ಚಾಮರಾಜನಗರ : ಅಗ್ನಿ ಅವಘಡ ಸಂಭವಿಸಿ ಹತ್ತಾರು ಅಂಗಡಿ ಮಳಿಗೆಗಳು ಸುಟ್ಟು ಭಸ್ಮ ಆಗಿರುವ ಘಟನೆ ಬಿಳಿಗಿರಿರಂಗನ ಬೆಟ್ಟದಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ. ಮುಂಜಾನೆ ಸುಮಾರು 3.30ರ ವೇಳೆಗೆ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ಯಿಂದ ಒಂದು ಅಂಗಡಿಯು ಬೆಂಕಿಯಿಂದ ಹೊತ್ತು ಉರಿದಿದ್ದು, ಬೆಂಕಿ ಮತ್ತಷ್ಟು ವ್ಯಾಪಿಸಿ ಮತ್ತೊಂದು ಅಂಗಡಿಗೆ ತಗುಲಿದೆ. ಪರಿಣಾಮ ಬೆಂಕಿಯ ಕೆನ್ನಾಲಿಗೆ ಹೆಚ್ಚಾಗಿ ಹತ್ತಾರು ಹೋಟೆಲ್ ಹಾಗೂ ಅಂಗಡಿ ಮಳಿಗೆಗಳು ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ.
ಈ ಅಗ್ನಿ ಅವಘಡದದಿಂದ ಹೋಟೆಲ್ನಲ್ಲಿ ಇದ್ದ ಮೂರಕ್ಕೂ ಹೆಚ್ಚು ಸಿಲಿಂಡರ್ಗಳು ಸ್ಪೋಟಗೊಂಡು ಬೆಂಕಿಯ ತೀವ್ರತೆ ಮತ್ತಷ್ಟು ಹೆಚ್ಚಿದೆ. ಇದರಿಂದ ಕೆಲಕಾಲ ಆತಂಕವೂ ಸೃಷ್ಟಿಯಾಗಿತ್ತು. ಅದೃಷ್ಟವಶಾತ್ ಹೋಟೆಲ್ನಲ್ಲಿ ಯಾರು ಜನ ಇರಲಿಲ್ಲ. ಹೀಗಾಗಿ ಯಾವುದೇ ಪ್ರಾಣಹಾನಿಯಾಗಿಲ್ಲ. ಆದರೆ, ಲಕ್ಷಾಂತರ ರೂ.ಮೌಲ್ಯದ ವಸ್ತುಗಳು ಬೆಂಕಿಗೆ ಸುಟ್ಟಿ ಬೂದಿಯಾಗಿವೆ.
ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…