ಚಾಮರಾಜನಗರ

ಕಳ್ಳಬೇಟೆ ತಡೆ ಶಿಬಿರ ಸ್ಫೋಟದ ಬೆನ್ನಲ್ಲೇ ಅರಣ್ಯಕ್ಕೆ ಬೆಂಕಿ: 10 ಎಕರೆ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿ ಧಾಮದ ಬಫರ್ ವಲಯದ ಶಿಲುಬೆಪುರ ಅರಣ್ಯ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಕಳ್ಳಬೇಟೆ ತಡೆ ಶಿಬಿರವನ್ನು ಸ್ಫೋಟಿಸಿದ ಬೆನ್ನಲ್ಲೇ ಇದೀಗ ಅರಣ್ಯಕ್ಕೂ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ಕಳೆದ ಎರಡು ದಿನಗಳಿಂದ ಈ ಭಾಗದಲ್ಲಿ ಉದ್ವಿಗ್ನತೆ ಮುಂದುವರೆದಿದೆ. ಬುಧವಾರ ರಾತ್ರಿ ಶಿಲುಬೆಪುರ ಅರಣ್ಯದ ವಿವಿಧ ಕಡೆಗಳಲ್ಲಿ ಬೆಂಕಿ ಹಚ್ಚಿದ್ದಾರೆ. ಸ್ಥಳೀಯರು ಮತ್ತು ಅರಣ್ಯ ಸಿಬ್ಬಂದಿ ಬೆಂಕಿ ನಂದಿಸಲು ಪರದಾಡಿದರೂ ಸುಮಾರು 10 ಎಕರೆ ಅರಣ್ಯ ಪ್ರದೇಶ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಮರಗಿಡಗಳು, ಪೊದೆಗಳು ಮತ್ತು ವನ್ಯಜೀವಿಗಳ ಆವಾಸಸ್ಥಾನಕ್ಕೆ ಭಾರಿ ಹಾನಿಯಾಗಿದೆ.

ಇದೇ ವೇಳೆ ಜಾಗೇರಿ ಬಳಿ ಇರುವ ಒಂದು ಕಳ್ಳಬೇಟೆ ತಡೆ ಶಿಬಿರವನ್ನು ದುಷ್ಕರ್ಮಿಗಳು ಧ್ವಂಸ ಮಾಡಿದ್ದಾರೆ. ಶಿಬಿರದಲ್ಲಿದ್ದ ಸಾಮಗ್ರಿಗಳನ್ನು ಒಡೆದು ಹಾಕಿ ಬೆಂಕಿ ಹಚ್ಚಿರುವುದಾಗಿ ಅರಣ್ಯ ಸಿಬ್ಬಂದಿ ತಿಳಿಸಿದ್ದಾರೆ.

ಹೊಳೆಮುರಿದಟ್ಟಿ ಶೂಟೌಟ್ ಪ್ರಕರಣದ ಬಳಿಕ ಈ ಭಾಗದಲ್ಲಿ ನಿರಂತರವಾಗಿ ಅಶಾಂತಿ ಕಂಡುಬರುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದ ಒಂದೊಂದೇ ವಿಡಿಯೋಗಳನ್ನು ಅರಣ್ಯ ಸಿಬ್ಬಂದಿ ಸಾಮಾಜಿಕ ಜಾಲತಾಣದಲ್ಲಿ ರಿಲೀಸ್ ಮಾಡುತ್ತಿದ್ದು, ಸತ್ಯಾಸತ್ಯತೆ ಹೊರಬರುತ್ತಿದೆ. ಆದರೂ ಕಿಡಿಗೇಡಿಗಳ ಹಾವಳಿ ಮಾತ್ರ ನಿಲ್ಲುತ್ತಿಲ್ಲ.

ಘಟನೆ ನಡೆದ ಸ್ಥಳಕ್ಕೆ ಹಿರಿಯ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಹಚ್ಚಿದ ಕಿಡಿಗೇಡಿಗಳ ಪತ್ತೆಗೆ ಬೇಟೆ ಆರಂಭಿಸಲಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಸೂಕ್ತ ಬಂದೋಬಸ್ತ್ ಕೂಡ ಮಾಡಲಾಗಿದೆ.

 

ಆಂದೋಲನ ಡೆಸ್ಕ್

Recent Posts

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

23 mins ago

ಓದುಗರ ಪತ್ರ: ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಪ್ರಶ್ನಾರ್ಹ

ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…

7 hours ago

ಓದುಗರ ಪತ್ರ: ಎನ್‌ಕೌಂಟರ್ ನಿಗೂಢತೆ?

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…

8 hours ago

ಓದುಗರ ಪತ್ರ: ಜಂಬೂಸವಾರಿಯ ಹೊಸ ಸಾರಥಿ ಯಾರು?

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…

8 hours ago

ಧ್ವನಿಹೀನರಿಗೆ ಧ್ವನಿಯಾಗಿದ್ದ ದೇವರಾಜ ಅರಸು

ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…

8 hours ago

ನೀರಿಲ್ಲದಿದ್ದರೂ ಭರ್ತಿಯಾಗುತ್ತಿದೆ ಕಸುವಿನಹಳ್ಳಿ ಕೆರೆ!

ಎಸ್.ಎಸ್.ಭಟ್ ಸುತ್ತಲಿನ ಕ್ರಷರ್‌ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…

8 hours ago