ಹೋಗಿರುವ 37 ಸಾವಿರ ಜನರು ಮತ್ತೆ ಗ್ರಾಮಕ್ಕೆ ವಾಪಸ್ ಬರಲಿದ್ದಾರೆ. ಇದಲ್ಲದೆ ಪ್ರಾಣಿ-ಪಕ್ಷಿ ಜಾನುವಾರಗಳಿಗೂ ಅನುಕೂಲವಾಗಲಿದೆ ಎಂದರು.

ಕಾವೇರಿ ನದಿಗೆ ಸೇತುವೆ ನಿರ್ಮಾಣ ಮಾಡುವುದರಿಂದ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಉದ್ಯೋಗ ಅರಸಿ ಬೆಂಗಳೂರಿಗೆ ಹೋಗಿರುವ ಯುವಕ ಯುವತಿಯರಿಗೂ ಹೆಚ್ಚಿನ ಅನುಕೂಲವಾಗಲಿದೆ. ಇದಲ್ಲದೆ ರೈತರು ಬೆಳೆಯುವ ತರಕಾರಿಗಳನ್ನು ಬೆಂಗಳೂರಿಗೆ ಸುಲಭವಾಗಿ ಮಾರುಕಟ್ಟೆಗಳಲ್ಲಿ ಮಾರಾಟ ಮಾಡಲು ಅನುಕೂಲವಾಗುತ್ತದೆ ಎಂದರು.

ಮಾರ್ಟಳ್ಳಿ ಗ್ರಾಮದ ರೈತ ಮುಖಂಡರು ಮಾತನಾಡಿ, ಅರಣ್ಯ ಪ್ರದೇಶಗಳಲ್ಲಿ ಪ್ರತಿನಿತ್ಯ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗುತ್ತಿದೆ. ಇದನ್ನು ತಡೆಗಟ್ಟಲು ಅರಣ್ಯ ಇಲಾಖೆಯವರು ಶಾಶ್ವತ ಕ್ರಮ ವಹಿಸಬೇಕು. ಸಂಬಂಧ ಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದರು.

ತಹಸಿಲ್ದಾರ್ ಚೈತ್ರ ಮಾತನಾಡಿ, ರೈತರು ಕಾವೇರಿ ನದಿಯಿಂದ ಗ್ರಾಮಗಳಿಗೆ ಕುಡಿಯುವ ನೀರು ಹರಿಸುವ ಯೋಜನೆಯನ್ನು ಶೀಘ್ರವೇ ಮಾಡಿಕೊಡಬೇಕೆಂಬುದು ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಇಟ್ಟಿದ್ದಾರೆ . ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಕೊಳ್ಳೇಗಾಲ ತಾಲ್ಲೂಕು ಸಂಚಾಲಕ ಮಹೇಶ್, ಮಾರ್ಟಳ್ಳಿ ಗ್ರಾಮ ಘಟಕದ ಅಧ್ಯಕ್ಷ ಅರ್ಪುದರಾಜ್, ರೈತ ಮುಖಂಡರುಗಳಾದ ಪೆರಿಯ ನಾಯಗಂ, ಪೊನ್ನು ಸ್ವಾಮಿ, ಜಾನ್‌ಕೆನಡಿ, ಕೆಂಪರಾಜು, ಶಿವಣ್ಣ, ವೆಂಕಟೇಶ್, ಸಗಾಯಮೇರಿ, ಬಸವರಾಜು, ಸೇಟು, ಇನ್ನಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

8 mins ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

24 mins ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

37 mins ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

1 hour ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

1 hour ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

1 hour ago