ಚಾಮರಾಜನಗರ

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು ಇರಿತದಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲದ ಆರ್.​ಎಸ್ ಫಂಕ್ಷನ್ ಹಾಲ್‌ನಲ್ಲಿ ನಡೆದಿದೆ.

ಕೇವಲ 70 ಗ್ರಾಂ ಚಿನ್ನದ ವ್ಯತ್ಯಾಸಕ್ಕಾಗಿ ವಧು-ವರರ ಕಡೆಯವರು ಬೀದಿಯಲ್ಲಿ ಬಡಿದಾಡಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಚಾಕುವಿನಿಂದ ಇರಿದು, ಮರ್ಮಾಂಗಕ್ಕೆ ಒದ್ದು ಹಲ್ಲೆ ಮಾಡಲಾಗಿದ್ದು, ಸದ್ಯ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಗಾಯಾಗಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊಳ್ಳೇಗಾಲದ ಆರ್​.ಎಸ್ ಫಂಕ್ಷನ್ ಹಾಲ್‌ನಲ್ಲಿ ನಡೆದಿದ್ದೇನು?
ಮುದಾಸಿರ್ ಮತ್ತು ಗುಲ್ನಾಜ್ ಭಾನು ಎಂಬವರ ವಿವಾಹ ಇಂದು (ಏಪ್ರಿಲ್ 29) ನಿಶ್ಚಯವಾಗಿತ್ತು. ಆದರೆ ಮಂಗಳವಾರ ರಾತ್ರಿ ನಡೆದ ಅರಶಿಣ ಶಾಸ್ತ್ರದ ವೇಳೆ ವರನ ಕಡೆಯವರು ಒಂದೂವರೆ ಗಂಟೆ ತಡವಾಗಿ ಬಂದಿದ್ದಕ್ಕೆ ವಧುವಿನ ಕುಟುಂಬಸ್ಥರು ತಕರಾರು ತೆಗೆದಿದ್ದರು. ಈ ಮನಸ್ಥಾಪದ ನಡುವೆಯೇ ಚಿನ್ನಾಭರಣದ ವಿಚಾರ ಮುನ್ನೆಲೆಗೆ ಬಂದಿದೆ. ವಧುವಿನ ಕಡೆಯವರು 100 ಗ್ರಾಂ ಚಿನ್ನಕ್ಕೆ ಬೇಡಿಕೆ ಇಟ್ಟಿದ್ದರು, ಆದರೆ ವರನ ಕಡೆಯವರು ಕೇವಲ 30 ಗ್ರಾಂ ಚಿನ್ನ ತಂದಿದ್ದರು. ಇದರಿಂದ ಆಕ್ರೋಶಗೊಂಡ ವಧುವಿನ ಕುಟುಂಬಸ್ಥರು ಮದುವೆಯೇ ಬೇಡ ಎಂದು ಗಲಾಟೆ ಆರಂಭಿಸಿದ್ದಾರೆ.

ಮರ್ಮಾಂಗಕ್ಕೆ ಒದ್ದು ಚಾಕು ಇರಿತ
ಬುಧವಾರ ಮುಂಜಾನೆ ವರನ ಪರವಾಗಿ ಸಂಬಂಧಿ ಮೊಹಮ್ಮದ್ ಕೈಸರ್ ರಾಜಿ ಮಾತುಕತೆಗೆ ತೆರಳಿದ್ದಾರೆ. ಈ ವೇಳೆ ತಮಿಳುನಾಡಿನಿಂದ ಬಂದಿದ್ದ ವಧುವಿನ ಸಂಬಂಧಿಕರು ರೊಚ್ಚಿಗೆದ್ದು ಕೈಸರ್ ಅವರ ಮರ್ಮಾಂಗಕ್ಕೆ ಒದ್ದು, ಚಾಕುವಿನಿಂದ ಇರಿದು ಹಲ್ಲೆ ನಡೆಸಿದ್ದಾರೆ. ಜಗಳ ವಿಕೋಪಕ್ಕೆ ತಿರುಗಿ ವರನ ಸಂಬಂಧಿಗಳಾದ ಸಮೀರ್ ಅಯಾಜ್, ಶೋಯೆಬ್ ಹಾಗೂ ವಧುವಿನ ಕಡೆಯ ಫೈರೋಜ್ ಖಾನ್, ಅಬ್ದುಲ್ ವಾಹೀದ್ ಮತ್ತು ಅಬ್ದುಲ್ ಆರೀಫ್ ಮೇಲೂ ಹಲ್ಲೆ ನಡೆದಿದೆ.

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

2 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

2 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

3 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

5 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

8 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

8 hours ago