ಚಾಮರಾಜನಗರ

ಹುಲಿ ದಾಳಿಗೆ ಅರಣ್ಯ ಸಿಬ್ಬಂದಿ ಬಲಿ

ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಅರಣ್ಯ ಇಲಾಖೆಯ ಮರಳಳ್ಳ ಕ್ಯಾಂಪ್ ಬಳಿ ಕರ್ತವ್ಯ ನಿರ್ವಹಿಸುತಿದ್ದ ಸಣ್ಣಹೈದ( ೫೫) ಹುಲಿ ದಾಳಿಗೆ ಬಲಿಯಾಗಿರುವ ಘಟನೆ ನಡೆದಿದೆ.

ಅನೇಕ ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಎಂ,ಆರ್ ನೌಕರನಾಗಿ ಕೆಲಸ ನಿರ್ವಹಿಸುತಿದ್ದ ಎನ್ನಲಾಗಿದೆ.

ಬೆಳಿಗ್ಗೆ ಕ್ಯಾಂಪ್ ನಲ್ಲಿ ತಿಂಡಿ ತಿಂದು ಹೊರ ಬಂದಿದ್ದಾರೆ ಕ್ಯಾಂಪ್ ನಿಂದ ೫೦೦ ಮೀಟರ್ ಅಂತರದಲ್ಲಿ ಸಾವನ್ನಪ್ಪಿದ್ದಾರೆ. ಬಂಡೀಪುರ ಮರಳಹಳ್ಳ ಕ್ಯಾಂಪ್‌ ಬಳಿ ಗಸ್ತು ತಿರುಗುತ್ತಿದ್ದ ವೇಳೆ ವಾಚರ್‌ ಮೇಲೆ ಹುಲಿ ದಾಳಿ ನಡೆಸಿದೆ ಎನ್ನಲಾಗಿದೆ.

ಇದನ್ನು ಓದಿ:ಲೋಕ್ ಅದಾಲತ್‌ನಲ್ಲಿ 14,850 ಪ್ರಕರಣ ಇತ್ಯರ್ಥ : ಒಂದಾದ ಕೌಟುಂಬಿಕ ಕಲಹದಿಂದ ಬೇರ್ಪಟ್ಟಿದ್ದ 6 ದಂಪತಿಗಳು

ಮೃತ ಸಣ್ಣಹೈದ ಹುಣಸೂರು ಮೂಲದ ನೇರಳೆಕುಪ್ಪಿ ಎಂಬ ಗ್ರಾಮದವರಾಗಿದ್ದು ಮೃತನಿಗೆ ಪತ್ನಿ ಹಾಗೂ ಐವರು ಮಕ್ಕಳಿದ್ದು ಒಬ್ಬ ಪುತ್ರ ಅರಣ್ಯ ಇಲಾಖೆಯಲ್ಲಿಯೇ ಕರ್ತವ್ಯ ನಿರ್ವಹಿಸುತಿದ್ದಾರೆ.

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರಣ್ಯ ಇಲಾಖೆಯಿಂದ ಮೃತ ನೌಕರನ ಕುಟುಂಬಕ್ಕೆ ೪೫ ಲಕ್ಷ ಪರಿಹಾರ ನೀಡುವುದಾಗಿ ಬಂಡೀಪುರ ವಲಯಾಧಿಕಾರಿ ಮಹದೇವ್ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

4 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

5 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

5 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

6 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

6 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

6 hours ago