ಚಾಮರಾಜನಗರ

ವೀರಶೈವ ಸಂಪ್ರದಾಯದಂತೆ ನೆರವೇರಿದ ಸಾಲೂರು ಮಠದ ಗುರುಸ್ವಾಮಿಗಳ ಅಂತ್ಯಕ್ರಿಯೆ

ಹನೂರು: ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದ 17ನೇ ಪೀಠಾಧ್ಯಕ್ಷರಾದ ಗುರುಸ್ವಾಮಿ ರವರು ನಿಧನರಾದ ಹಿನ್ನೆಲೆ ಸುತ್ತೂರು ಶ್ರೀ ದೇಶಿ ಕೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ ವೀರಶೈವ ಸಂಪ್ರದಾಯದಂತೆ ವಿಧಿ ವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದ ಆವರಣದಲ್ಲಿ ಇದುವರೆಗೂ ಪೀಠಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿ ಮೃತಪಟ್ಟಿರುವ ಸ್ವಾಮಿಜಿರವರ ಗದ್ದುಗೆಯ ಸಮೀಪದಲ್ಲಿಯೇ ಶ್ರೀ ಪಟ್ಟದ ಗುರುಸ್ವಾಮಿಗಳ ಅಂತ್ಯಕ್ರಿಯೆಯನ್ನು ಶಾಸ್ತ್ರೋತ್ತವಾಗಿ ನೆರವೇರಿಸಲಾಯಿತು.

ಮಠದ ಗದ್ದಿಗೆ ಆವರಣದಲ್ಲಿ ನಾಲ್ಕು ವರ್ಷಗಳ ಹಿಂದೆಯೇ ಕ್ರಿಯಾ ಸಮಾಧಿ ನಿರ್ಮಾಣ ಮಾಡಿ ಮರಳು ಮುಚ್ಚಲಾಗಿತ್ತು. ಇಂದು ಪಟ್ಟದ ಗುರುಸ್ವಾಮಿಗಳು ನಿಧನರಾದ ಹಿನ್ನೆಲೆ ಮರಳು ತೆರವುಗೊಳಿಸಿ ಕ್ರಿಯಾ ಸಮಾಧಿಗೆ ಬಣ್ಣ ಬಳಿದು, ಗದ್ದುಗೆಯ ಮೇಲ್ಭಾಗದಲ್ಲಿ ಹಸಿರು ಚಪರ ಹಾಕಿ ವಿವಿಧ ಫಲ ಪುಷ್ಪಗಳಿಂದ ಅಲಂಕಾರ ಮಾಡಿ ವಿಧಿ ವಿಧಾನಗಳೊಂದಿಗೆ ವೀರಶೈವ ಸಂಪ್ರದಾಯದಂತೆ ವಿಶೇಷ ಪೂಜೆ ಸಲ್ಲಿಸಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಶ್ರೀ ಸುತ್ತೂರು ಮಠದ ದೇಶಿಕೇಂದ್ರ ಮಹಾಸ್ವಾಮಿಗಳು, ಕನಕಪುರ ದೇಗುಲ ಮಠದ ಶ್ರೀಗಳ ನೇತೃತ್ವದಲ್ಲಿ ವಿವಿಧ ಗ್ರಾಮಗಳ ನೂರಾರು ಮಠಾಧೀಶರ ಸಮ್ಮುಖದಲ್ಲಿ ಮಂತ್ರ ಜಪಿಸಿ ಸುಮಾರು ಎರಡು ಗಂಟೆಗಳಿಗೂ ಹೆಚ್ಚು ಕಾಲ ಕ್ರಿಯಾ ಸಮಾಧಿಗೆ ಪೂಜೆ ಸಲ್ಲಿಸಲಾಯಿತು.

