ಚಾಮರಾಜನಗರ

ಮದ್ಯದ ಅಮಲಿನಲ್ಲಿ ಗಲಾಟೆ: ಯುವಕನ ಹತ್ಯೆ

ಗುಂಡ್ಲುಪೇಟೆ: ಪಟ್ಟಣದ ಊಟಿ-ಮೈಸೂರು ಮುಖ್ಯರಸ್ತೆಯ ಬದಿಯಲ್ಲಿರುವ ಮದ್ದಾನೇಶ್ವರ ಶಾಲೆ ಕಾಂಪೌಂಡ್ ಬಳಿ ಮದ್ಯದ ಅಮಲಿನಲ್ಲಿ ಯುವಕರ ನಡುವೆ ಗಲಾಟೆ ನಡೆದಿದ್ದು, ಯುವಕನೊಬ್ಬ ಕೊಲೆಯಾಗಿದ್ದಾನೆ.

ಪಟ್ಟಣದ ನಾಯಕರ ಬೀದಿಯ ಲೇಟ್ ನಾಗೇಶ್ ಎಂಬುವರ ಪುತ್ರ ಶಿವು (36) ಕೊಲೆಯಾದವನು. ಗಾರೆ ಕೆಲಸ ಮಾಡಿಕೊಂಡಿದ್ದ ಶಿವು ಪಟ್ಟಣದ ಜನತಾ ಕಾಲೋನಿಯಲ್ಲಿ ವಾಸವಿದ್ದನು.

ಸೋಮವಾರ ರಾತ್ರಿ ಮದ್ಯ ಸೇವಿಸಿ ಬರಲು ಮನೆಯಿಂದ ಮದ್ಯದಂಗಡಿಗೆ ತೆರಳಿದ್ದಾನೆ. ತಡರಾತ್ರಿ ಕೆಲವು ಯುವಕರ ಜೊತೆ ಗಲಾಟೆ ನಡೆದಿದ್ದು, ಕಲ್ಲು, ದೊಣ್ಣೆಯಿಂದ ಎದೆ, ಗಡ್ಡ, ಕಿವಿ ಭಾಗಕ್ಕೆ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ. ಪರಿಣಾಮ ರಕ್ತ ಸ್ರಾವವಾಗುತಿತ್ತು. ಗಾಯಗೊಂಡಿದ್ದ ಶಿವು ಮನೆಗೆ ಬಂದು ಯಾರೋ ಇಬ್ಬರು ಯುವಕರು ಹೊಡೆದರು ಎಂದು ಹೇಳಿದ. ನಂತರ ಹೊಟ್ಟೆನೋವು, ಎದೆ ನೋವು ಎಂದು ನರಳಿ ಪ್ರಾಣಬಿಟ್ಟನು ಎಂದು ಮೃತನ ಪೋಷಕರು ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಹಾಗೂ ಇತರರು ಭೇಟಿ ನೀಡಿ ಪರಿಶೀಲಿಸಿದರು.

ಬಂಧನ; ಶಿವು ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ ಎಂಬ ಆರೋಪ ಮೇಲೆ ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಮಹಮ್ಮದ್ ಜಿಯಾವುದ್ದಿನ್ ಎಂಬವರ ಪುತ್ರ ಮಹಮ್ಮದ್ ನಿಜಾಮುದ್ದಿನ್ (30) ಎಂಬಾತನನ್ನು ಪಟ್ಟಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಈತ ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ.

ಶವವಿಟ್ಟು ಪ್ರತಿಭಟನೆ; ಮೃತ ಸಂಬಂಧಿಕರು ಹಾಗೂ ಬಡಾವಣೆಯ ಮುಖಂಡರು ಮೃತ ಶಿವು ಶವವನ್ನು ಪಟ್ಟಣ ಪೊಲೀಸ್ ಠಾಣೆ ಎದುರಿಗೆ ಸಾಗಿಸಿ ನ್ಯಾಯ ದೊರಕಿಸಬೇಕು. ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸೋಮವಾರ ರಾತ್ರಿ ಮುಸ್ಲಿಂ ಯುವಕರ ಗುಂಪು ಶಿವು ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದರಿಂದ ಆತ ಸತ್ತಿದ್ದಾನೆ. ಆದರೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶಿವು ಎದೆ ನೋವಿನಿಂದ ಸತ್ತಿದ್ದಾನೆ ಎಂದು ಪೋಸ್ಟ್ ಹಾಕಿದ್ದಾರೆ. ನಂತರ ಡಿಲೀಟ್ ಮಾಡಿರುವುದು ಸರಿಯಲ್ಲ ಎಂದು ಖಂಡಿಸಿದರು.

ಶಿವು ಮೇಲೆ 15 ಯುವಕರ ಗುಂಪು ಹಲ್ಲೆ ನಡೆಸಿದೆ. ಅವರನ್ನು ಕೂಡಲೇ ಬಂಧಿಸಬೇಕು. ಮೃತನ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಸ್ಥಳದಲ್ಲೇ ಇದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಮಾನವಿರುವವರ ವಿರುದ್ಧ ದೂರು ನೀಡಿ ಕ್ರಮ ಕೈಗೊಳ್ಳುತ್ತೇನೆ ಎಂದರು. ನೀವು ಕೊಲೆಗಾರರ ಪರ ನಿಂತಿದ್ದೀರಾ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.

ನಂತರ ಸಮಾಜ ಕಲ್ಯಾಣ ಇಲಾಖೆಯಿಂದ ಮೃತ ಶಿವು ಕುಟುಂಬಕ್ಕೆ 8.25 ಲಕ್ಷ ರೂ. ಪರಿಹಾರದ ಚೆಕ್ ನೀಡಲಾಯಿತು. ಉದ್ಯೋಗದ ಭರವಸೆ ನೀಡಿದ ಮೇಲೆ ಪ್ರತಿಭಟನೆ ಕೈ ಬಿಟ್ಟರು. ನಂತರ ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.

ಆಂದೋಲನ ಡೆಸ್ಕ್

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

6 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

7 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

7 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

8 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

9 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

9 hours ago