ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು ಇರಿತದಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲದ ಆರ್.ಎಸ್ ಫಂಕ್ಷನ್ ಹಾಲ್ನಲ್ಲಿ ನಡೆದಿದೆ.
ಕೇವಲ 70 ಗ್ರಾಂ ಚಿನ್ನದ ವ್ಯತ್ಯಾಸಕ್ಕಾಗಿ ವಧು-ವರರ ಕಡೆಯವರು ಬೀದಿಯಲ್ಲಿ ಬಡಿದಾಡಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಚಾಕುವಿನಿಂದ ಇರಿದು, ಮರ್ಮಾಂಗಕ್ಕೆ ಒದ್ದು ಹಲ್ಲೆ ಮಾಡಲಾಗಿದ್ದು, ಸದ್ಯ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಗಾಯಾಗಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊಳ್ಳೇಗಾಲದ ಆರ್.ಎಸ್ ಫಂಕ್ಷನ್ ಹಾಲ್ನಲ್ಲಿ ನಡೆದಿದ್ದೇನು?
ಮುದಾಸಿರ್ ಮತ್ತು ಗುಲ್ನಾಜ್ ಭಾನು ಎಂಬವರ ವಿವಾಹ ಇಂದು (ಏಪ್ರಿಲ್ 29) ನಿಶ್ಚಯವಾಗಿತ್ತು. ಆದರೆ ಮಂಗಳವಾರ ರಾತ್ರಿ ನಡೆದ ಅರಶಿಣ ಶಾಸ್ತ್ರದ ವೇಳೆ ವರನ ಕಡೆಯವರು ಒಂದೂವರೆ ಗಂಟೆ ತಡವಾಗಿ ಬಂದಿದ್ದಕ್ಕೆ ವಧುವಿನ ಕುಟುಂಬಸ್ಥರು ತಕರಾರು ತೆಗೆದಿದ್ದರು. ಈ ಮನಸ್ಥಾಪದ ನಡುವೆಯೇ ಚಿನ್ನಾಭರಣದ ವಿಚಾರ ಮುನ್ನೆಲೆಗೆ ಬಂದಿದೆ. ವಧುವಿನ ಕಡೆಯವರು 100 ಗ್ರಾಂ ಚಿನ್ನಕ್ಕೆ ಬೇಡಿಕೆ ಇಟ್ಟಿದ್ದರು, ಆದರೆ ವರನ ಕಡೆಯವರು ಕೇವಲ 30 ಗ್ರಾಂ ಚಿನ್ನ ತಂದಿದ್ದರು. ಇದರಿಂದ ಆಕ್ರೋಶಗೊಂಡ ವಧುವಿನ ಕುಟುಂಬಸ್ಥರು ಮದುವೆಯೇ ಬೇಡ ಎಂದು ಗಲಾಟೆ ಆರಂಭಿಸಿದ್ದಾರೆ.
ಮರ್ಮಾಂಗಕ್ಕೆ ಒದ್ದು ಚಾಕು ಇರಿತ
ಬುಧವಾರ ಮುಂಜಾನೆ ವರನ ಪರವಾಗಿ ಸಂಬಂಧಿ ಮೊಹಮ್ಮದ್ ಕೈಸರ್ ರಾಜಿ ಮಾತುಕತೆಗೆ ತೆರಳಿದ್ದಾರೆ. ಈ ವೇಳೆ ತಮಿಳುನಾಡಿನಿಂದ ಬಂದಿದ್ದ ವಧುವಿನ ಸಂಬಂಧಿಕರು ರೊಚ್ಚಿಗೆದ್ದು ಕೈಸರ್ ಅವರ ಮರ್ಮಾಂಗಕ್ಕೆ ಒದ್ದು, ಚಾಕುವಿನಿಂದ ಇರಿದು ಹಲ್ಲೆ ನಡೆಸಿದ್ದಾರೆ. ಜಗಳ ವಿಕೋಪಕ್ಕೆ ತಿರುಗಿ ವರನ ಸಂಬಂಧಿಗಳಾದ ಸಮೀರ್ ಅಯಾಜ್, ಶೋಯೆಬ್ ಹಾಗೂ ವಧುವಿನ ಕಡೆಯ ಫೈರೋಜ್ ಖಾನ್, ಅಬ್ದುಲ್ ವಾಹೀದ್ ಮತ್ತು ಅಬ್ದುಲ್ ಆರೀಫ್ ಮೇಲೂ ಹಲ್ಲೆ ನಡೆದಿದೆ.
ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್ಸ್ಟೆಬಲ್ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…
ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಈಗ ಎರಡನೇ ಬಾರಿ ಜಾಮೀನಿಗಾಗಿ…
ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…
1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…
ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…