ಚಾಮರಾಜನಗರ

RCB ಗೆಲುವಿಗಾಗಿ ಮಹದೇಶ್ವರ ಬೆಟ್ಟದಲ್ಲಿ ಅಭಿಮಾನಿಗಳಿಂದ ಶಿವ ಅಷ್ಟೋತ್ತರ ಪೂಜೆ

ಹನೂರು: ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಫೈನಲ್ ಹಣಾಹಣಿ ನಡೆಯಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಜಯಗಳಿಸಲಿ ಎಂದು ಆರ್‌ಸಿಬಿ ಅಭಿಮಾನಿಗಳು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಶಿವ ಅಷ್ಟೋತ್ತರ ಪೂಜೆ ಮಾಡಿಸಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಪ್ರಾರಂಭವಾಗಿ 17 ವರ್ಷಗಳು ಪೂರ್ಣಗೊಂಡು ಹದಿನೆಂಟನೇ ವರ್ಷದ ಫೈನಲ್ ಪಂದ್ಯ ಇಂದು ನಡೆಯಲಿದ್ದು, 9 ವರ್ಷಗಳ ನಂತರ ಬೆಂಗಳೂರು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈನಲ್ ಪ್ರವೇಶಿಸಿದೆ.

18ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಉತ್ತಮ ಪ್ರದರ್ಶನ ನೀಡುತ್ತಾ ಫೈನಲ್ ಪ್ರವೇಶಿಸಿದೆ. ಇಂದು ಸಂಜೆ ಆರ್‌ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಫೈನಲ್ ಹಣಾಹಣಿ ನಡೆಯಲಿದ್ದು, ಬೆಂಗಳೂರು ತಂಡ ಜಯಗಳಿಸಲಿ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳು ಹಾಗೂ ಮಾದಪ್ಪ ಭಕ್ತಾದಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಪವಾಡ ಪುರುಷ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಅಭಿಮಾನಿಗಳು ಹಾಗೂ ಭಕ್ತರು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೆಸರಿನಲ್ಲಿ ಶಿವ ಅಷ್ಟೋತ್ತರ ಪೂಜೆ ಸಲ್ಲಿಸುವ ಮೂಲಕ ಗಮನ ಸೆಳೆದಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಾಲ್ಕನೇ ಬಾರಿ ಫೈನಲ್ ಪ್ರವೇಶಿಸಿದೆ. ಆದರೆ ಇದುವರೆಗೂ ಒಮ್ಮೆಯೂ ಟ್ರೋಫಿ ಎತ್ತಿಡಿದಿಲ್ಲ. ಈ ಬಾರಿ ಟ್ರೋಫಿ ತನ್ನದಾಗಿಸಿಕೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಲು ತಂಡವು ಸಿದ್ಧವಾಗಿದೆ.

ಇದನ್ನೂ ಓದಿ:- IPL Final| ಚೊಚ್ಚಲ ಐಪಿಎಲ್‌ ಟ್ರೋಫಿಗಾಗಿ ಮದಗಜಗಳ ಗುದ್ದಾಟ: ಆರ್‌ಸಿಬಿಯೇ ಗೆಲ್ಲುವ ಭರವಸೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಫೈನಲ್ ಪ್ರವೇಶಿಸಿದ್ದು. ಈ ಪಂದ್ಯಾವಳಿಯಲ್ಲಿ ಜಯಗಳಿಸಲು ಭಕ್ತರೊಬ್ಬರು ಶಿವ ಅಷ್ಟೋತ್ತರ ಪೂಜೆ ಸಲ್ಲಿಸಿದ್ದಾರೆ. ನಾವು ಸಹ ಕನ್ನಡಿಗರಾಗಿದ್ದು ನಮ್ಮ ಕರ್ನಾಟಕದ ತಂಡಕ್ಕೆ ಬೆಂಬಲ ನೀಡಬೇಕಾಗಿರುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ. ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಯುವ ಪ್ರತಿಭೆಗಳಿದ್ದು ಟ್ರೋಫಿ ಗೆಲ್ಲುವ ಹುಮ್ಮಸ್ಸಿನಲ್ಲಿದ್ದಾರೆ. ಕೋಟ್ಯಾಂತರ ಕನ್ನಡಿಗರ ಬಹುದಿನಗಳ ಕನಸು ಈ ದಿನ ಈಡೇರಲಿ ಎಂದು ನಾನು ಸಹ ಮಲೆ ಮಹದೇಶ್ವರರಲ್ಲಿ ಪ್ರಾರ್ಥಿಸುತ್ತೇನೆ. “ಈ ಬಾರಿ ಕಪ್ ನಮ್ದೇ” ಎಂಬ ಸ್ಲೋಗನ್ ಹೇಳಿ ವಿಜಯೋತ್ಸವ ಆಚರಿಸೋಣ ಎಂದರು.

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

1 hour ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

3 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

4 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

5 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

8 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

8 hours ago