ಚಾಮರಾಜನಗರ

ಫೈನಾನ್ಸ್‌ ಹಾವಳಿ | ಊರು ತೊರೆದೆ 100ಕ್ಕೂ ಅಧಿಕ ಕುಟುಂಬ!

ಸಾಲಕ್ಕೆ ಹೆದರಿ ಅಪ್ಪ ಅಮ್ಮ ನನ್ನನ್ನ ಬಿಟ್ಟು ಹೋಗಿದ್ದಾರೆ: ಗ್ರಾಮದ ಯುವಕನ ಅಳಲು 

ಚಾಮರಾಜನಗರ: ಇತ್ತೀಚೆಗೆ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಂಪನಿಗಳ ಹಾವಳಿ ಹೆಚ್ಚಾಗಿದ್ದು, ಬಡವರ ಜೀವ ಹಿಂಡುತ್ತಿವೆ.  ಫೈನಾನ್ಸ್‌ ಕಂಪನಿಗಳ ಹಾವಳಿಗಳಿಗೆ ಎಷ್ಟೋ ಜನ ತಮ್ಮ ಊರುಗಳನ್ನು ತೊರೆಯುತ್ತಿದ್ದಾರೆ. ಇದೀಗ ಇಂತದ್ದೆ ಘಟನೆ ಚಾಮರಾಜನಗರ ಜಿಲ್ಲೆಯ ಹೆಗ್ಗವಾಡಿ ಗ್ರಾಮದಲ್ಲಿ ನಡೆದಿದೆ. ಫೈನಾನ್ಸ್‌ ಹಾವಳಿಗೆ ಬೇಸತ್ತು  ಬರೋಬ್ಬರಿ 100 ಕುಟುಂಬಗಳು ಊರು ತೊರೆದಿವೆ.

ಯಾವಾಗಲೂ ಜನರಿಂದ  ತುಂಬಿದ್ದ ಊರು, ಇದೀಗ ಬರಿದಾಗಿ ಕಾಣುತ್ತಿದೆ. ಮನೆಗೆಲ್ಲಾ ಬೀಗ ಹಾಕಿ ಕುಟುಂಬಗಳು ಊರು ತೊರೆದಿವೆ. ಹಲವೆಡೆ ಪೋಷಕರು ತಮ್ಮ ಮಕ್ಕಳನ್ನು ಶಾಲೆ ಬಿಡಿಸಿ  ಕರೆದೊಯ್ದಿದ್ದಾರೆ. ಸಾಲದ ಹೊಡೆತಕ್ಕೆ ಮಕ್ಕಳ ವಿದ್ಯಾಭ್ಯಾಸವೇ ಮೊಟಕುಗೊಂಡಿದೆ. ಎಲ್ಲಿ ಹೋಗಿದ್ದಾರೆ ಎಂಬುದೆ ತೋಚುತ್ತಿಲ್ಲ ಎನ್ನುತ್ತಾರೆ ಅಳಿದುಳಿದ ಜನರು.

ಮೈಕ್ರೋ ಫೈನಾನ್ಸ್‌ ಕಂಪನಿಗಳು ಆರಂಭದಲ್ಲಿ ಸಾಲ ನೀಡಲು ಪುಸಲಾಯಿಸುತ್ತಾರೆ. ಸಾಲ ನೀಡಿದ ನಂತರ ಹಣ ಕಟ್ಟಲು ಒಂದು ದಿನ ತಡವಾದರು ತುಂಬಾ ತೊಂದರೆ ನೀಡುತ್ತಾರೆ. ಮನೆಗೆ ಬಂದು ಕೆಟ್ಟ ಮಾತುಗಳನ್ನು ಆಡುತ್ತಾರೆ. ಇವರ ಕಾಟ ತಾಳಲಾರದೆ ನಮ್ಮ ತಂದೆ-ತಾಯಿ ಊರು ತೊರೆದಿದ್ದಾರೆ ಎಂದು ಗ್ರಾಮದ ಯುವಕ ಅಳಲು ತೋಡಿಕೊಂಡಿದ್ದಾನೆ.

ತಮ್ಮ ತಂದೆ-ತಾಯಿ ಊರು ತೊರೆದಿರುವುದಕ್ಕೆ ಕಣ್ಣೀರು ಹಾಕುತ್ತಾ,  ಫೈನಾನ್ಸ್‌ ಕಂಪನಿಗಳಿಂದ ನಮಗೆ ಮುಕ್ತಿ ಕೊಡಿಸಿ. ಸರ್ಕಾರ ನನಗೆ ಏನಾದರೂ ಅನುಮತಿ ನೀಡಿದರೆ ನನ್ನ ಕಿಡ್ನಿ ಮಾರಿ ಆದರೂ ನಾನು ಸಾಲ ತೀರಿಸುತ್ತೇನೆ. ನಮ್ಮ ತಂದೆ ತಾಯಿ ಇಲ್ಲದೇ ನಾನು ನಮ್ಮ ಚಿಕ್ಕಪ್ಪನ ಮನೆಯಲ್ಲಿ ಇರುವಂತಹ ಪರಿಸ್ಥಿತಿ ಬಂದಿದೆ ಎಂದು ಯುವಕ ಅಳಲು ತೋಡಿಕೊಂಡನು.

