ಚಾಮರಾಜನಗರ

ವಿಷಪ್ರಾಶನದಿಂದ ಐದು ಹುಲಿಗಳ ಸಾವು ಪ್ರಕರಣ: ಮೂವರು ಆರೋಪಿಗಳು ಅರಣ್ಯ ಇಲಾಖೆ ಕಸ್ಟಡಿಗೆ

ಹನೂರು: 5 ಹುಲಿಗಳಿಗೆ ವಿಷಪ್ರಾಶನ ಮಾಡಿದ್ದ ಮೂವರು ಹಂತಕರನ್ನು ಹೆಚ್ಚಿನ ವಿಚಾರಣೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಜುಲೈ.3ರ ಗುರುವಾರ ಮಧ್ಯಾಹ್ನ 2 ಗಂಟೆಯವರೆಗೆ ಕಸ್ಟಡಿಗೆ ನೀಡಿ ಜೆಎಂಎಫ್‌ಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಮಲೆ ಮಹದೇಶ್ವರ ವನ್ಯಜೀವಿಧಾಮದ ಹೂಗ್ಯಂ ವಲಯದ ಮಿಣ್ಯಂ ಅರಣ್ಯ ಪ್ರದೇಶದ ಮಹದೇಶ್ವರ ದೇವಸ್ಥಾನದ ಸಮೀಪ ಐದು ಹುಲಿಗಳು ವಿಷಪ್ರಾಶನದಿಂದ ಮೃತಪಟ್ಟಿದ್ದವು.

ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಧರ್ಮೇಂದ್ರ ನೇತೃತ್ವದ ತನಿಖಾ ತಂಡ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ಹನೂರು ತಾಲ್ಲೂಕಿನ ಕೊಪ್ಪ ಗ್ರಾಮದ ಮಾಧುರಾಜು, ನಾಗರಾಜು, ಕುನ್ನಪ್ಪ ಎಂಬ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

ಈ ವೇಳೆ ನ್ಯಾಯಾಧೀಶರು ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಕೋರ್ಟ್‌ಗೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಹೆಚ್ಚಿನ ವಿಚಾರಣೆಗೆ ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಸ್ಟಡಿಗೆ ಕೊಡುವಂತೆ ಅರ್ಜಿ ಸಲ್ಲಿಸಿದ್ದರು. ಆರೋಪಿಗಳ ಪರ ವಕಾಲತ್ತು ವಹಿಸಿದ್ದ ಮಹದೇವ ಪ್ರಸಾದ್‌ರವರು ಈಗಾಗಲೇ ವಿಚಾರಣೆ ಮುಗಿದಿರುವುದರಿಂದ ಕಸ್ಟಡಿಯ ಅವಶ್ಯಕತೆ ಇಲ್ಲ ಎಂದು ಮನವರಿಕೆ ಮಾಡಿದರು.

ಸರ್ಕಾರಿ ಅಭಿಯೋಜಕರು ಆರೋಪಿಗಳನ್ನು ವಶಕ್ಕೆ ಪಡೆದು ನೇರವಾಗಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದೇವೆ. ಯಾವುದೇ ವಿಚಾರಣೆ ನಡೆಸಿಲ್ಲ ಎಂದು ವಾದ ಮಂಡಿಸಿದರು.

ವಾದ ಪ್ರತಿವಾದ ಆಲಿಸಿದ ನಂತರ ನ್ಯಾಯಾಧೀಶರು ವಿಚಾರಣೆ ನಡೆಸಿ ಜುಲೈ.3ರ (ಗುರುವಾರ) ಮಧ್ಯಾಹ್ನ 2 ಗಂಟೆಗೆ ಕೋರ್ಟ್‌ಗೆ ಹಾಜರುಪಡಿಸುವಂತೆ ಆದೇಶ ಹೊರಡಿಸಿದ್ದರು. ವಿಚಾರಣೆಯ ವೇಳೆ ಆರೋಪಿಗಳಿಗೆ ಯಾವುದೇ ತರಹದ ಕಿರುಕುಳ ನೀಡಬಾರದು, ಸಮಯಕ್ಕೆ ಸರಿಯಾಗಿ ಊಟ ನೀಡಬೇಕು. ವಾಪಸ್ ಕರೆದುಕೊಂಡು ಬರುವಾಗ ವೈದ್ಯಕೀಯ ಪರೀಕ್ಷೆ ನಡೆಸಿ ಪ್ರಮಾಣ ಪತ್ರ ತರುವಂತೆ ಸೂಚನೆ ನೀಡಿದರು.

