ಚಾಮರಾಜನಗರ

ಫೈನಾನ್ಸ್‌ ಹಾವಳಿ | ಊರು ತೊರೆದೆ 100ಕ್ಕೂ ಅಧಿಕ ಕುಟುಂಬ!

ಸಾಲಕ್ಕೆ ಹೆದರಿ ಅಪ್ಪ ಅಮ್ಮ ನನ್ನನ್ನ ಬಿಟ್ಟು ಹೋಗಿದ್ದಾರೆ: ಗ್ರಾಮದ ಯುವಕನ ಅಳಲು 

ಚಾಮರಾಜನಗರ: ಇತ್ತೀಚೆಗೆ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಂಪನಿಗಳ ಹಾವಳಿ ಹೆಚ್ಚಾಗಿದ್ದು, ಬಡವರ ಜೀವ ಹಿಂಡುತ್ತಿವೆ.  ಫೈನಾನ್ಸ್‌ ಕಂಪನಿಗಳ ಹಾವಳಿಗಳಿಗೆ ಎಷ್ಟೋ ಜನ ತಮ್ಮ ಊರುಗಳನ್ನು ತೊರೆಯುತ್ತಿದ್ದಾರೆ. ಇದೀಗ ಇಂತದ್ದೆ ಘಟನೆ ಚಾಮರಾಜನಗರ ಜಿಲ್ಲೆಯ ಹೆಗ್ಗವಾಡಿ ಗ್ರಾಮದಲ್ಲಿ ನಡೆದಿದೆ. ಫೈನಾನ್ಸ್‌ ಹಾವಳಿಗೆ ಬೇಸತ್ತು  ಬರೋಬ್ಬರಿ 100 ಕುಟುಂಬಗಳು ಊರು ತೊರೆದಿವೆ.

ಯಾವಾಗಲೂ ಜನರಿಂದ  ತುಂಬಿದ್ದ ಊರು, ಇದೀಗ ಬರಿದಾಗಿ ಕಾಣುತ್ತಿದೆ. ಮನೆಗೆಲ್ಲಾ ಬೀಗ ಹಾಕಿ ಕುಟುಂಬಗಳು ಊರು ತೊರೆದಿವೆ. ಹಲವೆಡೆ ಪೋಷಕರು ತಮ್ಮ ಮಕ್ಕಳನ್ನು ಶಾಲೆ ಬಿಡಿಸಿ  ಕರೆದೊಯ್ದಿದ್ದಾರೆ. ಸಾಲದ ಹೊಡೆತಕ್ಕೆ ಮಕ್ಕಳ ವಿದ್ಯಾಭ್ಯಾಸವೇ ಮೊಟಕುಗೊಂಡಿದೆ. ಎಲ್ಲಿ ಹೋಗಿದ್ದಾರೆ ಎಂಬುದೆ ತೋಚುತ್ತಿಲ್ಲ ಎನ್ನುತ್ತಾರೆ ಅಳಿದುಳಿದ ಜನರು.

ಮೈಕ್ರೋ ಫೈನಾನ್ಸ್‌ ಕಂಪನಿಗಳು ಆರಂಭದಲ್ಲಿ ಸಾಲ ನೀಡಲು ಪುಸಲಾಯಿಸುತ್ತಾರೆ. ಸಾಲ ನೀಡಿದ ನಂತರ ಹಣ ಕಟ್ಟಲು ಒಂದು ದಿನ ತಡವಾದರು ತುಂಬಾ ತೊಂದರೆ ನೀಡುತ್ತಾರೆ. ಮನೆಗೆ ಬಂದು ಕೆಟ್ಟ ಮಾತುಗಳನ್ನು ಆಡುತ್ತಾರೆ. ಇವರ ಕಾಟ ತಾಳಲಾರದೆ ನಮ್ಮ ತಂದೆ-ತಾಯಿ ಊರು ತೊರೆದಿದ್ದಾರೆ ಎಂದು ಗ್ರಾಮದ ಯುವಕ ಅಳಲು ತೋಡಿಕೊಂಡಿದ್ದಾನೆ.