ಗ್ರಾಮದ ಶ್ರೀಕಂಠ ಎಂಬಾತ ಎರಡು ಕಂಪನಿಗಳಿಂದ ಒಟ್ಟು 3 ಲಕ್ಷ ಸಾಲ ಪಡೆದಿದ್ದಾನೆ. ನಂತರ ಸಾಲ ಕಟ್ಟಲು ಸ್ವಲ್ಪ ಸಮಯ ತಡವಾದ ಕಾರಣ 3 ಲಕ್ಷಕ್ಕೆ ಬಡ್ಡಿ ಸೇರಿಸಿ ಒಟ್ಟು 6 ಲಕ್ಷ ಕಟ್ಟಬೇಕೆಂದು ಕಂಪನಿಯವರು ಆತನಿಗೆ ತೊಂದರೆ ನೀಡಿದ್ದಾರೆ. ಇದರಿಂದ ಆ ಕುಟುಂಬ ಊರು ತೊರೆದಿದೆ. ಇದೇ ರೀತಿ ಊರಿನ 100ಕ್ಕೂ ಹೆಚ್ಚು ಕುಟಂಬಗಳು ಸಾಲ ಬಾಧೆ ತಾಳಲಾಗದೆ ಊರು ತೊರೆದಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾಸರಗೋಡು| ಹಳಿ ದಾಟುವಾಗ ರೈಲು ರಿಕ್ಕಿ: ಕೊಡಗು ಮೂಲದ ಯುವಕ ಸಾವು

ಕಾಸರಗೋಡು: ಹಳಿ ದಾಟುವಾಗ ಯುವಕ ಸಾವನ್ನಪ್ಪಿರುವ ಘಟನೆ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ಜಿಲ್ಲೆ ಗೋಣಿಮಾಗೂರಿನ ಸೋಮವಾರಪುರದ ಚೆನ್ನಯ್ಯ ಅವರ…

42 seconds ago

ಉತ್ತರ ಪ್ರದೇಶದಂತೆ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆ ಧ್ವಂಸ: ಕರ್ನಾಟಕದ ವಿರುದ್ಧ ಪಿಣರಾಯಿ ವಿಜಯನ್‌ ಆಕ್ರೋಶ

ಬೆಂಗಳೂರು: ಕರ್ನಾಟಕದಲ್ಲಿ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ಕಾಂಗ್ರೆಸ್‌ ಸರ್ಕಾರದ…

9 mins ago

ಮೈಸೂರು | ಹೀಲಿಯಂ ಸ್ಫೋಟ ಪ್ರಕರಣ: ಶವಗಾರದಲ್ಲಿ ಮೃತ ಲಕ್ಷ್ಮಿಯ ಕುಟುಂಬಸ್ಥರ ಆಕ್ರಂದನ

ಮೈಸೂರು: ಅರಮನೆ ಮುಂಭಾಗ ಸಂಭವಿಸಿದ ಹೀಲಿಯಂ ಸ್ಫೋಟ ದುರಂತದಲ್ಲಿ ಮೃತಪಟ್ಟ ಬೆಂಗಳೂರಿನ ಲಕ್ಷ್ಮಿ ಅವರ ಮೃತದೇಹವನ್ನು ಶವಗಾರದಲ್ಲಿ ಇರಿಸಲಾಗಿದೆ. ಸುದ್ದಿ…

20 mins ago

ಮಂಡ್ಯ| ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮಂಡ್ಯ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವಿಸ್‌ ರಸ್ತೆಯಲ್ಲಿ…

30 mins ago

ಕಥೆಗಾರ್ತಿ, ಖ್ಯಾತ ಅನುವಾದಕಿ ಸರಿತಾ ಜ್ಞಾನಾನಂದ ನಿಧನ

ಬೆಂಗಳೂರು: ಕನ್ನಡ ಕವಯತ್ರಿ, ಬರಹಗಾರ್ತಿ ಸರಿತಾ ಜ್ಞಾನಾನಂದ ಅವರು ಆರ್‌.ಆರ್.ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲೇಖಕಿ, ಅನುವಾದಕಿಯಾಗಿದ್ದ ಸರಿತಾ ಅವರು…

1 hour ago

ಹಿರಿಯೂರು ಬಸ್‌ ದುರಂತ ಪ್ರಕರಣ: ರಾಜ್ಯ ಸರ್ಕಾರ ಫುಲ್‌ ಅಲರ್ಟ್‌

ಬೆಂಗಳೂರು: ಹೊಸ ವರ್ಷ ಹಾಗೂ ಕ್ರಿಸ್‌ಮಸ್‌ ಸಂಭ್ರಮದ ಮಧ್ಯೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಬಸ್‌ ಅಪಘಾತ ಇಡೀ…

1 hour ago