ಚಾಮರಾಜನಗರ

ಗುಂಡಲ್ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಮಾಜಿ ಶಾಸಕ ಆರ್.ನರೇಂದ್ರ

ಹನೂರು: ತಾಲೂಕಿನ 20 ಕ್ಕೂ ಹೆಚ್ಚು ಕೆರೆಗಳಿಗೆ ನೀರು ತುಂಬಿಸಲು ಕ್ಯಾಬಿನೆಟ್ ನಲ್ಲಿ ಅನುಮೋದನೆ ನೀಡಿ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಲಾಗಿದೆ ಎಂದು ಮಾಜಿ ಶಾಸಕ ಆರ್ ನರೇಂದ್ರ ತಿಳಿಸಿದರು.

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯ ವ್ಯಾಪ್ತಿಯ ಅಚ್ಚುಕಟ್ಟು ರೈತರುಗಳು ಹಮ್ಮಿಕೊಂಡಿದ್ದ ಬಾಗಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೈತರುಗಳು ಆರ್ಥಿಕವಾಗಿ ಸದೃಢರಾದರೆ ಮಾತ್ರ ಕ್ಷೇತ್ರ ಅಭಿವೃದ್ಧಿ ಆಗುತ್ತದೆ ಎಂಬ ದೂರದೃಷ್ಟಿಯ ಫಲವಾಗಿ ಗುಂಡಾಲ್ ಜಲಾಶಯ, ಹುಬ್ಬೆ ಹುಣಸೆ, ರಾಮನಗುಡ್ಡ, ಉಡುತೊರೆ ಜಲಾಶಯ, ಕೌಳಿ ಹಳ್ಳ ಡ್ಯಾಮ್, ಹೂಗ್ಯಂ ಜಲಾಶಯ, ಕಿರೇ ಪಾತಿ ಜಲಾಶಯ, ಗೋಪಿನಾಥಂ ಜಲಾಶಯವನ್ನು ನಮ್ಮ ತಂದೆಯವರಾದ ದಿ.ಜಿ ರಾಜುಗೌಡ ಹಾಗೂ ದೊಡ್ಡಪ್ಪ ದಿ. ಜಿ.ವೆಂಕಟೇಗೌಡರವರ ಶಾಸಕರಾಗಿದ್ದಾಗ ನಿರ್ಮಾಣ ಮಾಡಲಾಗಿದೆ.

ಹುಬ್ಬೆ ಹುಣಸೆ ಜಲಾಶಯ ಮಾತ್ರ ನನ್ನ ಅವಧಿಯಲ್ಲಿ 5.5 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಿದ್ದೇನೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕ್ಷೇತ್ರ ವ್ಯಾಪ್ತಿಯಲ್ಲಿರುವ ಎಲ್ಲಾ ಜಲಾಶಯಗಳಿಗೆ ನೀರು ತುಂಬಿದರೆ 40 ಸಾವಿರ ಎಕರೆ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಸಿಗಲಿದೆ. ಈ ನಿಟ್ಟಿನಲ್ಲಿ ಮೊದಲ ಹಂತದಲ್ಲಿ 127 ಕೋಟಿ ವೆಚ್ಚದಲ್ಲಿ ಗುಂಡಾಲ್, ರಾಮನಗುಡ್ಡ, ಹುಬ್ಬೆ ಹುಣಸೆ ಜಲಾಶಯಗಳಿಗೆ ನದಿ ಮೂಲದಿಂದ ನೀರು ತುಂಬಿಸುವ ಯೋಜನೆಗೆ ಅನುಮೋದನೆ ಪಡೆದು ಕಾಮಗಾರಿ ಅಂತಿಮ ಹಂತದಲ್ಲಿದೆ. ಅನುದಾನದ ಕೊರತೆಯಿಂದ ರಾಮನ ಗುಡ್ಡ ಹಾಗೂ ಹುಬ್ಬೆ ಹುಣಸೆ ಜಲಾಶಯಕ್ಕೆ ನೀರು ತುಂಬಿಸುವ ಕಾಮಗಾರಿ ಸ್ಥಗಿತವಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಜಲ ಸಂಪನ್ಮೂಲ ಸಚಿವರಾದ ಡಿ.ಕೆ ಶಿವಕುಮಾರ್ ಅವರಿಗೆ ಒಂಬತ್ತು ಕೋಟಿ ಅನುದಾನ ನೀಡುವಂತೆ ಮನವಿ ನೀಡಲಾಗಿದ್ದು ಅವರು ಸಹ ಅನುದಾನ ನೀಡುವ ಭರವಸೆ ನೀಡಿದ್ದಾರೆ. ಅನುದಾನ ನೀಡಿದ ತಕ್ಷಣ ಕಾಮಗಾರಿ ಪೂರ್ಣಗೊಂಡರೆ ಸುಮಾರು 20,000 ಎಕರೆಗೆ ನೀರಾವರಿ ಸೌಲಭ್ಯ ಸಿಗಲಿದೆ ಎಂದರು.

