ಹನೂರು: ತಾಲೂಕಿನ ಬಿಆರ್ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ನಾಲ್ಕು ದಿನಗಳ ಅಂತರದಲ್ಲಿ ಮೂರು ಆನೆಗಳ ಅಸ್ತಿಪಂಜರಗಳು ತಡವಾಗಿ ಕಾಣಿಸಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಬಿಆರ್ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಇಂದು ಮೂರನೇ ಆನೆ ಕಳೇಬರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಬೈಲೂರು ವನ್ಯ ಜೀವಿ ವಲಯ ಪಿಜಿ ಪಾಳ್ಯ ಮಾವತ್ತೂರು ಬಿ ಗಸ್ತಿನಲ್ಲಿ ಸಿಬ್ಬಂದಿಗಳು ಗಸ್ತು ಮಾಡುವಾಗ ದೂಪದ ಮರದ ಹೊಡ್ಡು ಅರಣ್ಯ ಪ್ರದೇಶದಲ್ಲಿ ಮೃತ ಆನೆ ಪತ್ತೆಯಾಗಿದೆ. ಸುಮಾರು 60 ರಿಂದ 65 ವಯಸ್ಸಿನ ಹೆಣ್ಣಾನೆಯಾಗಿದ್ದು, 8 ದಿನಗಳ ಹಿಂದೆ ಸ್ವಾಭಾವಿಕವಾಗಿ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ.
ಕಳೆದ ಮೂರು ದಿನಗಳ ಹಿಂದೆ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ಆಳದ ಕೆರೆ ಅರಣ್ಯ ಪ್ರದೇಶದಲ್ಲಿ ಎಂಟು ತಿಂಗಳ ಹಿಂದೆ ಸ್ವಾಭಾವಿಕವಾಗಿ ಗಂಡಾನೆ ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಬಳಿಕ ಆಗಸ್ಟ್ 27ರಂದೇ ಬಿಆರ್ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ಯಳಂದೂರು ವನ್ಯಜೀವಿ ವಲಯ ಪುರಾಣಿ ಶಾಖೆ ಬೇತಾಳ ಕಟ್ಟೆ ಗಸ್ತಿನಲ್ಲಿ ಸಿಬ್ಬಂದಿಗಳು ಗಸ್ತಿನಲ್ಲಿದ್ದಾಗ ಆಳಶೆಟ್ಟಿಕಟ್ಟೆ ಮೂಲೆ ಎಂಬ ಅರಣ್ಯ ಪ್ರದೇಶದಲ್ಲಿ ಗಂಡಾನೆಯು ಮೃತಪಟ್ಟಿತ್ತು. ಇದೇ ರೀತಿ ಆಗಸ್ಟ್ 30 ರಂದು ಬಿಆರ್ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ಬೈಲೂರು ವ್ಯಾಪ್ತಿಯಲ್ಲಿ ಮತ್ತೊಂದು ಆನೆ ಶವ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.
ಈ ಬಗ್ಗೆ ಮಾತನಾಡಿರುವ ಬೈಲೂರು ವನ್ಯ ಜೀವಿ ವಲಯ ಅರಣ್ಯ ಪ್ರದೇಶದ ಆರ್ಎಫ್ಒ ಪ್ರಮೋದ್ ರಸ್ತೆಯಿಂದ ಎರಡು ಕಿಲೋ ಮೀಟರ್ ದೂರದಲ್ಲಿರುವ ಬಿದಿರಿನ ಪೊದೆಯಲ್ಲಿ ಆನೆ ಮೃತಪಟ್ಟಿರುವುದರಿಂದ ತಡವಾಗಿ ಗೊತ್ತಾಗಿದೆ. ನಮ್ಮ ಸಿಬ್ಬಂದಿಗಳು ಪ್ರತಿದಿನ ಗಸ್ತು ಮಾಡುತ್ತಾರೆ. ಈ ಎಲ್ಲಾ ಆನೆಗಳು ಸ್ವಾಭಾವಿಕವಾಗಿ ಮೃತಪಟ್ಟಿದೆ ಎಂದು ಅವರು ತಿಳಿಸಿದ್ದಾರೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…