ಚಾಮರಾಜನಗರ

ಜಾನುವಾರುಗಳು ಅರಣ್ಯಕ್ಕೆ ಹೋಗುವುದನ್ನು ತಪ್ಪಿಸಲು ಗುಂಡಿ ತೆಗೆದ ಅರಣ್ಯ ಇಲಾಖೆ ; ರೈತರ ಪ್ರತಿಭಟನೆ

 ಹನೂರು : ತಾಲೂಕಿನ ಕೌದಳ್ಳಿ ವಲಯ ವ್ಯಾಪ್ತಿಯ ಅರಣ್ಯ ಇಲಾಖೆ ಅಧಿಕಾರಿಗಳು ಕಡಬೂರು ಗ್ರಾಮದ ಮೂಲಕ ಅರಣ್ಯಕ್ಕೆ ಜಾನುವಾರುಗಳು ಮೇವು ಮೇಯಲು ಹೋಗುವುದನ್ನು ತಪ್ಪಿಸಲು ಗುಂಡಿ ತೆಗೆದಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಸಾಮೂಹಿಕ ನಾಯಕತ್ವದ ತಾಲೂಕು ಅಧ್ಯಕ್ಷ ಮಾದಪ್ಪ ನೇತೃತ್ವದಲ್ಲಿ ಗ್ರಾಮಸ್ಥರು ಹಾಗೂ ರೈತ ಮುಖಂಡರುಗಳು ಕಡಬೂರು ಗ್ರಾಮದ ಸಮೀಪ ಗುಂಡಿ ತೆಗೆದಿರುವ ಸ್ಥಳದಲ್ಲಿ ಜಮಾವಣೆಗೊಂಡು ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಅವರ ಹಾಕಿದರು.

ನಂತರ ಮಾತನಾಡಿದ ಅವರು, ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಬೂರು, ಬಿದರಳ್ಳಿ ಗ್ರಾಮದ ಜಾನುವಾರುಗಳು ನೂರಾರು ವರ್ಷಗಳಿಂದ ಅರಣ್ಯಕ್ಕೆ ಹೋಗಿ ಮೇವು ಮೇಯ್ದುಕೊಂಡು ವಾಪಸ್ ಬರುತ್ತಿದೆ. ಆದರೆ ಕಳೆದ ವಾರ ಅರಣ್ಯ ಇಲಾಖೆ ಅಧಿಕಾರಿಗಳು ಕಡಬೂರು ಗ್ರಾಮದ ಸಮೀಪವೇ ಗುಂಡಿ ತೆಗೆದು ಜಾನುವಾರುಗಳು ಮುಂದೆ ಹೋಗದಂತೆ ಮಾಡಿದ್ದಾರೆ.

ಇದರಿಂದ ಜಾನುವಾರುಗಳಿಗೆ ಮೇವು ಇಲ್ಲದೆ ತೊಂದರೆ ಅನುಭವಿಸುತ್ತಿದೆ. ಈಗಾಗಲೇ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಜಾನುವಾರುಗಳ ಮೇವಿಗೆ ಯಾವುದೇ ತೊಂದರೆ ನೀಡದಂತೆ ಮನವಿ ಮಾಡಲಾಗಿದೆ. ಅವರು ಸಹ ಜಾನುವಾರುಗಳಿಗೆ ಯಾವುದೇ ರೀತಿಯ ತೊಂದರೆ ಕೊಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ.

ಆದರೆ ಕೌದಳ್ಳಿ ವಲಯದ ಅರಣ್ಯ ಇಲಾಖೆ ಅಧಿಕಾರಿಗಳು ಟ್ರಂಚ್ ತೆಗೆದು ತೊಂದರೆ ನೀಡುತ್ತಿದ್ದಾರೆ. ಒಂದು ದಿನದ ಒಳಗೆ ಈ ಗುಂಡಿ ಮುಚ್ಚಿ ಜಾನುವಾರುಗಳಿಗೆ ಅವಕಾಶ ಕಲ್ಪಿಸದಿದ್ದರೆ , ಹನೂರು ಹಾಗೂ ಕೌದಳ್ಳಿ ಗ್ರಾಮದಲ್ಲಿರುವ ಅರಣ್ಯ ಕಚೇರಿಯ ಮುಂಭಾಗ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಅರಣ್ಯ ಸಂಪತ್ತು ಹಾಗೂ ವನ್ಯ ಪ್ರಾಣಿಗಳನ್ನು ಸಂರಕ್ಷಣೆ ಮಾಡಬೇಕಾಗಿರುವುದು ಪ್ರತಿಯೊಬ್ಬರ ಜವಾಬ್ದಾರಿ, ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷದಿಂದ ಚಿರತೆ ಮೃತಪಟ್ಟಿದೆ. ಆದರೆ ಅರಣ್ಯದಲ್ಲಿ ಜಾನುವಾರಗಳನ್ನು ಮೇಯಿಸುತ್ತಿದ್ದ ರೈತನೋವರ್ನನ್ನು ಕರೆತಂದು ಚಿತ್ರ ಹಿಂಸೆ ನೀಡಿದ್ದಲ್ಲದೆ 15 ಸಾವಿರ ಹಣ ನೀಡುವಂತೆ ಒತ್ತಾಯಿಸಿದ್ದಾರೆ.

ಈ ಘಟನೆ ತಿಳಿಯುತ್ತಿದ್ದಂತೆ ರೈತ ಸಂಘದವರು ಮಧ್ಯ ಪ್ರವೇಶಿಸಿದ ನಂತರ ರೈತನನ್ನು ಬಿಟ್ಟು ಕಳುಹಿಸಿದ್ದಾರೆ. ಆದರೆ ರೈತ ದೂರು ನೀಡಿ ಒಂದು ವಾರ ಕಳೆದರೂ ಹಲ್ಲೆ ಮಾಡಿದ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ಈ ವೇಳೆ ಐವತ್ತಕ್ಕೂ ಹೆಚ್ಚು ರೈತ ರೈತ ಮುಖಂಡರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

1 hour ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

1 hour ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

1 hour ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

1 hour ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

14 hours ago