ತಮ್ಮ ತಂದೆ-ತಾಯಿ ಊರು ತೊರೆದಿರುವುದಕ್ಕೆ ಕಣ್ಣೀರು ಹಾಕುತ್ತಾ,  ಫೈನಾನ್ಸ್‌ ಕಂಪನಿಗಳಿಂದ ನಮಗೆ ಮುಕ್ತಿ ಕೊಡಿಸಿ. ಸರ್ಕಾರ ನನಗೆ ಏನಾದರೂ ಅನುಮತಿ ನೀಡಿದರೆ ನನ್ನ ಕಿಡ್ನಿ ಮಾರಿ ಆದರೂ ನಾನು ಸಾಲ ತೀರಿಸುತ್ತೇನೆ. ನಮ್ಮ ತಂದೆ ತಾಯಿ ಇಲ್ಲದೇ ನಾನು ನಮ್ಮ ಚಿಕ್ಕಪ್ಪನ ಮನೆಯಲ್ಲಿ ಇರುವಂತಹ ಪರಿಸ್ಥಿತಿ ಬಂದಿದೆ ಎಂದು ಯುವಕ ಅಳಲು ತೋಡಿಕೊಂಡನು.

ಗ್ರಾಮದ ಶ್ರೀಕಂಠ ಎಂಬಾತ ಎರಡು ಕಂಪನಿಗಳಿಂದ ಒಟ್ಟು 3 ಲಕ್ಷ ಸಾಲ ಪಡೆದಿದ್ದಾನೆ. ನಂತರ ಸಾಲ ಕಟ್ಟಲು ಸ್ವಲ್ಪ ಸಮಯ ತಡವಾದ ಕಾರಣ 3 ಲಕ್ಷಕ್ಕೆ ಬಡ್ಡಿ ಸೇರಿಸಿ ಒಟ್ಟು 6 ಲಕ್ಷ ಕಟ್ಟಬೇಕೆಂದು ಕಂಪನಿಯವರು ಆತನಿಗೆ ತೊಂದರೆ ನೀಡಿದ್ದಾರೆ. ಇದರಿಂದ ಆ ಕುಟುಂಬ ಊರು ತೊರೆದಿದೆ. ಇದೇ ರೀತಿ ಊರಿನ 100ಕ್ಕೂ ಹೆಚ್ಚು ಕುಟಂಬಗಳು ಸಾಲ ಬಾಧೆ ತಾಳಲಾಗದೆ ಊರು ತೊರೆದಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

10 mins ago

ಅಮೇರಿಕಾಗೆ ಬಿಗ್‌ ಶಾಕ್‌ ಕೊಟ್ಟ ಇರಾನ್‌

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ನಡುವೆ ಇರಾನ್‌ ಮಿಲಿಟರಿ ಪಡೆಗಳು ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ…

18 mins ago

ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ: ಶೇಖ್‌ ಹಸೀನಾ

ನವದೆಹಲಿ: ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್‌ ಹಸೀನಾ ಹೇಳಿದ್ದಾರೆ. ಈ ಬಗ್ಗೆ…

2 hours ago

ಮೋದಿ ಸಂಪುಟಕ್ಕೆ ಮೇಜರಿ ಸರ್ಜರಿ: ಹಲವು ಸಚಿವರ ಖಾತೆ ಬದಲಾವಣೆ?

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಪುನಾರಚನೆ ನಡೆಯುವ…

2 hours ago

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ | ರಾಮಮಂದಿರ ಅಕ್ರಮ ಮಂಕಾಗಿಸಿದ ಬಿಜೆಪಿ ಭವಿಷ್ಯ

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…

8 hours ago

ಭಾನುವಾರದ ಹಾಡುಪಾಡು | ಈಗ ಕೇರಳದಲ್ಲೂ ಫ್ರೀ ಬಸ್ ಪ್ರಿಯದರ್ಶಿನಿ

ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…

8 hours ago