ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದ ವ್ಯಕ್ತಿಯನ್ನು ಮಾಜಿ ಶಾಸಕ ಆರ್.ನರೇಂದ್ರ ಅವರು ತಮ್ಮ ವಾಹನದಲ್ಲಿಯೇ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.
ಹನೂರು ತಾಲ್ಲೂಕಿನ ಎಲ್ಲೇಮಾಳ ಗ್ರಾಮದ ಮಹದೇವ ಎಂಬುವವರು ಕೆಲಸದ ನಿಮಿತ್ತ ಹನೂರು ಪಟ್ಟಣಕ್ಕೆ ಹೋಗಿದ್ದರು. ಬಳಿಕ ಕೆಲಸ ಮುಗಿಸಿ ಎಲ್ಲೇಮಾಳ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಮುಖ್ಯ ರಸ್ತೆಯಲ್ಲಿ ಕೋತಿಯೊಂದು ಅಡ್ಡ ಬಂದಿತ್ತು. ಕೋತಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಬಿದ್ದು ಗಾಯಗೊಂಡಿದ್ದರು.
ಇದೇ ರಸ್ತೆಯ ಮೂಲಕ ಹನೂರಿಗೆ ಹೋಗುತ್ತಿದ್ದ ಮಾಜಿ ಶಾಸಕ ಆರ್.ನರೇಂದ್ರ ಅವರು ಅಪಘಾತದ ದೃಶ್ಯವನ್ನು ಕಂಡು, ಗಾಯಗೊಂಡಿದ್ದ ಮಹದೇವರನ್ನು ತಮ್ಮ ಕಾರಿನಲ್ಲೇ ಆಸ್ಪತ್ರೆಗೆ ದಾಖಲಿಸಿದರು.
ಈ ವೇಳೆ ಪಟ್ಟಣ ಪಂಚಾಯಿತಿ ಸದಸ್ಯ ಗಿರೀಶ್, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚೇತನ್ ಸಹ ಇದ್ದರು.
ಗಾಯಾಳು ಮಹದೇವ ಎಂಬುವವರನನ್ನು ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಚಾಮರಾಜನಗರ ಸಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲು ಕಳುಹಿಸಿಕೊಟ್ಟರು.
ಈ ವೇಳೆ ಮಾತನಾಡಿದ ಮಾಜಿ ಶಾಸಕ ನರೇಂದ್ರ ಅವರು, ಪ್ರತಿಯೊಬ್ಬ ವಾಹನ ಸವಾರರು ತಮ್ಮ ಆರೋಗ್ಯದ ದೃಷ್ಟಿಯಿಂದ ಸಂಚಾರ ಮಾಡುವಾಗ ಕಡ್ಡಾಯವಾಗಿ ಹೆಲ್ಮೆಟ್ ಬಳಸಿ. ಸರ್ಕಾರವು ವಾಹನ ಸವಾರರ ಪ್ರಾಣ ರಕ್ಷಣೆಯ ದೃಷ್ಟಿಯಿಂದ ಹಲವಾರು ಸಂಚಾರಿ ನಿಯಮಗಳನ್ನು ಅನುಷ್ಠಾನಗೊಳಿಸಿದೆ. ಪ್ರತಿಯೊಬ್ಬರು ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಬೇಕು. ಈ ಮೂಲಕ ನಿಯಮ ಪಾಲನೆ ಮಾಡಬೇಕು ಎಂದು ಮನವಿ ಮಾಡಿದರು.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…