ಒಂದು ಗಂಟೆಗೂ ಹೆಚ್ಚು ಕಾಲ ಕಾದು ಕುಳಿತ ಅಧಿಕಾರಿಗಳು: ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಐದು ಹುಲಿಗಳ ಸಾವಿಗೆ ಕಾರಣರಾಗಿದ್ದ ಮೂವರು ಹಂತಕರನ್ನು ನ್ಯಾಯಾಲಯಕ್ಕೆ ಸೋಮವಾರ ಬೆಳಗ್ಗೆ ೧೧:೩೦ ಗಂಟೆಗೆ ಕರೆ ತರಲಾಯಿತು. ಇದಾದ 10 ನಿಮಿಷಕ್ಕೆ ಆರೋಪಿಗಳ ವಿಚಾರಣೆ ನಡೆಸಲಾಯಿತು. ಈ ವೇಳೆ ಆರೋಪಿಗಳ ಪರ ಯಾರೊಬ್ಬರು ವಕಾಲತ್ತು ವಹಿಸದ ಹಿನ್ನೆಲೆ 30 ನಿಮಿಷಗಳ ಕಾಲ ವಿಚಾರಣೆ ಮುಂದೂಡಿದರು. ತದನಂತರ ಆರೋಪಿಗಳ ಪರ ಮಹಾದೇವ ಪ್ರಸಾದ್ ಎಂಬವರು ವಕಾಲತ್ತು ವಹಿಸಿದರು.

ಆರೋಪಿಗಳ ಪರ ವಕೀಲರು ವಕಾಲತ್ತು ಹಾಕುವವರೆಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಆರೋಪಿಗಳನ್ನು ಅರಣ್ಯ ಇಲಾಖೆಯ ವಾಹನದಲ್ಲಿ ಬಂದೋಬಸ್ತ್‌ನಲ್ಲಿ ಕೂರಿಸಿಕೊಂಡು ಕೋರ್ಟಿನ ಆದೇಶಕ್ಕೆ ಕಾದು ಕುಳಿತ್ತಿದ್ದರು.

ಸಾರ್ವಜನಿಕರಿಂದ ಕುತೂಹಲ: ವಿಷಪ್ರಾಶನ ಮಾಂಸ ಸೇವಿಸಿ ಐದು ಹುಲಿಗಳ ಸಾವಿಗೆ ಕಾರಣರಾಗಿದ್ದ ಮೂವರು ಹಂತಕರನ್ನು ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಈ ವೇಳೆ ಸಾರ್ವಜನಿಕರು ಹುಲಿ ಹಂತಕರನ್ನು ನೋಡಿ ಕೆಲವರು ಆಕ್ರೋಶ ವ್ಯಕ್ತಪಡಿಸಿ ಮೂಕ ಪ್ರಾಣಿಗಳ ಸಾವಿಗೆ ಕಾರಣರಾದವರು ಇವರೇನಾ, ಅಯ್ಯೋ ಪಾಪಿಗಳೇ ಎಂದು ಮರುಕ ವ್ಯಕ್ತಪಡಿಸಿದ ಘಟನೆಯೂ ನಡೆಯಿತು.

ಆಂದೋಲನ ಡೆಸ್ಕ್

Recent Posts

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…

8 hours ago

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

12 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

12 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

12 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

13 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

13 hours ago