1400 ಕೋಟಿ ಯೋಜನೆಗಳಿಗೆ ಕ್ರಿಯಾಯೋಜನೆ:

ನಾನು ಮೂರನೇ ಬಾರಿ ಶಾಸಕನಾಗಿದ್ದಾಗ ಉಡುತೊರೆ ಜಲಾಶಯಕ್ಕೆ ಕೆರೆ ನೀರು ತುಂಬಿಸಲು 200 ಕೋಟಿ ವೆಚ್ಚದಲ್ಲಿ ಕ್ರಿಯಾಯೋಜನೆ ಮಾಡಿ ಕಳುಹಿಸಲಾಗಿತ್ತು. ಅನುಮೋದನೆ ಹಂತಕ್ಕೆ ತಲುಪಿದ ನಂತರ ಅದು ಸ್ಥಗಿತವಾಗಿದೆ. ಈ ಬಾರಿ ಈ ಯೋಜನೆಗೂ ಅನುದಾನ ನೀಡುವಂತೆ ಮನವಿ ಮಾಡಿದ್ದೇನೆ ಇದಲ್ಲದೆ ಮುಖ್ಯ ಕಾಲುವೆ, ತೋಬು ಕಾಲುವೆ, ಹಾಗೂ ಕಾಲುವೆಗಳಲ್ಲಿ ತುಂಬಿರುವ ಹೂಳು ತೆಗೆಯಲು ಅನುದಾನ ಕೇಳಿದ್ದು ಸರ್ಕಾರ ಅನುದಾನ ನೀಡಿದರೆ ಇನ್ನಷ್ಟು ಅಭಿವೃದ್ಧಿಯಾಗಲಿದೆ ಎಂದು ತಿಳಿಸಿದರು.

12 ಹಾಡಿಗಳಿಗೆ ವಿದ್ಯುತ್ ಸಂಪರ್ಕ:

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 32 ಹಾಡಿಗಳಲ್ಲಿ ವಿದ್ಯುತ್ ಸಂಪರ್ಕವಿಲ್ಲದೆ ತೊಂದರೆ ಅನುಭವಿಸುತ್ತಿದ್ದರು ನಾನು ಶಾಸಕನಾಗಿ ಆಯ್ಕೆಯಾದ ನಂತರ 20 ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕೊಡಿಸಿದ್ದೇನೆ. ಉಳಿದ 12 ಹಾಡುಗಳಿಗೂ ವಿದ್ಯುತ್ ಸಂಪರ್ಕ ನೀಡಲು ಕ್ರಿಯೆ ಯೋಜನೆ ಮಾಡಿ ಅನುಮೋದನೆಗಾಗಿ ಕಳುಹಿಸಲಾಗಿತ್ತು .ಈಗ ಅನುಮೋದನೆ ಸಿಕ್ಕಿದ್ದು ಅತಿ ಶೀಘ್ರದಲ್ಲಿಯೇ ಈ ಹಾಡಿಗಳಿಗೂ ವಿದ್ಯುತ್ ಸಂಪರ್ಕ ಸಿಗಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್, ಕೊಳ್ಳೇಗಾಲ, ಯಳಂದೂರು, ಹನೂರು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಕೆ ಸಿ ಮಾದೇಶ್, ಟಿಎಪಿಸಿಎಂಎಸ್ ಅಧ್ಯಕ್ಷ ಗೋವಿಂದ, ಪಟ್ಟಣ ಪಂಚಾಯಿತಿ ಸದಸ್ಯರಾದ ಗಿರೀಶ್ ಹರೀಶ್ ನವೀನ್, ಮುಖಂಡರಾದ ವೆಂಕಟರಮಣ ನಾಯ್ಡು, ಕಾಮಗೆರೆ ಕುಮಾರ್ ಗೌಡ, ನವನೀತ್ ಗೌಡ, ಕಾಮಗೆರೆ ರವಿ, ಪ್ರದೀಪ್, ಉದ್ದನೂರು ಸಿದ್ದರಾಜು, ಚೇತನ್ ದೊರೆರಾಜು, ಚಿಕ್ಕ ಮಾಲಾಪುರ ಅಂಕರಾಜು ಸೇರಿದಂತೆ ಇನ್ನಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

8 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

9 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

10 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

14 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

14 hours ago