ಚಾಮರಾಜನಗರ

ಅಕ್ಕ ಮಾರಮ್ಮ ದೇವಸ್ಥಾನ ನಿರ್ಮಾಣಕ್ಕೆ ಮಾಜಿ ಶಾಸಕ ಆರ್.ನರೇಂದ್ರ ಭೂಮಿ ಪೂಜೆ

ಹನೂರು: ತಾಲ್ಲೂಕಿನ ಕೌದಳ್ಳಿ ಗ್ರಾಮದ ನಾಯಕ ಸಮುದಾಯದ ಬಡಾವಣೆಯಲ್ಲಿ ನೂತನವಾಗಿ ಅಕ್ಕ ಮಾರಮ್ಮ ದೇವಸ್ಥಾನ ನಿರ್ಮಾಣ ಮಾಡಲು ಮಾಜಿ ಶಾಸಕ ಆರ್ ನರೇಂದ್ರ ಭೂಮಿ ಪೂಜೆ ಸಲ್ಲಿಸಿದರು.

ನಂತರ ಮಾಜಿ ಶಾಸಕ ಆರ್.ನರೇಂದ್ರ ಮಾತನಾಡಿ, ಕೌದಳ್ಳಿ ಗ್ರಾಮದಲ್ಲಿ ನಾಯಕ ಸಮುದಾಯದವರು ಒಂದು ಕೋಟಿ ಇಪ್ಪತ್ತು ಲಕ್ಷಕ್ಕೂ ಹೆಚ್ಚು ವೆಚ್ಚದಲ್ಲಿ ವಿನೂತನ ಮಾದರಿಯಲ್ಲಿ ಅಕ್ಕ ಮಾರಮ್ಮ ದೇವಾಲಯ ನಿರ್ಮಾಣ ಮಾಡುತ್ತಿರುವುದು ಸಂತಸದ ವಿಚಾರ. ನಮ್ಮ ಹಿಂದೂ ಧರ್ಮದವರು ಮಾರಮ್ಮ, ಮಲೆ ಮಹದೇಶ್ವರ, ಸಿದ್ದಪ್ಪಾಜಿ, ವೆಂಕಟೇಶ್ವರ ಸ್ವಾಮಿ ಸೇರಿದಂತೆ ನೂರಾರು ದೇವತೆಗಳನ್ನು ಪೂಜಿಸುವುದು ಸಂಪ್ರದಾಯ. ಇದೇ ನಿಟ್ಟಿನಲ್ಲಿ ಗ್ರಾಮಸ್ಥರು ಹಾಗೂ ದಾನಿಗಳ ಸಹಕಾರದಿಂದ ದೇವಾಲಯ ನಿರ್ಮಾಣ ಮಾಡುತ್ತಿದ್ದಾರೆ. ಈ ದೇವಾಲಯದ ಕಾಮಗಾರಿ ಆದಷ್ಟು ಬೇಗ ಪೂರ್ಣಗೊಂಡು ಭಕ್ತರಿಗೆ ಮಾರಮ್ಮನ ಆಶೀರ್ವಾದ ಸಿಗಲಿ ಎಂದು ಶುಭ ಹಾರೈಸಿದರು.

ಸಮುದಾಯ ಭವನಕ್ಕೆ ಭೇಟಿ: ನಾನು ಶಾಸಕನಾಗಿದ್ದಾಗ ಕೌದಳ್ಳಿ ಗ್ರಾಮದ ನಾಯಕ ಸಮುದಾಯದವರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸಮುದಾಯ ಭವನ ನಿರ್ಮಾಣ ಮಾಡಲು 50 ಲಕ್ಷ ಅನುದಾನ ಮಂಜೂರು ಮಾಡಿಸಿದ್ದೆ, ಇದೀಗ ಮೊದಲ ಅಂತಸ್ತಿನ ಕಟ್ಟಡ ಪೂರ್ಣಗೊಂಡಿದ್ದು, ಎರಡನೇ ಅಂತಸ್ತು ಹಾಗೂ ಅಡುಗೆ ಮನೆಗೆ ಅನುದಾನ ಕೊಡಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಸಚಿವರುಗಳನ್ನು ಭೇಟಿ ಮಾಡಿ ಸಮುದಾಯ ಭವನಕ್ಕೆ ಅನುದಾನ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಈ ವೇಳೆ ವಿವಿಧ ಸಮುದಾಯದ ಮುಖಂಡರುಗಳು, ಯಜಮಾನರು, ಸಮುದಾಯದ ಯುವ ಮುಖಂಡರುಗಳ ಹಾಜರಿದ್ದರು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಅನುಕೂಲವಾಗಿಲ್ಲ: ಡಿಸಿಎಂ ಡಿ.ಕೆ.ಶಿ ಆಕ್ರೋಶ

ರಾಮನಗರ: ರಾಜ್ಯಕ್ಕೆ ಇಷ್ಟರ ಮಟ್ಟಿಗೆ ಅನ್ಯಾಯ ಮಾಡುತ್ತಾರೆ ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ ಎಂದು ಕೇಂದ್ರ ಬಜೆಟ್‌ ಬಗ್ಗೆ…

15 mins ago

ಹನೂರು: ಪಾದಯಾತ್ರಿಕರು ಬಿಸಾಡುವ ಕಸ ಸಂಗ್ರಹಣೆ ಡಬ್ಬ ನಿರ್ಮಾಣ ಕಾಮಗಾರಿಗೆ ಚಾಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ…

2 hours ago

ಕೇಂದ್ರ ಬಜೆಟ್‌ಗೆ ರಾಜ್ಯ ಬಿಜೆಪಿ ನಾಯಕರ ಮೆಚ್ಚುಗೆ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ…

2 hours ago

ಮಂಡ್ಯ| ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮಂಡ್ಯ‌: ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…

4 hours ago

ಬಜೆಟ್‌ ದೇಶದ ಅಭಿವೃದ್ಧಿಗೆ ಹೊಸ ಸ್ಪರ್ಶ ತುಂಬಲಿದೆ: ಪ್ರಧಾನಿ ಮೋದಿ

ನವದೆಹಲಿ: 2026ರ ಬಜೆಟ್‌ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು…

4 hours ago

ಬಜೆಟ್‌ನಲ್ಲಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಕ್ಕೆ ಮತ್ತೆ ಅನ್ಯಾಯ: ಈಶ್ವರ ಖಂಡ್ರೆ

ಬೆಂಗಳೂರು: ಭಾನುವಾರ ಮಂಡಿಸಲಾದ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ರಜೆ ನೀಡುವಂತಿದೆ. ಸಂಪೂರ್ಣ ನಿರಾಶಾದಾಯಕವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು…

4 hours ago