ಚಾಮರಾಜನಗರ

ವಿಷಪ್ರಾಶನದಿಂದ ಐದು ಹುಲಿಗಳ ಸಾವು ಪ್ರಕರಣ: ಮೂವರು ಆರೋಪಿಗಳು ಅರಣ್ಯ ಇಲಾಖೆ ಕಸ್ಟಡಿಗೆ

ಹನೂರು: 5 ಹುಲಿಗಳಿಗೆ ವಿಷಪ್ರಾಶನ ಮಾಡಿದ್ದ ಮೂವರು ಹಂತಕರನ್ನು ಹೆಚ್ಚಿನ ವಿಚಾರಣೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಜುಲೈ.3ರ ಗುರುವಾರ ಮಧ್ಯಾಹ್ನ 2 ಗಂಟೆಯವರೆಗೆ ಕಸ್ಟಡಿಗೆ ನೀಡಿ ಜೆಎಂಎಫ್‌ಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಮಲೆ ಮಹದೇಶ್ವರ ವನ್ಯಜೀವಿಧಾಮದ ಹೂಗ್ಯಂ ವಲಯದ ಮಿಣ್ಯಂ ಅರಣ್ಯ ಪ್ರದೇಶದ ಮಹದೇಶ್ವರ ದೇವಸ್ಥಾನದ ಸಮೀಪ ಐದು ಹುಲಿಗಳು ವಿಷಪ್ರಾಶನದಿಂದ ಮೃತಪಟ್ಟಿದ್ದವು.

ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಧರ್ಮೇಂದ್ರ ನೇತೃತ್ವದ ತನಿಖಾ ತಂಡ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ಹನೂರು ತಾಲ್ಲೂಕಿನ ಕೊಪ್ಪ ಗ್ರಾಮದ ಮಾಧುರಾಜು, ನಾಗರಾಜು, ಕುನ್ನಪ್ಪ ಎಂಬ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

ಈ ವೇಳೆ ನ್ಯಾಯಾಧೀಶರು ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಕೋರ್ಟ್‌ಗೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಹೆಚ್ಚಿನ ವಿಚಾರಣೆಗೆ ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಸ್ಟಡಿಗೆ ಕೊಡುವಂತೆ ಅರ್ಜಿ ಸಲ್ಲಿಸಿದ್ದರು. ಆರೋಪಿಗಳ ಪರ ವಕಾಲತ್ತು ವಹಿಸಿದ್ದ ಮಹದೇವ ಪ್ರಸಾದ್‌ರವರು ಈಗಾಗಲೇ ವಿಚಾರಣೆ ಮುಗಿದಿರುವುದರಿಂದ ಕಸ್ಟಡಿಯ ಅವಶ್ಯಕತೆ ಇಲ್ಲ ಎಂದು ಮನವರಿಕೆ ಮಾಡಿದರು.

ಸರ್ಕಾರಿ ಅಭಿಯೋಜಕರು ಆರೋಪಿಗಳನ್ನು ವಶಕ್ಕೆ ಪಡೆದು ನೇರವಾಗಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದೇವೆ. ಯಾವುದೇ ವಿಚಾರಣೆ ನಡೆಸಿಲ್ಲ ಎಂದು ವಾದ ಮಂಡಿಸಿದರು.

ವಾದ ಪ್ರತಿವಾದ ಆಲಿಸಿದ ನಂತರ ನ್ಯಾಯಾಧೀಶರು ವಿಚಾರಣೆ ನಡೆಸಿ ಜುಲೈ.3ರ (ಗುರುವಾರ) ಮಧ್ಯಾಹ್ನ 2 ಗಂಟೆಗೆ ಕೋರ್ಟ್‌ಗೆ ಹಾಜರುಪಡಿಸುವಂತೆ ಆದೇಶ ಹೊರಡಿಸಿದ್ದರು. ವಿಚಾರಣೆಯ ವೇಳೆ ಆರೋಪಿಗಳಿಗೆ ಯಾವುದೇ ತರಹದ ಕಿರುಕುಳ ನೀಡಬಾರದು, ಸಮಯಕ್ಕೆ ಸರಿಯಾಗಿ ಊಟ ನೀಡಬೇಕು. ವಾಪಸ್ ಕರೆದುಕೊಂಡು ಬರುವಾಗ ವೈದ್ಯಕೀಯ ಪರೀಕ್ಷೆ ನಡೆಸಿ ಪ್ರಮಾಣ ಪತ್ರ ತರುವಂತೆ ಸೂಚನೆ ನೀಡಿದರು.

