ಚಾಮರಾಜನಗರ

ಮಲೆಮಹದೇಶ್ವರ ಬೆಟ್ಟದಲ್ಲಿ ಬೆಂಕಿ ಅವಘಡ: ಕಾರ್ಯದರ್ಶಿ ಅಮಾನತು‌

ಹನೂರು : ಪ್ರಸಿದ್ಧ ಧಾರ್ಮಿಕ ಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಲಕ್ಷ ರೂ. ಮೌಲ್ಯದ ವಸ್ತು ನಾಶಗೊಂಡಿದೆ.

ಈ ಸಂಬಂಧ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಮಾಹಿತಿ ನೀಡಿದ್ದು, ಶುಕ್ರವಾರ ಮಧ್ಯಾಹ್ನ ಲಾಡು ಪ್ರಸಾದ ತಯಾರಿಕ ಕೇಂದ್ರದಲ್ಲಿ ನಡೆದ ಅಗ್ನಿ ಅವಘಡದಲ್ಲಿ 36,220 ಲಾಡು, 28 ಟಿನ್ ಎಣ್ಣೆ, 50 ಕೆಜಿಯ 9 ಮೂಟೆ ಸಕ್ಕರೆ, 30 ಕೆಜಿ ದ್ರಾಕ್ಷಿ, 40 ಕೆಜಿ ನಂದಿನಿ ತುಪ್ಪ, 96 ಕೆಜಿ ಕಡ್ಲೆ ಹಿಟ್ಟು ಸಿಲಿಂಡರ್ ಪೈಪ್ ಲೈನ್ ಸಂಪೂರ್ಣ ಹಾನಿಯಾಗಿದೆ ಎಂದು ತಿಳಿಸಿದ್ದಾರೆ.

ಈ ಅಗ್ನಿ ಅವಘಡದಲ್ಲಿ ಮಲೆ ಮಹದೇಶ್ವರ ಬೆಟ್ಟದ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ 10.2 ಲಕ್ಷ ನಷ್ಟ ಉಂಟಾಗಿದೆ ಎಂದು ಸರಸ್ವತಿ ತಿಳಿಸಿದ್ದಾರೆ.

ನೌಕರ ಅಮಾನತು : ಲಾಡು ಪ್ರಸಾದ ತಯಾರಿಕ ಘಟಕದಲ್ಲಿ ಸಿಲಿಂಡರ್ ನಲ್ಲಿ ಅನಿಲ ಸೋರಿಕೆಯಿಂದ ಬೆಂಕಿ ಬಿದ್ದು ನಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ದ್ವಿತೀಯ ದರ್ಜೆ ಸಹಾಯಕ ಕೆ.ಪಿ. ಮಹದೇವಸ್ವಾಮಿ ಅವರನ್ನು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅಮಾನತು‌ ಮಾಡಿ ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಹಾಗೂ ಹಿರಿಯ ಅಧಿಕಾರಿಗಳ ಆದೇಶದನ್ವಯ ಲಾಡು ಪ್ರಸಾದ ಘಟಕದ ದ್ವಿತೀಯ ದರ್ಜೆ ಸಹಾಯಕ ಕೆಪಿ ಮಹದೇವಸ್ವಾಮಿ ಅವರನ್ನು ಅಮಾನತುಗೊಳಿಸಲಾಗಿದೆ, ಘಟನೆಯ ಬಗ್ಗೆ ಸಮಗ್ರ ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ಸರಸ್ವತಿ ತಿಳಿಸಿದ್ದಾರೆ.

andolanait

Recent Posts

ಮಂಜಿನ ನಗರಿಯಲ್ಲಿ ಮೈ ಕೊರೆಯುವ ಚಳಿ

ಹೆಚ್ಚುತ್ತಿರುವ ಶೀತ ವಾತಾವರಣ; ಸದ್ಯಕ್ಕಿಲ್ಲ ಮಳೆಯ ಆತಂಕ  ಮಡಿಕೇರಿ: ಮಂಜಿನ ನಗರಿ ಮಡಿಕೇರಿಯಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದ್ದು, ಫೆಬ್ರವರಿವರೆಗೆ ಇದೇ…

17 mins ago

ಮಲ್ಲಯ್ಯನಪುರದಲ್ಲಿ ನಿರಂತರವಾಗಿ ಕಾಡಾನೆಗಳ ಹಾವಳಿ

ಲಕ್ಷಾಂತರ ರೂ. ಫಸಲು ನಾಶವಾಗುತ್ತಿದೆ ಎಂದು ರೈತರ ಅಳಲು; ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ಆಗ್ರಹ ಹನೂರು: ತಾಲ್ಲೂಕಿನ ಕಾವೇರಿ…

4 hours ago

ಸಣ್ಣ ಕಾಲುವೆಗಳನ್ನು ಮುಚ್ಚಿ ಒತ್ತುವರಿ: ಆರೋಪ

ಹನೂರು: ಉಡುತೊರೆ ಹಳ್ಳ ಜಲಾಶಯದಿಂದ ರೈತರ ಜಮೀನುಗಳಿಗೆ ನೀರು ಹರಿಸಲು ನಿರ್ಮಾಣ ಮಾಡಿದ್ದ ಸಣ್ಣ ಸಣ್ಣ ಕಾಲುವೆಗಳನ್ನು ಮುಚ್ಚಿ ಜಮೀನು…

4 hours ago

‘ಲಾ-ನಿನಾ’ ಚಳಿ: ಜನರ ಆರೋಗ್ಯದ ಮೇಲೆ ದುಷ್ಪರಿಣಾಮ

ಗಿರೀಶ್ ಹುಣಸೂರು ಜ್ವರ, ಶೀತ, ಕೆಮ್ಮು ಕಾಯಿಲೆಗಳ ಭೀತಿ; ಆಸ್ಪತ್ರೆಗಳಿಗೆ ಎಡತಾಕುವ ಪರಿಸ್ಥಿತಿ ಮೈಸೂರು: ರಾಜ್ಯದಲ್ಲಿ ತಾಪಮಾನ ಕುಸಿತದಿಂದಾಗಿ ಚಳಿಯ…

4 hours ago

ಶಾಮನೂರು ಶಿವಶಂಕರಪ್ಪ-ಕಪಿಲಾ ತೀರದ ನಡುವೆ ಇತ್ತು ಅವಿನಾಭಾವ ಸಂಬಂಧ!

ಎಸ್.ಎಸ್.ಭಟ್ ನಂಜನಗೂಡು: ಭಾನುವಾರ ನಿಧನರಾದ ಆಧುನಿಕ ದಾವಣಗೆರೆಯ ನಿರ್ಮಾತೃ ಶಾಮನೂರು ಶಿವಶಂಕರಪ್ಪ ಅವರಿಗೂ ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ…

4 hours ago