ಚಾಮರಾಜನಗರ

ಹುಲಿ ದಾಳಿಗೆ ಅರಣ್ಯ ಸಿಬ್ಬಂದಿ ಬಲಿ

ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಅರಣ್ಯ ಇಲಾಖೆಯ ಮರಳಳ್ಳ ಕ್ಯಾಂಪ್ ಬಳಿ ಕರ್ತವ್ಯ ನಿರ್ವಹಿಸುತಿದ್ದ ಸಣ್ಣಹೈದ( ೫೫) ಹುಲಿ ದಾಳಿಗೆ ಬಲಿಯಾಗಿರುವ ಘಟನೆ ನಡೆದಿದೆ.

ಅನೇಕ ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಎಂ,ಆರ್ ನೌಕರನಾಗಿ ಕೆಲಸ ನಿರ್ವಹಿಸುತಿದ್ದ ಎನ್ನಲಾಗಿದೆ.

ಬೆಳಿಗ್ಗೆ ಕ್ಯಾಂಪ್ ನಲ್ಲಿ ತಿಂಡಿ ತಿಂದು ಹೊರ ಬಂದಿದ್ದಾರೆ ಕ್ಯಾಂಪ್ ನಿಂದ ೫೦೦ ಮೀಟರ್ ಅಂತರದಲ್ಲಿ ಸಾವನ್ನಪ್ಪಿದ್ದಾರೆ. ಬಂಡೀಪುರ ಮರಳಹಳ್ಳ ಕ್ಯಾಂಪ್‌ ಬಳಿ ಗಸ್ತು ತಿರುಗುತ್ತಿದ್ದ ವೇಳೆ ವಾಚರ್‌ ಮೇಲೆ ಹುಲಿ ದಾಳಿ ನಡೆಸಿದೆ ಎನ್ನಲಾಗಿದೆ.

ಇದನ್ನು ಓದಿ:ಲೋಕ್ ಅದಾಲತ್‌ನಲ್ಲಿ 14,850 ಪ್ರಕರಣ ಇತ್ಯರ್ಥ : ಒಂದಾದ ಕೌಟುಂಬಿಕ ಕಲಹದಿಂದ ಬೇರ್ಪಟ್ಟಿದ್ದ 6 ದಂಪತಿಗಳು

ಮೃತ ಸಣ್ಣಹೈದ ಹುಣಸೂರು ಮೂಲದ ನೇರಳೆಕುಪ್ಪಿ ಎಂಬ ಗ್ರಾಮದವರಾಗಿದ್ದು ಮೃತನಿಗೆ ಪತ್ನಿ ಹಾಗೂ ಐವರು ಮಕ್ಕಳಿದ್ದು ಒಬ್ಬ ಪುತ್ರ ಅರಣ್ಯ ಇಲಾಖೆಯಲ್ಲಿಯೇ ಕರ್ತವ್ಯ ನಿರ್ವಹಿಸುತಿದ್ದಾರೆ.

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರಣ್ಯ ಇಲಾಖೆಯಿಂದ ಮೃತ ನೌಕರನ ಕುಟುಂಬಕ್ಕೆ ೪೫ ಲಕ್ಷ ಪರಿಹಾರ ನೀಡುವುದಾಗಿ ಬಂಡೀಪುರ ವಲಯಾಧಿಕಾರಿ ಮಹದೇವ್ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

12 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

13 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

14 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

14 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

18 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

19 hours ago