ಹನೂರು : ಕಿಶೋರಿಯರು ತಾವು ಇಲ್ಲಿ ಕಲಿತಿರುವ ಹೊಲಿಗೆ ತರಬೇತಿಯನ್ನು ಮುಂದುವರೆಸುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಆಗಿದ್ದಾಗ ಮಾತ್ರ ಇಂತಹ ತರಬೇತಿಗಳಿಗೆ ಅರ್ಥ ಸಿಗುತ್ತದೆ ಎಂದು ಫಾ. ರೋಷನ್ ಬಾಬು ಹೇಳಿದರು.
ಪಟ್ಟಣದ ಹೋಲಿಕ್ರಾಸ್ ಸಂಸ್ಥೆಯ ಸಭಾಂಗಣದಲ್ಲಿ ಹೊಲಿಗೆ ತರಬೇತಿ ಸಮಾರೋಪ ಸಮಾರಂಭ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು..
ಈ ಸಮಾಜದಲ್ಲಿ ಹೆಣ್ಣು ಆರ್ಥಿಕವಾಗಿ ಮುಂದೆ ಬರಬೇಕು, ಅಡುಗೆ ಕೋಣೆ ಬಿಟ್ಟು ಹೊರಗಡೆ ಬರಬೇಕು ಅಲ್ಲದೆ ಸಂಸ್ಥೆಯಲ್ಲಿ ಕಳಿಸಿರುವ ಜೀವನ ಕೌಶಲ್ಯ ಹಾಗೂ ನಡತೆಯನ್ನು ನಿಮ್ಮ ಜೀವನದಲ್ಲಿ ರೂಪಿಸಿಕೊಳ್ಳಿ ಬದುಕು ಹಸನಾಗುತ್ತದೆ ಎಂದರು.
ಗ್ರಾಮ ಪಂಚಾಯಿತಿ ಸದಸ್ಯ ಬಸವಣ್ಣ ಮಾತನಾಡಿ ಮಹಿಳೆಯರಿಗೆ, ಕಿಶೋರಿಯರಿಗೆ ಕೇವಲ ಮೀನು ತಿನ್ನುವುದನ್ನು ಹೇಳಿಕೊಟ್ಟರೆ ಸಾಲದು ಮೀನು ಹಿಡಿಯುವ ಕಲೆಯನ್ನು ಹೇಳಿಕೊಟ್ಟಿದ್ದಾರೆ.ಅವರಿಗೆ ಯಾವಾಗ ಮೀನು ತಿನ್ನಬೇಕು ಆವಾಗ ಅವರೇ ಮೀನು ಹಿಡಿದು ತಿನ್ನಲಿ ಸ್ವಾವಲಂಬಿಯಾಗಿ ಬದುಕಲು ಸಹಾಯವಾಗುತ್ತದೆ ಅಲ್ಲದೆ ಸಂಸ್ಥೆಯೂ ಸಾಕಷ್ಟು ವಿಚಾರಗಳನ್ನು ಜೀವನ ಕೌಶಲ್ಯಗಳನ್ನು ತಮಗೆ ಹೇಳಿಕೊಟ್ಟಿದೆ. ಗ್ರಾಮೀಣ ಭಾಗದ ನಮ್ಮ ಮಕ್ಕಳನ್ನು ಹುಡುಕಿ ತರಬೇತಿ ಕೊಟ್ಟಿರುವುದು ಶ್ಲಾಘನೀಯ ಎಂದರು.
ಇದೆ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಯರಂಬಾಡಿ ಶಿವಣ್ಣ, ಹೋಲಿಕ್ರಾಸ್ ಸಂಸ್ಥೆಯ ಯೋಜನಾಧಿಕಾರಿ ಸಿಸ್ಟರ್ ಆನಿಸ್, ಹಾಗೂ ಸಿಸ್ಟರ್ ಗ್ರಾಸಿಯ, ಸದ್ವಿದ್ಯಾ ರೂರಲ್ ಕಮ್ಯೂನಿಟಿ ಕಾಲೇಜಿನ ಪ್ರಿನ್ಸಿಪಲ್ ಸಿಸ್ಟರ್ ರೆಜಿಜಾನ್,ಸಿಸ್ಟರ್ ಆನಂದ, ಸಿಸ್ಟರ್ ತೆರೇಸಾ, ಸಿಸ್ಟರ್ ಜೋಸ್ಮಿನ್, ಹೋಲಿಕ್ರಾಸ್ ಸಂಸ್ಥೆಯ ಸಿಬ್ಬಂದಿಗಳು, ಪೋಷಕರು, ಮಕ್ಕಳು ಭಾಗವಹಿಸಿದ್ದರು.
ರಾಮನಗರ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಸಹೋದರಿ ಮಹಾದೇವಮ್ಮ ನಿಧನರಾಗಿದ್ದಾರೆ. ಕನಕಪುರ ತಾಲ್ಲೂಕಿನ…
ಹಾಸನ: ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ,…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಪಿಡಬ್ಲ್ಯೂಡಿ ಎಇಇ ಸತೀಶ್ ಮನೆ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರಂತೆ ಮೃಗಾಲಯದ ವನ್ಯಜೀವಿಗಳೂ ಕೂಡ ತತ್ತರಿಸಿವೆ. ಪ್ರಾಣಿ-ಪಕ್ಷಿಗಳಿಗೆ…
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಯುದ್ಧದಿಂದಾಗಿ ಪ್ರಪಂಚದಾದ್ಯಂತ ತೈಲ ಮಾರುಕಟ್ಟೆಗಳು ಸಂಪೂರ್ಣವಾಗಿ ಅಲುಗಾಡುತ್ತಿವೆ. ಇದರ ಎಫೆಕ್ಟ್ ರಾಜ್ಯದ ಮೇಲೂ ತಟ್ಟಿದ್ದು, ಡ್ರೈಫ್ರೂಟ್ಸ್…
ನಂಜನಗೂಡು: ಸ್ವಚ್ಛತೆಯ ಮೂಲಕವೇ ಗ್ರಾಮದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರಿಗೆ ಸರ್ಕಾರ ಅಗತ್ಯ ರಕ್ಷಣಾತ್ಮಕ ಸೌಲಭ್ಯಗಳನ್ನು ನೀಡುವುದರ ಜೊತೆ ಚರಂಡಿಗಳನ್ನು…