Free Health Check-up Camp Held in Chamarajanagar to Mark Dhruvanarayan’s Birthday Celebration
ಚಾಮರಾಜನಗರ : ಮಾಜಿ ಸಂಸದರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ದಿ. ಆರ್.ಧ್ರುವನಾರಾಯಣ ಅವರು ಸರಳ ಸಜ್ಜನಿಕೆಯ ರಾಜಕಾರಣಿ. ಜೊತೆಗೆ ಮಾನವೀಯ ಗುಣಗಳನ್ನು ಹೊಂದಿದ್ದರು ಎಂದು ಕಾಡಾಧ್ಯಕ್ಷ ಪಿ.ಮರಿಸ್ವಾಮಿ ತಿಳಿಸಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆರ್.ಧ್ರುವನಾರಾಯಣ ಅವರ ೬೪ನೇ ಜನ್ಮದಿನದ ಅಂಗವಾಗಿ ಅವರ ಅಭಿಮಾನಿ ಬಳಗ, ರೋಟರಿ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹೆಲ್ಪ್ ಫೇಜ್ ಇಂಡಿಯಾ, ಬೃಂದವನ ಆಸ್ಪತ್ರೆ, ನಾರಾಯಣ ಆಸ್ಪತ್ರೆಯ ಸಹಯೋಗದಲ್ಲಿ ನಡೆದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರದಲ್ಲಿ ಧ್ರುವನಾರಾಯಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.
ಎರಡು ಬಾರಿ ಶಾಸಕರಾಗಿ, ಸಂಸದರಾಗಿ ಜಿಲ್ಲೆಯಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದರು. ಎಲ್ಲರ ಮನಗೆದ್ದಿದ್ದರು. ಧ್ರುವನಾರಾಯಣ ಅವರದು ಎಂದೂ ಮರೆಯಲು ಸಾಧ್ಯವಾಗದ ವ್ಯಕ್ತಿತ್ವ. ಬಡವರ ಪರ ಮಾತನಾಡುತ್ತಿದ್ದರು. ಅವರನ್ನು ಸ್ಮರಿಸಿ ಕೊಳ್ಳುವುದು ನಮ್ಮೆಲ್ಲರ ಆದ್ಯಕರ್ತವ್ಯವಾಗಿದೆ ಎಂದರು.
ಧ್ರುವನಾರಾಯಣರ ಅಭಿಮಾನಿ ಬಳಗದ ಅಧ್ಯಕ್ಷರಾದ ಕಾಗಲವಾಡಿ ಚಂದ್ರು ಮಾತನಾಡಿ, ಧ್ರುವನಾರಾಯಣ ಅವರು ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಕಳೆದ 13 ವರ್ಷಗಳಿಂದ ಅವರ ಹುಟ್ಟುಹಬ್ಬವನ್ನು ಸರಳವಾಗಿ, ಸೇವಾ ಕಾರ್ಯದೊಂದಿಗೆ ಆಚರಿಸಿಕೊಂಡು ಬರಲಾಗುತ್ತಿದೆ ಎಂದರು.
ಚುಡಾಧ್ಯಕ್ಷ ಮಹಮ್ಮದ್ ಅಸ್ಗರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಜಿಲ್ಲಾಧ್ಯಕ್ಷ ಹೊಂಗನೂರು ಚಂದ್ರು, ಕನಿಷ್ಠ ವೇತನಾ ಸಲಹಾ ಸಮಿತಿ ಮಂಡಳಿ ಮಾಜಿ ಅಧ್ಯಕ್ಷ ಎಸ್ಪಿಕೆ ಉಮೇಶ್, ಜಿ.ಪಂ.ಮಾಜಿ ಅಧ್ಯಕ್ಷ ಸಿ.ಎ.ಮಹದೇವಶೆಟ್ಟಿ, ಸದಸ್ಯರಾದ ಎಸ್.ಸೋಮನಾಯಕ, ಕೆ.ಪಿ.ಸದಾಶಿವಮೂರ್ತಿ, ಕೇತಮ್ಮ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕಲವಾಡಿ ಗುರುಸ್ವಾಮಿ, ಚುಡಾ ಮಾಜಿ ಅಧ್ಯಕ್ಷ ಸುಹೇಲ್ ಖಾನ್, ಸೈಯದ್ ರಫಿ, ತಾ.ಪಂ.ಮಾಜಿ ಅಧ್ಯಕ್ಷ ಚಿಕ್ಕಮಹದೇವು, ಬಿ.ಕೆ.ರವಿಕುಮಾರ್, ಎಪಿಎಂಸಿ ಅಧ್ಯಕ್ಷ ಸೋಮೇಶ್, ಮಾಜಿ ಅಧ್ಯಕ್ಷ ನಾಗೇಂದ್ರ, ನಿರ್ದೇಶಕ ಆಲೂರು ಪ್ರದೀಪ್, ತಾ.ಪಂ.ಮಾಜಿ ಸದಸ್ಯರಾದ ಡಿ.ಪಿ.ಪ್ರಕಾಶ, ಶಿವಸ್ವಾಮಿ, ವಕೀಲರಾದ ಅರುಣ್, ನಾಗರತ್ನ, ಶಕುಂತಲಾ ಇತರರು ಹಾಜರಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…