ಒಂದು ಗಂಟೆಗೂ ಹೆಚ್ಚು ಕಾಲ ಕಾದು ಕುಳಿತ ಅಧಿಕಾರಿಗಳು: ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಐದು ಹುಲಿಗಳ ಸಾವಿಗೆ ಕಾರಣರಾಗಿದ್ದ ಮೂವರು ಹಂತಕರನ್ನು ನ್ಯಾಯಾಲಯಕ್ಕೆ ಸೋಮವಾರ ಬೆಳಗ್ಗೆ ೧೧:೩೦ ಗಂಟೆಗೆ ಕರೆ ತರಲಾಯಿತು. ಇದಾದ 10 ನಿಮಿಷಕ್ಕೆ ಆರೋಪಿಗಳ ವಿಚಾರಣೆ ನಡೆಸಲಾಯಿತು. ಈ ವೇಳೆ ಆರೋಪಿಗಳ ಪರ ಯಾರೊಬ್ಬರು ವಕಾಲತ್ತು ವಹಿಸದ ಹಿನ್ನೆಲೆ 30 ನಿಮಿಷಗಳ ಕಾಲ ವಿಚಾರಣೆ ಮುಂದೂಡಿದರು. ತದನಂತರ ಆರೋಪಿಗಳ ಪರ ಮಹಾದೇವ ಪ್ರಸಾದ್ ಎಂಬವರು ವಕಾಲತ್ತು ವಹಿಸಿದರು.

ಆರೋಪಿಗಳ ಪರ ವಕೀಲರು ವಕಾಲತ್ತು ಹಾಕುವವರೆಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಆರೋಪಿಗಳನ್ನು ಅರಣ್ಯ ಇಲಾಖೆಯ ವಾಹನದಲ್ಲಿ ಬಂದೋಬಸ್ತ್‌ನಲ್ಲಿ ಕೂರಿಸಿಕೊಂಡು ಕೋರ್ಟಿನ ಆದೇಶಕ್ಕೆ ಕಾದು ಕುಳಿತ್ತಿದ್ದರು.

ಸಾರ್ವಜನಿಕರಿಂದ ಕುತೂಹಲ: ವಿಷಪ್ರಾಶನ ಮಾಂಸ ಸೇವಿಸಿ ಐದು ಹುಲಿಗಳ ಸಾವಿಗೆ ಕಾರಣರಾಗಿದ್ದ ಮೂವರು ಹಂತಕರನ್ನು ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಈ ವೇಳೆ ಸಾರ್ವಜನಿಕರು ಹುಲಿ ಹಂತಕರನ್ನು ನೋಡಿ ಕೆಲವರು ಆಕ್ರೋಶ ವ್ಯಕ್ತಪಡಿಸಿ ಮೂಕ ಪ್ರಾಣಿಗಳ ಸಾವಿಗೆ ಕಾರಣರಾದವರು ಇವರೇನಾ, ಅಯ್ಯೋ ಪಾಪಿಗಳೇ ಎಂದು ಮರುಕ ವ್ಯಕ್ತಪಡಿಸಿದ ಘಟನೆಯೂ ನಡೆಯಿತು.

ಆಂದೋಲನ ಡೆಸ್ಕ್

Recent Posts

ಕೆಪಿಎಸ್‌ಸಿ ಹಗರಣ | ಜ್ಞಾನೇಂದ್ರ ಕುಮಾರ್ ಅಮಾನತ್ತು

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 2016ನೇ ಬ್ಯಾಚ್‌ನ…

5 hours ago

ವ್ಯಾಪಕ ಟೀಕೆ : ವಿವಾದಾತ್ಮಕ ʼಉದ್ಯಾನ ಮಸೂದೆʼ ಹಿಂಪಡೆಯಲು ಸರ್ಕಾರ ನಿರ್ಧಾರ

​ಬೆಂಗಳೂರು : ಸಾರ್ವಜನಿಕರಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿವಾದಿತ ‘ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ)…

6 hours ago

ಕೆಪಿಎಸ್‌ಸಿ ಹಗರಣ | ಜ್ಞಾನೇಂದ್ರ ಕುಮಾರ್‌ ವಿರುದ್ಧ ಇನ್ನೊಂದು ಪ್ರಕರಣ ದಾಖಲು

ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್…

10 hours ago

ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ಕೈಲ್ ಪೊಳ್ದ್ ಆಚರಣೆ

ಚೆಟ್ಟಳ್ಳಿ: ಕೊಡಗು ಜಿಲ್ಲೆಯಾದ್ಯಂತ ಕೈಲ್ ಪೊಳ್ದ್ ನಮ್ಮೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಚೆಟ್ಟಳ್ಳಿಯ ಪುತ್ತರಿರ ಐನ್ ಮನೆಯಲ್ಲಿ ಕೊಡವ ಸಂಪ್ರದಾಯ, ಕುಟುಂಬದ…

10 hours ago

ಸೆ.21 ರಿಂದ ಮೂರು ದಿನ ವಿಧಾನಮಂಡಲದ ವಿಶೇಷ ಅಧಿವೇಶನ

ಬೆಂಗಳೂರು : ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರಗಾಲದ ಪರಿಸ್ಥಿತಿ, ಕಸ್ತೂರಿ ರಂಗನ್ ವರದಿ ಹಾಗೂ ಇತ್ಯಾದಿ ಪ್ರಮುಖ ಜನಪರ ವಿಷಯಗಳ…

10 hours ago

ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ: ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಮಂಡ್ಯ:  ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ಒಳಹರಿವಿಗಿಂತ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ…

12 hours ago