ಚಾಮರಾಜನಗರ

ಚಾಮರಾಜನಗರ: ಬದನಗುಪ್ಪೆಯಲ್ಲಿ ಮುತ್ತಯ್ಯ ಮುರಳೀಧರನ್ 1400 ಕೋಟಿ ಹೂಡಿಕೆ

ಚಾಮರಾಜನಗರ: ಶ್ರೀಲಂಕಾ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ನಿವೃತ್ತಿಯ ಬಳಿಕ ಉದ್ಯಮದತ್ತ ಮುಖ ಮಾಡಿದ್ದು, ಸ್ವದೇಶದಲ್ಲಿ ಆರಂಭಿಸಿದ್ದ ತಂಪು‌ ಪಾನೀಯ ತಯಾರಿಕಾ ಉದ್ಯಮವನ್ನು ಈಗ ಚಾಮರಾಜನಗರ ಬದನಗುಪ್ಪೆಗೂ ವಿಸ್ತರಿಸಿದ್ದಾರೆ.

ಈ ಕುರಿತು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ತಿಳಿಸಿದ್ದಾರೆ‌. ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ‌ ಮಾಡಿದ ಮುರಳೀಧರನ್ ತಮ್ಮ ಯೋಜನೆ ಕುರಿತು ಚರ್ಚಿಸಿದ್ದಾರೆ.

‘ಮುತ್ತಯ್ಯ ಬೆವರೇಜಸ್ ಅಂಡ್ ಕನ್ಫೆಕ್ಷನರಿ ಪ್ರೈವೇಟ್ ಲಿಮಿಟೆಡ್’ ಸಂಸ್ಥೆಯಡಿಯಲ್ಲಿ ಮುತ್ತಯ್ಯ ಮುರಳೀಧರನ್ ಬದನಗುಪ್ಪೆಯಲ್ಲಿ 1400 ಕೋಟಿ ರೂಪಾಯಿಗಳ ಹೂಡಿಕೆ ಮಾಡಲು ಮುಂದಾಗಿದ್ದಾರೆ.

ಆರಂಭದಲ್ಲಿ 250 ಕೋಟಿ ರೂಪಾಯಿಗಳ ಹೂಡಿಕೆ ಮಾಡಲು ಮುರಳೀಧರನ್ ನಿರ್ಧರಿಸಿದ್ದರು. ಆದರೆ ಈಗಾಗಲೇ ಮೊತ್ತ 1000 ಕೋಟಿ ಮುಟ್ಟಿದ್ದು, ಮುಂದಿನ ದಿನಗಳಲ್ಲಿ 1400 ಕೋಟಿ ನಿರೀಕ್ಷೆಗಳಿವೆ ಎಂದು ತಿಳಿಸಲಾಗಿದೆ.

ಎಂಬಿ ಪಾಟೀಲ್ ಎಕ್ಸ್ ಪೋಸ್ಟ್ ಹೀಗಿದೆ: ವಿಶ್ವವಿಖ್ಯಾತ ಸ್ಪಿನ್ ಬೌಲರ್ ಶ್ರೀಲಂಕಾದ ಶ್ರೀ ಮುತ್ತಯ್ಯ ಮುರಳೀಧರನ್ ತಮ್ಮ ಕ್ರಿಕೆಟ್ ನಿವೃತ್ತಿ ಬಳಿಕ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದು, ಈಗಾಗಲೇ ತಮ್ಮ ದೇಶದಲ್ಲಿ ತಂಪು ಪಾನೀಯ ಉತ್ಪಾದನಾ ಘಟಕವನ್ನು ಹೊಂದಿದ್ದಾರೆ. ತಮ್ಮ ವಹಿವಾಟನ್ನು ಮತ್ತಷ್ಟು ವಿಸ್ತರಿಸುವ ಸಲುವಾಗಿ ನಮ್ಮ ರಾಜ್ಯವನ್ನು ಆಯ್ಕೆಮಾಡಿಕೊಂಡಿರುವುದು ಸಂತಸದ ಸಂಗತಿ.

ಚಾಮರಾಜನಗರ ಜಿಲ್ಲೆಯಲ್ಲಿ ಉತ್ಪಾದನಾ ಘಟಕ ಸ್ಥಾಪಿಸುತ್ತಿದ್ದು, ಆರಂಭದಲ್ಲಿ ರೂ. 250 ಕೋಟಿ ಹೂಡಿಕೆ ಮಾಡಲು ನಿರ್ಧರಿಸಿದ್ದರು, ಆದರೆ ರೂ. 1,000 ಕೋಟಿ ಮುಟ್ಟತ್ತಿದೆ. ಮುಂದಿನ ದಿನಗಳಲ್ಲಿ ರೂ. 1,400 ಕೋಟಿ ತಲುಪುವ ನಿರೀಕ್ಷೆಗಳಿವೆ. ಇದೇ ಸಂದರ್ಭದಲ್ಲಿ ಧಾರವಾಡದಲ್ಲಿ ಘಟಕ ಸ್ಥಾಪನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಉತ್ತರಿಸಿದರು. ಸಣ್ಣ ಪುಟ್ಟ ಸಮನ್ವಯಕ್ಕೆ ಸಂಬಂಧಿಸಿದಂತೆ ಈದಿನ ಚರ್ಚೆಗಳು ನಡೆಯಿತು. ಅಗತ್ಯದ ನೆರವು ನೀಡುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿರುವೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮೇ.20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…

8 hours ago

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

9 hours ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

10 hours ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

10 hours ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

11 hours ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

13 hours ago