ಚಾಮರಾಜನಗರ

ಫೈನಾನ್ಸ್‌ ಹಾವಳಿ | ಊರು ತೊರೆದೆ 100ಕ್ಕೂ ಅಧಿಕ ಕುಟುಂಬ!

ಸಾಲಕ್ಕೆ ಹೆದರಿ ಅಪ್ಪ ಅಮ್ಮ ನನ್ನನ್ನ ಬಿಟ್ಟು ಹೋಗಿದ್ದಾರೆ: ಗ್ರಾಮದ ಯುವಕನ ಅಳಲು 

ಚಾಮರಾಜನಗರ: ಇತ್ತೀಚೆಗೆ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಂಪನಿಗಳ ಹಾವಳಿ ಹೆಚ್ಚಾಗಿದ್ದು, ಬಡವರ ಜೀವ ಹಿಂಡುತ್ತಿವೆ.  ಫೈನಾನ್ಸ್‌ ಕಂಪನಿಗಳ ಹಾವಳಿಗಳಿಗೆ ಎಷ್ಟೋ ಜನ ತಮ್ಮ ಊರುಗಳನ್ನು ತೊರೆಯುತ್ತಿದ್ದಾರೆ. ಇದೀಗ ಇಂತದ್ದೆ ಘಟನೆ ಚಾಮರಾಜನಗರ ಜಿಲ್ಲೆಯ ಹೆಗ್ಗವಾಡಿ ಗ್ರಾಮದಲ್ಲಿ ನಡೆದಿದೆ. ಫೈನಾನ್ಸ್‌ ಹಾವಳಿಗೆ ಬೇಸತ್ತು  ಬರೋಬ್ಬರಿ 100 ಕುಟುಂಬಗಳು ಊರು ತೊರೆದಿವೆ.

ಯಾವಾಗಲೂ ಜನರಿಂದ  ತುಂಬಿದ್ದ ಊರು, ಇದೀಗ ಬರಿದಾಗಿ ಕಾಣುತ್ತಿದೆ. ಮನೆಗೆಲ್ಲಾ ಬೀಗ ಹಾಕಿ ಕುಟುಂಬಗಳು ಊರು ತೊರೆದಿವೆ. ಹಲವೆಡೆ ಪೋಷಕರು ತಮ್ಮ ಮಕ್ಕಳನ್ನು ಶಾಲೆ ಬಿಡಿಸಿ  ಕರೆದೊಯ್ದಿದ್ದಾರೆ. ಸಾಲದ ಹೊಡೆತಕ್ಕೆ ಮಕ್ಕಳ ವಿದ್ಯಾಭ್ಯಾಸವೇ ಮೊಟಕುಗೊಂಡಿದೆ. ಎಲ್ಲಿ ಹೋಗಿದ್ದಾರೆ ಎಂಬುದೆ ತೋಚುತ್ತಿಲ್ಲ ಎನ್ನುತ್ತಾರೆ ಅಳಿದುಳಿದ ಜನರು.

ಮೈಕ್ರೋ ಫೈನಾನ್ಸ್‌ ಕಂಪನಿಗಳು ಆರಂಭದಲ್ಲಿ ಸಾಲ ನೀಡಲು ಪುಸಲಾಯಿಸುತ್ತಾರೆ. ಸಾಲ ನೀಡಿದ ನಂತರ ಹಣ ಕಟ್ಟಲು ಒಂದು ದಿನ ತಡವಾದರು ತುಂಬಾ ತೊಂದರೆ ನೀಡುತ್ತಾರೆ. ಮನೆಗೆ ಬಂದು ಕೆಟ್ಟ ಮಾತುಗಳನ್ನು ಆಡುತ್ತಾರೆ. ಇವರ ಕಾಟ ತಾಳಲಾರದೆ ನಮ್ಮ ತಂದೆ-ತಾಯಿ ಊರು ತೊರೆದಿದ್ದಾರೆ ಎಂದು ಗ್ರಾಮದ ಯುವಕ ಅಳಲು ತೋಡಿಕೊಂಡಿದ್ದಾನೆ.

ತಮ್ಮ ತಂದೆ-ತಾಯಿ ಊರು ತೊರೆದಿರುವುದಕ್ಕೆ ಕಣ್ಣೀರು ಹಾಕುತ್ತಾ,  ಫೈನಾನ್ಸ್‌ ಕಂಪನಿಗಳಿಂದ ನಮಗೆ ಮುಕ್ತಿ ಕೊಡಿಸಿ. ಸರ್ಕಾರ ನನಗೆ ಏನಾದರೂ ಅನುಮತಿ ನೀಡಿದರೆ ನನ್ನ ಕಿಡ್ನಿ ಮಾರಿ ಆದರೂ ನಾನು ಸಾಲ ತೀರಿಸುತ್ತೇನೆ. ನಮ್ಮ ತಂದೆ ತಾಯಿ ಇಲ್ಲದೇ ನಾನು ನಮ್ಮ ಚಿಕ್ಕಪ್ಪನ ಮನೆಯಲ್ಲಿ ಇರುವಂತಹ ಪರಿಸ್ಥಿತಿ ಬಂದಿದೆ ಎಂದು ಯುವಕ ಅಳಲು ತೋಡಿಕೊಂಡನು.

ಗ್ರಾಮದ ಶ್ರೀಕಂಠ ಎಂಬಾತ ಎರಡು ಕಂಪನಿಗಳಿಂದ ಒಟ್ಟು 3 ಲಕ್ಷ ಸಾಲ ಪಡೆದಿದ್ದಾನೆ. ನಂತರ ಸಾಲ ಕಟ್ಟಲು ಸ್ವಲ್ಪ ಸಮಯ ತಡವಾದ ಕಾರಣ 3 ಲಕ್ಷಕ್ಕೆ ಬಡ್ಡಿ ಸೇರಿಸಿ ಒಟ್ಟು 6 ಲಕ್ಷ ಕಟ್ಟಬೇಕೆಂದು ಕಂಪನಿಯವರು ಆತನಿಗೆ ತೊಂದರೆ ನೀಡಿದ್ದಾರೆ. ಇದರಿಂದ ಆ ಕುಟುಂಬ ಊರು ತೊರೆದಿದೆ. ಇದೇ ರೀತಿ ಊರಿನ 100ಕ್ಕೂ ಹೆಚ್ಚು ಕುಟಂಬಗಳು ಸಾಲ ಬಾಧೆ ತಾಳಲಾಗದೆ ಊರು ತೊರೆದಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

8 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

8 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

9 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

9 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

9 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

10 hours ago