ಚಾಮರಾಜನಗರ

ಹನೂರು | ಆಕಸ್ಮಿಕ ಬೆಂಕಿಗೆ ಮನೆಗೆ ಚಾವಣಿ ನಾಶ

ಹನೂರು: ಆಕಸ್ಮಿಕ ಬೆಂಕಿ ಅವಘಡದಲ್ಲಿ ಮನೆಯ ಚಾವಣಿ ಸಂಪೂರ್ಣವಾಗಿ ಸುಟ್ಟುಹೋಗಿರುವ ಘಟನೆ ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ನಡೆದಿದೆ.

ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದ ಉಮಾಪತಿ, ಇವರ ಸಹೋದರ ಸುರೇಶ್ ಎಂಬವರಿಗೆ ಸೇರಿದ ಮನೆ ಇದಾಗಿದೆ. ಉಮಾಪತಿ ಬೆಂಗಳೂರಿನಲ್ಲಿ ವಾಸವಿದ್ದು ಸುರೇಶ್‌ರವರು ಗ್ರಾಮದ ಮನೆಯಲ್ಲಿ ವಾಸವಿರುತ್ತಿದ್ದರು.

ಸೋಮವಾರ ತಡರಾತ್ರಿ ಇದ್ದಕ್ಕಿದ್ದಂತೆ ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ಶಾಖಕ್ಕೆ ಮನೆಯಲ್ಲಿ ಮಲಗಿದ್ದ ಸುರೇಶ್ ತಪ್ಪಿಸಿಕೊಂಡು ಹೋಗಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಮನೆಯ ಚಾವಣಿ ಸಂಪೂರ್ಣ ಸುಟ್ಟುಹೋಗಿದೆ. ಸ್ಥಳೀಯರ ನೆರವಿನಿಂದ ಬೆಂಕಿಯನ್ನು ನಂದಿಸಿದ್ದಾರೆ.

ತಹಸಿಲ್ದಾರ್ ಭೇಟಿ: ಪಿ.ಜಿ.ಪಾಳ್ಯ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಆಕಸ್ಮಿಕ ಬೆಂಕಿಗೆ ಮನೆಯ ಚಾವಣಿ ಸುಟ್ಟು ಹೋಗಿರುವ ಬಗ್ಗೆ ಸುರೇಶ್ ರವರು ದೂರವಾಣಿ ಮುಖಾಂತರ ತಹಸಿಲ್ದಾರ್ ರವರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಮಂಗಳವಾರ ಮಧ್ಯಾಹ್ನ ತಹಸಿಲ್ದಾರ್ ಗುರುಪ್ರಸಾದ್ ಹಾಗೂ ಲೊಕ್ಕನಹಳ್ಳಿ ಕಂದಾಯ ನಿರೀಕ್ಷಕ ಮಹದೇವಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ತಹಸಿಲ್ದಾರ್ ಮಾತನಾಡಿ, ಮನೆಗೆ ಸಂಬಂಽಸಿದಂತೆ ಸಮರ್ಪಕ ದಾಖಲಾತಿಗಳನ್ನು ನೀಡಿದರೆ ಪ್ರಕೃತಿ ವಿಕೋಪದಡಿ ನೀಡಲಾಗುವ ಪರಿಹಾರದ ಹಣವನ್ನು ಒದಗಿಸಿಕೊಡುವುದಾಗಿ ಭರವಸೆ ನೀಡಿದರು. ಈ ವೇಳೆ ಪಿ.ಜಿ.ಪಾಳ್ಯ ಗ್ರಾಮ ಆಡಳಿತಾಽಕಾರಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

3 mins ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

11 mins ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

24 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

24 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

24 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

24 hours ago