ಸಾಲಕ್ಕೆ ಹೆದರಿ ಅಪ್ಪ ಅಮ್ಮ ನನ್ನನ್ನ ಬಿಟ್ಟು ಹೋಗಿದ್ದಾರೆ: ಗ್ರಾಮದ ಯುವಕನ ಅಳಲು
ಚಾಮರಾಜನಗರ: ಇತ್ತೀಚೆಗೆ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿ ಹೆಚ್ಚಾಗಿದ್ದು, ಬಡವರ ಜೀವ ಹಿಂಡುತ್ತಿವೆ. ಫೈನಾನ್ಸ್ ಕಂಪನಿಗಳ ಹಾವಳಿಗಳಿಗೆ ಎಷ್ಟೋ ಜನ ತಮ್ಮ ಊರುಗಳನ್ನು ತೊರೆಯುತ್ತಿದ್ದಾರೆ. ಇದೀಗ ಇಂತದ್ದೆ ಘಟನೆ ಚಾಮರಾಜನಗರ ಜಿಲ್ಲೆಯ ಹೆಗ್ಗವಾಡಿ ಗ್ರಾಮದಲ್ಲಿ ನಡೆದಿದೆ. ಫೈನಾನ್ಸ್ ಹಾವಳಿಗೆ ಬೇಸತ್ತು ಬರೋಬ್ಬರಿ 100 ಕುಟುಂಬಗಳು ಊರು ತೊರೆದಿವೆ.
ಯಾವಾಗಲೂ ಜನರಿಂದ ತುಂಬಿದ್ದ ಊರು, ಇದೀಗ ಬರಿದಾಗಿ ಕಾಣುತ್ತಿದೆ. ಮನೆಗೆಲ್ಲಾ ಬೀಗ ಹಾಕಿ ಕುಟುಂಬಗಳು ಊರು ತೊರೆದಿವೆ. ಹಲವೆಡೆ ಪೋಷಕರು ತಮ್ಮ ಮಕ್ಕಳನ್ನು ಶಾಲೆ ಬಿಡಿಸಿ ಕರೆದೊಯ್ದಿದ್ದಾರೆ. ಸಾಲದ ಹೊಡೆತಕ್ಕೆ ಮಕ್ಕಳ ವಿದ್ಯಾಭ್ಯಾಸವೇ ಮೊಟಕುಗೊಂಡಿದೆ. ಎಲ್ಲಿ ಹೋಗಿದ್ದಾರೆ ಎಂಬುದೆ ತೋಚುತ್ತಿಲ್ಲ ಎನ್ನುತ್ತಾರೆ ಅಳಿದುಳಿದ ಜನರು.
ಮೈಕ್ರೋ ಫೈನಾನ್ಸ್ ಕಂಪನಿಗಳು ಆರಂಭದಲ್ಲಿ ಸಾಲ ನೀಡಲು ಪುಸಲಾಯಿಸುತ್ತಾರೆ. ಸಾಲ ನೀಡಿದ ನಂತರ ಹಣ ಕಟ್ಟಲು ಒಂದು ದಿನ ತಡವಾದರು ತುಂಬಾ ತೊಂದರೆ ನೀಡುತ್ತಾರೆ. ಮನೆಗೆ ಬಂದು ಕೆಟ್ಟ ಮಾತುಗಳನ್ನು ಆಡುತ್ತಾರೆ. ಇವರ ಕಾಟ ತಾಳಲಾರದೆ ನಮ್ಮ ತಂದೆ-ತಾಯಿ ಊರು ತೊರೆದಿದ್ದಾರೆ ಎಂದು ಗ್ರಾಮದ ಯುವಕ ಅಳಲು ತೋಡಿಕೊಂಡಿದ್ದಾನೆ.
