ಚಾಮರಾಜನಗರ

ಮದ್ಯದ ಅಮಲಿನಲ್ಲಿ ಗಲಾಟೆ: ಯುವಕನ ಹತ್ಯೆ

ಗುಂಡ್ಲುಪೇಟೆ: ಪಟ್ಟಣದ ಊಟಿ-ಮೈಸೂರು ಮುಖ್ಯರಸ್ತೆಯ ಬದಿಯಲ್ಲಿರುವ ಮದ್ದಾನೇಶ್ವರ ಶಾಲೆ ಕಾಂಪೌಂಡ್ ಬಳಿ ಮದ್ಯದ ಅಮಲಿನಲ್ಲಿ ಯುವಕರ ನಡುವೆ ಗಲಾಟೆ ನಡೆದಿದ್ದು, ಯುವಕನೊಬ್ಬ ಕೊಲೆಯಾಗಿದ್ದಾನೆ.

ಪಟ್ಟಣದ ನಾಯಕರ ಬೀದಿಯ ಲೇಟ್ ನಾಗೇಶ್ ಎಂಬುವರ ಪುತ್ರ ಶಿವು (36) ಕೊಲೆಯಾದವನು. ಗಾರೆ ಕೆಲಸ ಮಾಡಿಕೊಂಡಿದ್ದ ಶಿವು ಪಟ್ಟಣದ ಜನತಾ ಕಾಲೋನಿಯಲ್ಲಿ ವಾಸವಿದ್ದನು.

ಸೋಮವಾರ ರಾತ್ರಿ ಮದ್ಯ ಸೇವಿಸಿ ಬರಲು ಮನೆಯಿಂದ ಮದ್ಯದಂಗಡಿಗೆ ತೆರಳಿದ್ದಾನೆ. ತಡರಾತ್ರಿ ಕೆಲವು ಯುವಕರ ಜೊತೆ ಗಲಾಟೆ ನಡೆದಿದ್ದು, ಕಲ್ಲು, ದೊಣ್ಣೆಯಿಂದ ಎದೆ, ಗಡ್ಡ, ಕಿವಿ ಭಾಗಕ್ಕೆ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ. ಪರಿಣಾಮ ರಕ್ತ ಸ್ರಾವವಾಗುತಿತ್ತು. ಗಾಯಗೊಂಡಿದ್ದ ಶಿವು ಮನೆಗೆ ಬಂದು ಯಾರೋ ಇಬ್ಬರು ಯುವಕರು ಹೊಡೆದರು ಎಂದು ಹೇಳಿದ. ನಂತರ ಹೊಟ್ಟೆನೋವು, ಎದೆ ನೋವು ಎಂದು ನರಳಿ ಪ್ರಾಣಬಿಟ್ಟನು ಎಂದು ಮೃತನ ಪೋಷಕರು ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಹಾಗೂ ಇತರರು ಭೇಟಿ ನೀಡಿ ಪರಿಶೀಲಿಸಿದರು.

ಬಂಧನ; ಶಿವು ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ ಎಂಬ ಆರೋಪ ಮೇಲೆ ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಮಹಮ್ಮದ್ ಜಿಯಾವುದ್ದಿನ್ ಎಂಬವರ ಪುತ್ರ ಮಹಮ್ಮದ್ ನಿಜಾಮುದ್ದಿನ್ (30) ಎಂಬಾತನನ್ನು ಪಟ್ಟಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಈತ ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ.

ಶವವಿಟ್ಟು ಪ್ರತಿಭಟನೆ; ಮೃತ ಸಂಬಂಧಿಕರು ಹಾಗೂ ಬಡಾವಣೆಯ ಮುಖಂಡರು ಮೃತ ಶಿವು ಶವವನ್ನು ಪಟ್ಟಣ ಪೊಲೀಸ್ ಠಾಣೆ ಎದುರಿಗೆ ಸಾಗಿಸಿ ನ್ಯಾಯ ದೊರಕಿಸಬೇಕು. ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸೋಮವಾರ ರಾತ್ರಿ ಮುಸ್ಲಿಂ ಯುವಕರ ಗುಂಪು ಶಿವು ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದರಿಂದ ಆತ ಸತ್ತಿದ್ದಾನೆ. ಆದರೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶಿವು ಎದೆ ನೋವಿನಿಂದ ಸತ್ತಿದ್ದಾನೆ ಎಂದು ಪೋಸ್ಟ್ ಹಾಕಿದ್ದಾರೆ. ನಂತರ ಡಿಲೀಟ್ ಮಾಡಿರುವುದು ಸರಿಯಲ್ಲ ಎಂದು ಖಂಡಿಸಿದರು.

ಶಿವು ಮೇಲೆ 15 ಯುವಕರ ಗುಂಪು ಹಲ್ಲೆ ನಡೆಸಿದೆ. ಅವರನ್ನು ಕೂಡಲೇ ಬಂಧಿಸಬೇಕು. ಮೃತನ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಸ್ಥಳದಲ್ಲೇ ಇದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಮಾನವಿರುವವರ ವಿರುದ್ಧ ದೂರು ನೀಡಿ ಕ್ರಮ ಕೈಗೊಳ್ಳುತ್ತೇನೆ ಎಂದರು. ನೀವು ಕೊಲೆಗಾರರ ಪರ ನಿಂತಿದ್ದೀರಾ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.

ನಂತರ ಸಮಾಜ ಕಲ್ಯಾಣ ಇಲಾಖೆಯಿಂದ ಮೃತ ಶಿವು ಕುಟುಂಬಕ್ಕೆ 8.25 ಲಕ್ಷ ರೂ. ಪರಿಹಾರದ ಚೆಕ್ ನೀಡಲಾಯಿತು. ಉದ್ಯೋಗದ ಭರವಸೆ ನೀಡಿದ ಮೇಲೆ ಪ್ರತಿಭಟನೆ ಕೈ ಬಿಟ್ಟರು. ನಂತರ ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.

ಆಂದೋಲನ ಡೆಸ್ಕ್

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

2 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

4 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

5 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

6 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

9 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

10 hours ago