ಚಾಮರಾಜನಗರ

ಜಾನುವಾರುಗಳು ಅರಣ್ಯಕ್ಕೆ ಹೋಗುವುದನ್ನು ತಪ್ಪಿಸಲು ಗುಂಡಿ ತೆಗೆದ ಅರಣ್ಯ ಇಲಾಖೆ ; ರೈತರ ಪ್ರತಿಭಟನೆ

 ಹನೂರು : ತಾಲೂಕಿನ ಕೌದಳ್ಳಿ ವಲಯ ವ್ಯಾಪ್ತಿಯ ಅರಣ್ಯ ಇಲಾಖೆ ಅಧಿಕಾರಿಗಳು ಕಡಬೂರು ಗ್ರಾಮದ ಮೂಲಕ ಅರಣ್ಯಕ್ಕೆ ಜಾನುವಾರುಗಳು ಮೇವು ಮೇಯಲು ಹೋಗುವುದನ್ನು ತಪ್ಪಿಸಲು ಗುಂಡಿ ತೆಗೆದಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಸಾಮೂಹಿಕ ನಾಯಕತ್ವದ ತಾಲೂಕು ಅಧ್ಯಕ್ಷ ಮಾದಪ್ಪ ನೇತೃತ್ವದಲ್ಲಿ ಗ್ರಾಮಸ್ಥರು ಹಾಗೂ ರೈತ ಮುಖಂಡರುಗಳು ಕಡಬೂರು ಗ್ರಾಮದ ಸಮೀಪ ಗುಂಡಿ ತೆಗೆದಿರುವ ಸ್ಥಳದಲ್ಲಿ ಜಮಾವಣೆಗೊಂಡು ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಅವರ ಹಾಕಿದರು.

ನಂತರ ಮಾತನಾಡಿದ ಅವರು, ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಬೂರು, ಬಿದರಳ್ಳಿ ಗ್ರಾಮದ ಜಾನುವಾರುಗಳು ನೂರಾರು ವರ್ಷಗಳಿಂದ ಅರಣ್ಯಕ್ಕೆ ಹೋಗಿ ಮೇವು ಮೇಯ್ದುಕೊಂಡು ವಾಪಸ್ ಬರುತ್ತಿದೆ. ಆದರೆ ಕಳೆದ ವಾರ ಅರಣ್ಯ ಇಲಾಖೆ ಅಧಿಕಾರಿಗಳು ಕಡಬೂರು ಗ್ರಾಮದ ಸಮೀಪವೇ ಗುಂಡಿ ತೆಗೆದು ಜಾನುವಾರುಗಳು ಮುಂದೆ ಹೋಗದಂತೆ ಮಾಡಿದ್ದಾರೆ.

ಇದರಿಂದ ಜಾನುವಾರುಗಳಿಗೆ ಮೇವು ಇಲ್ಲದೆ ತೊಂದರೆ ಅನುಭವಿಸುತ್ತಿದೆ. ಈಗಾಗಲೇ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಜಾನುವಾರುಗಳ ಮೇವಿಗೆ ಯಾವುದೇ ತೊಂದರೆ ನೀಡದಂತೆ ಮನವಿ ಮಾಡಲಾಗಿದೆ. ಅವರು ಸಹ ಜಾನುವಾರುಗಳಿಗೆ ಯಾವುದೇ ರೀತಿಯ ತೊಂದರೆ ಕೊಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ.

