ಹನೂರು: ತಾಲ್ಲೂಕಿನ ಕೌದಳ್ಳಿ ಗ್ರಾಮದ ನಾಯಕ ಸಮುದಾಯದ ಬಡಾವಣೆಯಲ್ಲಿ ನೂತನವಾಗಿ ಅಕ್ಕ ಮಾರಮ್ಮ ದೇವಸ್ಥಾನ ನಿರ್ಮಾಣ ಮಾಡಲು ಮಾಜಿ ಶಾಸಕ ಆರ್ ನರೇಂದ್ರ ಭೂಮಿ ಪೂಜೆ ಸಲ್ಲಿಸಿದರು.
ನಂತರ ಮಾಜಿ ಶಾಸಕ ಆರ್.ನರೇಂದ್ರ ಮಾತನಾಡಿ, ಕೌದಳ್ಳಿ ಗ್ರಾಮದಲ್ಲಿ ನಾಯಕ ಸಮುದಾಯದವರು ಒಂದು ಕೋಟಿ ಇಪ್ಪತ್ತು ಲಕ್ಷಕ್ಕೂ ಹೆಚ್ಚು ವೆಚ್ಚದಲ್ಲಿ ವಿನೂತನ ಮಾದರಿಯಲ್ಲಿ ಅಕ್ಕ ಮಾರಮ್ಮ ದೇವಾಲಯ ನಿರ್ಮಾಣ ಮಾಡುತ್ತಿರುವುದು ಸಂತಸದ ವಿಚಾರ. ನಮ್ಮ ಹಿಂದೂ ಧರ್ಮದವರು ಮಾರಮ್ಮ, ಮಲೆ ಮಹದೇಶ್ವರ, ಸಿದ್ದಪ್ಪಾಜಿ, ವೆಂಕಟೇಶ್ವರ ಸ್ವಾಮಿ ಸೇರಿದಂತೆ ನೂರಾರು ದೇವತೆಗಳನ್ನು ಪೂಜಿಸುವುದು ಸಂಪ್ರದಾಯ. ಇದೇ ನಿಟ್ಟಿನಲ್ಲಿ ಗ್ರಾಮಸ್ಥರು ಹಾಗೂ ದಾನಿಗಳ ಸಹಕಾರದಿಂದ ದೇವಾಲಯ ನಿರ್ಮಾಣ ಮಾಡುತ್ತಿದ್ದಾರೆ. ಈ ದೇವಾಲಯದ ಕಾಮಗಾರಿ ಆದಷ್ಟು ಬೇಗ ಪೂರ್ಣಗೊಂಡು ಭಕ್ತರಿಗೆ ಮಾರಮ್ಮನ ಆಶೀರ್ವಾದ ಸಿಗಲಿ ಎಂದು ಶುಭ ಹಾರೈಸಿದರು.
ಸಮುದಾಯ ಭವನಕ್ಕೆ ಭೇಟಿ: ನಾನು ಶಾಸಕನಾಗಿದ್ದಾಗ ಕೌದಳ್ಳಿ ಗ್ರಾಮದ ನಾಯಕ ಸಮುದಾಯದವರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸಮುದಾಯ ಭವನ ನಿರ್ಮಾಣ ಮಾಡಲು 50 ಲಕ್ಷ ಅನುದಾನ ಮಂಜೂರು ಮಾಡಿಸಿದ್ದೆ, ಇದೀಗ ಮೊದಲ ಅಂತಸ್ತಿನ ಕಟ್ಟಡ ಪೂರ್ಣಗೊಂಡಿದ್ದು, ಎರಡನೇ ಅಂತಸ್ತು ಹಾಗೂ ಅಡುಗೆ ಮನೆಗೆ ಅನುದಾನ ಕೊಡಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಸಚಿವರುಗಳನ್ನು ಭೇಟಿ ಮಾಡಿ ಸಮುದಾಯ ಭವನಕ್ಕೆ ಅನುದಾನ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಈ ವೇಳೆ ವಿವಿಧ ಸಮುದಾಯದ ಮುಖಂಡರುಗಳು, ಯಜಮಾನರು, ಸಮುದಾಯದ ಯುವ ಮುಖಂಡರುಗಳ ಹಾಜರಿದ್ದರು.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…