ಹನೂರು : ಕಿಶೋರಿಯರು ತಾವು ಇಲ್ಲಿ ಕಲಿತಿರುವ ಹೊಲಿಗೆ ತರಬೇತಿಯನ್ನು ಮುಂದುವರೆಸುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಆಗಿದ್ದಾಗ ಮಾತ್ರ ಇಂತಹ ತರಬೇತಿಗಳಿಗೆ ಅರ್ಥ ಸಿಗುತ್ತದೆ ಎಂದು ಫಾ. ರೋಷನ್ ಬಾಬು ಹೇಳಿದರು.
ಪಟ್ಟಣದ ಹೋಲಿಕ್ರಾಸ್ ಸಂಸ್ಥೆಯ ಸಭಾಂಗಣದಲ್ಲಿ ಹೊಲಿಗೆ ತರಬೇತಿ ಸಮಾರೋಪ ಸಮಾರಂಭ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು..
ಈ ಸಮಾಜದಲ್ಲಿ ಹೆಣ್ಣು ಆರ್ಥಿಕವಾಗಿ ಮುಂದೆ ಬರಬೇಕು, ಅಡುಗೆ ಕೋಣೆ ಬಿಟ್ಟು ಹೊರಗಡೆ ಬರಬೇಕು ಅಲ್ಲದೆ ಸಂಸ್ಥೆಯಲ್ಲಿ ಕಳಿಸಿರುವ ಜೀವನ ಕೌಶಲ್ಯ ಹಾಗೂ ನಡತೆಯನ್ನು ನಿಮ್ಮ ಜೀವನದಲ್ಲಿ ರೂಪಿಸಿಕೊಳ್ಳಿ ಬದುಕು ಹಸನಾಗುತ್ತದೆ ಎಂದರು.
ಗ್ರಾಮ ಪಂಚಾಯಿತಿ ಸದಸ್ಯ ಬಸವಣ್ಣ ಮಾತನಾಡಿ ಮಹಿಳೆಯರಿಗೆ, ಕಿಶೋರಿಯರಿಗೆ ಕೇವಲ ಮೀನು ತಿನ್ನುವುದನ್ನು ಹೇಳಿಕೊಟ್ಟರೆ ಸಾಲದು ಮೀನು ಹಿಡಿಯುವ ಕಲೆಯನ್ನು ಹೇಳಿಕೊಟ್ಟಿದ್ದಾರೆ.ಅವರಿಗೆ ಯಾವಾಗ ಮೀನು ತಿನ್ನಬೇಕು ಆವಾಗ ಅವರೇ ಮೀನು ಹಿಡಿದು ತಿನ್ನಲಿ ಸ್ವಾವಲಂಬಿಯಾಗಿ ಬದುಕಲು ಸಹಾಯವಾಗುತ್ತದೆ ಅಲ್ಲದೆ ಸಂಸ್ಥೆಯೂ ಸಾಕಷ್ಟು ವಿಚಾರಗಳನ್ನು ಜೀವನ ಕೌಶಲ್ಯಗಳನ್ನು ತಮಗೆ ಹೇಳಿಕೊಟ್ಟಿದೆ. ಗ್ರಾಮೀಣ ಭಾಗದ ನಮ್ಮ ಮಕ್ಕಳನ್ನು ಹುಡುಕಿ ತರಬೇತಿ ಕೊಟ್ಟಿರುವುದು ಶ್ಲಾಘನೀಯ ಎಂದರು.
ಇದೆ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಯರಂಬಾಡಿ ಶಿವಣ್ಣ, ಹೋಲಿಕ್ರಾಸ್ ಸಂಸ್ಥೆಯ ಯೋಜನಾಧಿಕಾರಿ ಸಿಸ್ಟರ್ ಆನಿಸ್, ಹಾಗೂ ಸಿಸ್ಟರ್ ಗ್ರಾಸಿಯ, ಸದ್ವಿದ್ಯಾ ರೂರಲ್ ಕಮ್ಯೂನಿಟಿ ಕಾಲೇಜಿನ ಪ್ರಿನ್ಸಿಪಲ್ ಸಿಸ್ಟರ್ ರೆಜಿಜಾನ್,ಸಿಸ್ಟರ್ ಆನಂದ, ಸಿಸ್ಟರ್ ತೆರೇಸಾ, ಸಿಸ್ಟರ್ ಜೋಸ್ಮಿನ್, ಹೋಲಿಕ್ರಾಸ್ ಸಂಸ್ಥೆಯ ಸಿಬ್ಬಂದಿಗಳು, ಪೋಷಕರು, ಮಕ್ಕಳು ಭಾಗವಹಿಸಿದ್ದರು.
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…
ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…