ಆದರೆ ಕೌದಳ್ಳಿ ವಲಯದ ಅರಣ್ಯ ಇಲಾಖೆ ಅಧಿಕಾರಿಗಳು ಟ್ರಂಚ್ ತೆಗೆದು ತೊಂದರೆ ನೀಡುತ್ತಿದ್ದಾರೆ. ಒಂದು ದಿನದ ಒಳಗೆ ಈ ಗುಂಡಿ ಮುಚ್ಚಿ ಜಾನುವಾರುಗಳಿಗೆ ಅವಕಾಶ ಕಲ್ಪಿಸದಿದ್ದರೆ , ಹನೂರು ಹಾಗೂ ಕೌದಳ್ಳಿ ಗ್ರಾಮದಲ್ಲಿರುವ ಅರಣ್ಯ ಕಚೇರಿಯ ಮುಂಭಾಗ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಅರಣ್ಯ ಸಂಪತ್ತು ಹಾಗೂ ವನ್ಯ ಪ್ರಾಣಿಗಳನ್ನು ಸಂರಕ್ಷಣೆ ಮಾಡಬೇಕಾಗಿರುವುದು ಪ್ರತಿಯೊಬ್ಬರ ಜವಾಬ್ದಾರಿ, ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷದಿಂದ ಚಿರತೆ ಮೃತಪಟ್ಟಿದೆ. ಆದರೆ ಅರಣ್ಯದಲ್ಲಿ ಜಾನುವಾರಗಳನ್ನು ಮೇಯಿಸುತ್ತಿದ್ದ ರೈತನೋವರ್ನನ್ನು ಕರೆತಂದು ಚಿತ್ರ ಹಿಂಸೆ ನೀಡಿದ್ದಲ್ಲದೆ 15 ಸಾವಿರ ಹಣ ನೀಡುವಂತೆ ಒತ್ತಾಯಿಸಿದ್ದಾರೆ.

ಈ ಘಟನೆ ತಿಳಿಯುತ್ತಿದ್ದಂತೆ ರೈತ ಸಂಘದವರು ಮಧ್ಯ ಪ್ರವೇಶಿಸಿದ ನಂತರ ರೈತನನ್ನು ಬಿಟ್ಟು ಕಳುಹಿಸಿದ್ದಾರೆ. ಆದರೆ ರೈತ ದೂರು ನೀಡಿ ಒಂದು ವಾರ ಕಳೆದರೂ ಹಲ್ಲೆ ಮಾಡಿದ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ಈ ವೇಳೆ ಐವತ್ತಕ್ಕೂ ಹೆಚ್ಚು ರೈತ ರೈತ ಮುಖಂಡರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ | ಕರಗದ ವೇಳೆ ಕೊಂಡಕ್ಕೆ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

16 mins ago

ಪುರುಷರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ; ಪುರುಷರ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ

ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…

51 mins ago

ಸಂವಿಧಾನದಿಂದಲೇ ನಾನಿಂದು ಮುಖ್ಯಮಂತ್ರಿ ಆಗಿದ್ದೇನೆ : ಸಿದ್ದರಾಮಯ್ಯ

ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…

1 hour ago

ಐಪಿಎಲ್‌ ಪಂದ್ಯ : ಏಪ್ರಿಲ್‌ 15, 24ರಂದು ಮೆಟ್ರೋ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು : ಟಾಟಾ ಐಪಿಎಲ್‌ನ ಕ್ರಿಕೆಟ್‌ ಪಂದ್ಯಗಳು ಏಪ್ರಿಲ್ ‌15 ಹಾಗೂ ಏಪ್ರಿಲ್ ‌24ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.…

1 hour ago

ನಿತೀಶ್ ಕುಮಾರ್ ರಾಜೀನಾಮೆ; ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಆಯ್ಕೆ

ಪಾಟ್ನಾ : ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಪದವಿಗೆ ರಾಜೀನಾಮೆ ನೀಡಿದ್ದಾರೆ. ಅದರ ಬೆನ್ನಲ್ಲೇ ಬಿಹಾರದ ಹೊಸ…

1 hour ago

ಟಿಪ್ಪರ್-ಕಾರು ನಡುವೆ ಅಪಘಾತ : ತಾಯಿ ಮಗಳು ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ : ಕೇರಳ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್‌ಗೆ ಕಾರುವೊಂದು ಡಿಕ್ಕಿ ಹೊಡೆದು ತಾಯಿ-ಮಗಳು ಸ್ಥಳದಲ್ಲೇ ಮೃತಪಟ್ಟ ದುರಂತ ಘಟನೆ ಮಂಗಳವಾರ…

2 hours ago