ಚಾಮರಾಜನಗರ: ನೆರೆಯ ಕೇರಳದಲ್ಲಿ ಮೆದುಳು ತಿನ್ನುವ ವೈರಸ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಜಿಲ್ಲೆಗಳಲ್ಲಿಯೂ ಕಟ್ಟೆಚ್ಚರಕ್ಕೆ ಸೂಚನೆ ನೀಡಲಾಗಿದೆ.
ರಾಜ್ಯದ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಅಲರ್ಟ್ ಘೋಷಣೆ ಮಾಡಿದೆ. ವಿಶೇಷವಾಗಿ ಗುಂಡ್ಲುಪೇಟೆಯ ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೇರಳದ ಶಬರಿಮಲೆಗೆ ತೆರಳುವ ಭಕ್ತರಿಗೆ ಈ ರೋಗದ ಬಗ್ಗೆ ಸಮಗ್ರ ಮಾಹಿತಿ ನೀಡಲಾಗುತ್ತಿದೆ.
ಇದನ್ನು ಓದಿ: HMPV ವೈರಸ್ ಪತ್ತೆ ಪ್ರಕರಣ | ಮುಂಜಾಗ್ರತೆಗೆ ಸಿಎಂ ಸೂಚನೆ
ಈ ವೈರಸ್ ನೆಗ್ಲೇರಿಯಾ ಪೌಲೇರಿ ಎಂಬ ಪರಾವಲಂಬಿಯಿಂದ ಬರುವ ಅಪರೂಪದ ಕಾಯಿಲೆ. ಕರ್ನಾಟಕದಲ್ಲಿ ಈವರೆಗೆ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ಕೇರಳ ರಾಜ್ಯದಲ್ಲಿ ಈ ಪ್ರಕರಣ ಹೆಚ್ಚುತ್ತಿರುವುದರಿಂದ ಕರ್ನಾಟಕದಲ್ಲಿಯೂ ಮುನ್ನೆಚ್ಚರಿಕೆ ಅಗತ್ಯ ಎಂದು ಗುಂಡ್ಲುಪೇಟೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಲೀಂ ಪಾಷಾ ಮಾಹಿತಿ ನೀಡಿದ್ದಾರೆ.
ಜನತೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸಬೇಕು. ಈ ಬಗ್ಗೆ ಕರಪತ್ರಗಳನ್ನು ಹಂಚುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಆರೋಗ್ಯ ಇಲಾಖೆ ಸಿಬ್ಬಂದಿ, ವೈದ್ಯಾಧಿಕಾರಿಗಳು ಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಯಾರೂ ಕೂಡ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.





