ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು ಇರಿತದಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲದ ಆರ್.ಎಸ್ ಫಂಕ್ಷನ್ ಹಾಲ್ನಲ್ಲಿ ನಡೆದಿದೆ.
ಕೇವಲ 70 ಗ್ರಾಂ ಚಿನ್ನದ ವ್ಯತ್ಯಾಸಕ್ಕಾಗಿ ವಧು-ವರರ ಕಡೆಯವರು ಬೀದಿಯಲ್ಲಿ ಬಡಿದಾಡಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಚಾಕುವಿನಿಂದ ಇರಿದು, ಮರ್ಮಾಂಗಕ್ಕೆ ಒದ್ದು ಹಲ್ಲೆ ಮಾಡಲಾಗಿದ್ದು, ಸದ್ಯ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಗಾಯಾಗಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊಳ್ಳೇಗಾಲದ ಆರ್.ಎಸ್ ಫಂಕ್ಷನ್ ಹಾಲ್ನಲ್ಲಿ ನಡೆದಿದ್ದೇನು?
ಮುದಾಸಿರ್ ಮತ್ತು ಗುಲ್ನಾಜ್ ಭಾನು ಎಂಬವರ ವಿವಾಹ ಇಂದು (ಏಪ್ರಿಲ್ 29) ನಿಶ್ಚಯವಾಗಿತ್ತು. ಆದರೆ ಮಂಗಳವಾರ ರಾತ್ರಿ ನಡೆದ ಅರಶಿಣ ಶಾಸ್ತ್ರದ ವೇಳೆ ವರನ ಕಡೆಯವರು ಒಂದೂವರೆ ಗಂಟೆ ತಡವಾಗಿ ಬಂದಿದ್ದಕ್ಕೆ ವಧುವಿನ ಕುಟುಂಬಸ್ಥರು ತಕರಾರು ತೆಗೆದಿದ್ದರು. ಈ ಮನಸ್ಥಾಪದ ನಡುವೆಯೇ ಚಿನ್ನಾಭರಣದ ವಿಚಾರ ಮುನ್ನೆಲೆಗೆ ಬಂದಿದೆ. ವಧುವಿನ ಕಡೆಯವರು 100 ಗ್ರಾಂ ಚಿನ್ನಕ್ಕೆ ಬೇಡಿಕೆ ಇಟ್ಟಿದ್ದರು, ಆದರೆ ವರನ ಕಡೆಯವರು ಕೇವಲ 30 ಗ್ರಾಂ ಚಿನ್ನ ತಂದಿದ್ದರು. ಇದರಿಂದ ಆಕ್ರೋಶಗೊಂಡ ವಧುವಿನ ಕುಟುಂಬಸ್ಥರು ಮದುವೆಯೇ ಬೇಡ ಎಂದು ಗಲಾಟೆ ಆರಂಭಿಸಿದ್ದಾರೆ.
ಮರ್ಮಾಂಗಕ್ಕೆ ಒದ್ದು ಚಾಕು ಇರಿತ
ಬುಧವಾರ ಮುಂಜಾನೆ ವರನ ಪರವಾಗಿ ಸಂಬಂಧಿ ಮೊಹಮ್ಮದ್ ಕೈಸರ್ ರಾಜಿ ಮಾತುಕತೆಗೆ ತೆರಳಿದ್ದಾರೆ. ಈ ವೇಳೆ ತಮಿಳುನಾಡಿನಿಂದ ಬಂದಿದ್ದ ವಧುವಿನ ಸಂಬಂಧಿಕರು ರೊಚ್ಚಿಗೆದ್ದು ಕೈಸರ್ ಅವರ ಮರ್ಮಾಂಗಕ್ಕೆ ಒದ್ದು, ಚಾಕುವಿನಿಂದ ಇರಿದು ಹಲ್ಲೆ ನಡೆಸಿದ್ದಾರೆ. ಜಗಳ ವಿಕೋಪಕ್ಕೆ ತಿರುಗಿ ವರನ ಸಂಬಂಧಿಗಳಾದ ಸಮೀರ್ ಅಯಾಜ್, ಶೋಯೆಬ್ ಹಾಗೂ ವಧುವಿನ ಕಡೆಯ ಫೈರೋಜ್ ಖಾನ್, ಅಬ್ದುಲ್ ವಾಹೀದ್ ಮತ್ತು ಅಬ್ದುಲ್ ಆರೀಫ್ ಮೇಲೂ ಹಲ್ಲೆ ನಡೆದಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…