ತಮ್ಮ ತಂದೆ-ತಾಯಿ ಊರು ತೊರೆದಿರುವುದಕ್ಕೆ ಕಣ್ಣೀರು ಹಾಕುತ್ತಾ, ಫೈನಾನ್ಸ್ ಕಂಪನಿಗಳಿಂದ ನಮಗೆ ಮುಕ್ತಿ ಕೊಡಿಸಿ. ಸರ್ಕಾರ ನನಗೆ ಏನಾದರೂ ಅನುಮತಿ ನೀಡಿದರೆ ನನ್ನ ಕಿಡ್ನಿ ಮಾರಿ ಆದರೂ ನಾನು ಸಾಲ ತೀರಿಸುತ್ತೇನೆ. ನಮ್ಮ ತಂದೆ ತಾಯಿ ಇಲ್ಲದೇ ನಾನು ನಮ್ಮ ಚಿಕ್ಕಪ್ಪನ ಮನೆಯಲ್ಲಿ ಇರುವಂತಹ ಪರಿಸ್ಥಿತಿ ಬಂದಿದೆ ಎಂದು ಯುವಕ ಅಳಲು ತೋಡಿಕೊಂಡನು.
ಗ್ರಾಮದ ಶ್ರೀಕಂಠ ಎಂಬಾತ ಎರಡು ಕಂಪನಿಗಳಿಂದ ಒಟ್ಟು 3 ಲಕ್ಷ ಸಾಲ ಪಡೆದಿದ್ದಾನೆ. ನಂತರ ಸಾಲ ಕಟ್ಟಲು ಸ್ವಲ್ಪ ಸಮಯ ತಡವಾದ ಕಾರಣ 3 ಲಕ್ಷಕ್ಕೆ ಬಡ್ಡಿ ಸೇರಿಸಿ ಒಟ್ಟು 6 ಲಕ್ಷ ಕಟ್ಟಬೇಕೆಂದು ಕಂಪನಿಯವರು ಆತನಿಗೆ ತೊಂದರೆ ನೀಡಿದ್ದಾರೆ. ಇದರಿಂದ ಆ ಕುಟುಂಬ ಊರು ತೊರೆದಿದೆ. ಇದೇ ರೀತಿ ಊರಿನ 100ಕ್ಕೂ ಹೆಚ್ಚು ಕುಟಂಬಗಳು ಸಾಲ ಬಾಧೆ ತಾಳಲಾಗದೆ ಊರು ತೊರೆದಿದೆ.
ಸಿದ್ದಾಪುರ : ಕಾಡುಕೋಣ ಡಿಕ್ಕಿ ಹೊಡೆದ ಪರಿಣಾಮ ವಾಹನ ಪಲ್ಟಿಯಾದ ಘಟನೆ ಸಮೀಪದ ಕರಡಿಗೋಡು ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.…
ಬೆಂಗಳೂರು : ಇಂದಿನ ಯುವ ಜನಾಂಗದಲ್ಲಿ ಹೆಚ್ಚುತ್ತಿರುವ ರೀಲ್ಸ್ ಹುಚ್ಚನ್ನು ಎನ್ಕ್ಯಾಶ್ ಮಾಡಿಕೊಳ್ಳುವ ಹೊಸ ಐಡಿಯಾವನ್ನು ಮುಜರಾಯಿ ಇಲಾಖೆ ಕಂಡುಕೊಂಡಿದೆ.…
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದ ಪ್ರಮುಖ ದೂರುದಾರ ಮತ್ತು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು…
ಬೆಂಗಳೂರು : ಮುಂಬರುವ ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಾಗಲಿದ್ದು, ಪ್ರತಿ ಯೂನಿಟ್ಗೆ 12ರಿಂದ 15 ಪೈಸೆ ಹೆಚ್ಚುವರಿ ಶುಲ್ಕ…
ಮೈಸೂರು : ಸಂಘ ಸಂಸ್ಥೆ, ಸಂಘಟನೆಗಳು, ಸಾರ್ವಜನಿಕರು ಹಾಗೂ ಇತರರು ಸಾರ್ವಜನಿಕ ಪ್ರದೇಶದಲ್ಲಿ ಪ್ಲೇಕ್ಸ್ ಮತ್ತು ಬ್ಯಾನರ್ ಗಳನ್ನು ಅಳವಡಿಸಬೇಕಾದ್ದಲ್ಲಿ…
ಬೆಂಗಳೂರು : ಬಾಗಲಕೋಟೆಯ ಹಳೆಯ ನಗರದಲ್ಲಿ ಚತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆಯ ವೇಳೆ ನಡೆದ…