ಶ್ರೀಗಳ ಮೆರವಣಿಗೆ: ಸಾಲೂರು ಬೃಹನ್ ಮಠದ 17ನೇ ಪೀಠಾಧ್ಯಕ್ಷರಾದ ಪಟ್ಟದ ಗುರುಸ್ವಾಮಿಗಳು ನಿಧನರಾದ ಹಿನ್ನೆಲೆ ಟ್ರ್ಯಾಕ್ಟರ್ ಗೆ ಫಲ ಪುಷ್ಪಗಳಿಂದ ಅಲಂಕಾರ ಮಾಡಿ ಗದ್ದುಗೆ ನಿರ್ಮಾಣ ಮಾಡಿ ಶ್ರೀಗಳನ್ನು ಕೂರಿಸಿ ಮನೆ ಮಹದೇಶ್ವರ ಬೆಟ್ಟದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಮೆರವಣಿಗೆಯಲ್ಲಿ ಹಾಲಿ ಶಾಸಕ ಎಂಆರ್ ಮಂಜುನಾಥ್ ಹಾಗೂ ಮಾಜಿ ಶಾಸಕ ಆರ್ ನರೇಂದ್ರ ಜೊತೆಗೂಡಿ ಮೆರವಣಿಗೆಯಲ್ಲಿ ಸಾಗಿದರು. ಈ ವೇಳೆ ಸಾವಿರಾರು ಭಕ್ತರು ಮೆರವಣಿಗೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ಮಾಜಿ ಶಾಸಕ ಆರ್ ನರೇಂದ್ರ ನೇತೃತ್ವ: ಸಾಲೂರು ಬೃಹನ್ ಮಠದ ಪೀಠಾಧ್ಯಕ್ಷರಾದ ಗುರುಸ್ವಾಮಿಗಳು ನಿಧನರಾದ ಹಿನ್ನೆಲೆ ಮಾಜಿ ಶಾಸಕ ಆರ್ ನರೇಂದ್ರ ಮಂಗಳವಾರ ಬೆಳಗ್ಗೆಯೇ ಶ್ರೀಮಠಕ್ಕೆ ತೆರಳಿ ಅಂತಿಮ ದರ್ಶನ ಪಡೆದ ನಂತರ ಅಂತ್ಯಕ್ರಿಯೆಗೆ ಬೇಕಾದ ಎಲ್ಲಾ ವ್ಯವಸ್ಥೆಯನ್ನು ಮುಂದೆ ನಿಂತು ಅಚ್ಚುಕಟ್ಟಾಗಿ ನಿಭಾಯಿಸಿದರು.

ಅಂತಿಮ ದರ್ಶನ ಪಡೆದ ಗಣ್ಯರು: ಸ್ಥಳೀಯ ಶಾಸಕರಾದ ಎಂ ಆರ್ ಮಂಜುನಾಥ್ , ಗಣೇಶ್ ಪ್ರಸಾದ್ ಮಾಜಿ ಶಾಸಕಿ ಪರಿಮಳ ನಾಗಪ್ಪ, ಕಾಡಾ ಅಧ್ಯಕ್ಷ ಮರಿಸ್ವಾಮಿ, ಜಿಲ್ಲಾಧಿಕಾರಿ ಸಿಟಿ ಶಿಲ್ಪನಾಗ್, ಸಿಇಒ ಮೋನೋರೋತ್, ಎಸ್ಪಿ ಡಾ. ಬಿ ಟಿ ಕವಿತಾ, ಬಿಜೆಪಿ ಮುಖಂಡರಾದ ನಿಶಾಂತ್ ಸೇರಿದಂತೆ ವಿವಿಧ ಗಣ್ಯರು ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು.

ಸೂಕ್ತ ಪೊಲೀಸ್ ಬಂದೋಬಸ್ತ್: ಮಠದ ಭಕ್ತಾದಿಗಳು ಹಾಗೂ ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆಯಿದ್ದ ಹಿನ್ನೆಲೆ ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಧರ್ಮೇಂದ್ರ ಮೂವರು ಇನ್ಸ್ಪೆಕ್ಟರ್ , ಸಬ್ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಶ್ರೀಗಳ ಅಂತಿಮ ದರ್ಶನ ಪಡೆಯಲು ಸಕಲ ವ್ಯವಸ್ಥೆಯನ್ನು ವ್ಯವಸ್ಥಿತ ರೀತಿಯಲ್ಲಿ ಮಾಡಲಾಗಿತ್ತು.

ಆಂದೋಲನ ಡೆಸ್ಕ್

Recent Posts

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

4 mins ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

12 mins ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

24 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

24 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

24 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

24 hours ago