Mysore
28
overcast clouds

Social Media

ಗುರುವಾರ, 20 ಆಗಸ್ಟ್ 2026
Light
Dark

ಕಳ್ಳಬೇಟೆ ತಡೆ ಶಿಬಿರ ಸ್ಫೋಟದ ಬೆನ್ನಲ್ಲೇ ಅರಣ್ಯಕ್ಕೆ ಬೆಂಕಿ: 10 ಎಕರೆ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿ ಧಾಮದ ಬಫರ್ ವಲಯದ ಶಿಲುಬೆಪುರ ಅರಣ್ಯ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಕಳ್ಳಬೇಟೆ ತಡೆ ಶಿಬಿರವನ್ನು ಸ್ಫೋಟಿಸಿದ ಬೆನ್ನಲ್ಲೇ ಇದೀಗ ಅರಣ್ಯಕ್ಕೂ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ಕಳೆದ ಎರಡು ದಿನಗಳಿಂದ ಈ ಭಾಗದಲ್ಲಿ ಉದ್ವಿಗ್ನತೆ ಮುಂದುವರೆದಿದೆ. ಬುಧವಾರ ರಾತ್ರಿ ಶಿಲುಬೆಪುರ ಅರಣ್ಯದ ವಿವಿಧ ಕಡೆಗಳಲ್ಲಿ ಬೆಂಕಿ ಹಚ್ಚಿದ್ದಾರೆ. ಸ್ಥಳೀಯರು ಮತ್ತು ಅರಣ್ಯ ಸಿಬ್ಬಂದಿ ಬೆಂಕಿ ನಂದಿಸಲು ಪರದಾಡಿದರೂ ಸುಮಾರು 10 ಎಕರೆ ಅರಣ್ಯ ಪ್ರದೇಶ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಮರಗಿಡಗಳು, ಪೊದೆಗಳು ಮತ್ತು ವನ್ಯಜೀವಿಗಳ ಆವಾಸಸ್ಥಾನಕ್ಕೆ ಭಾರಿ ಹಾನಿಯಾಗಿದೆ.

ಇದೇ ವೇಳೆ ಜಾಗೇರಿ ಬಳಿ ಇರುವ ಒಂದು ಕಳ್ಳಬೇಟೆ ತಡೆ ಶಿಬಿರವನ್ನು ದುಷ್ಕರ್ಮಿಗಳು ಧ್ವಂಸ ಮಾಡಿದ್ದಾರೆ. ಶಿಬಿರದಲ್ಲಿದ್ದ ಸಾಮಗ್ರಿಗಳನ್ನು ಒಡೆದು ಹಾಕಿ ಬೆಂಕಿ ಹಚ್ಚಿರುವುದಾಗಿ ಅರಣ್ಯ ಸಿಬ್ಬಂದಿ ತಿಳಿಸಿದ್ದಾರೆ.

ಹೊಳೆಮುರಿದಟ್ಟಿ ಶೂಟೌಟ್ ಪ್ರಕರಣದ ಬಳಿಕ ಈ ಭಾಗದಲ್ಲಿ ನಿರಂತರವಾಗಿ ಅಶಾಂತಿ ಕಂಡುಬರುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದ ಒಂದೊಂದೇ ವಿಡಿಯೋಗಳನ್ನು ಅರಣ್ಯ ಸಿಬ್ಬಂದಿ ಸಾಮಾಜಿಕ ಜಾಲತಾಣದಲ್ಲಿ ರಿಲೀಸ್ ಮಾಡುತ್ತಿದ್ದು, ಸತ್ಯಾಸತ್ಯತೆ ಹೊರಬರುತ್ತಿದೆ. ಆದರೂ ಕಿಡಿಗೇಡಿಗಳ ಹಾವಳಿ ಮಾತ್ರ ನಿಲ್ಲುತ್ತಿಲ್ಲ.

ಘಟನೆ ನಡೆದ ಸ್ಥಳಕ್ಕೆ ಹಿರಿಯ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಹಚ್ಚಿದ ಕಿಡಿಗೇಡಿಗಳ ಪತ್ತೆಗೆ ಬೇಟೆ ಆರಂಭಿಸಲಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಸೂಕ್ತ ಬಂದೋಬಸ್ತ್ ಕೂಡ ಮಾಡಲಾಗಿದೆ.

 

Tags:
error: Content is protected !!