ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಳ್ವಾಡಿ ಗ್ರಾಮದ ಯೋಧ ಜ್ಞಾನ ಪ್ರಕಾಶ್ ರವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.
ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಯೋಧ ಜ್ಞಾನಪ್ರಕಾಶ್ ರವರು ಕಳೆದ 13 ವರ್ಷಗಳ ಹಿಂದೆ ಭಾರತೀಯ ಸೇನೆಗೆ ಆಯ್ಕೆಯಾಗಿ ಪಂಜಾಬ್ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು, ಕಳೆದ ಎರಡು ದಿನಗಳ ಹಿಂದೆ ಕರ್ತವ್ಯದಲ್ಲಿದ್ದಾಗಲೇ ಮೃತಪಟ್ಟಿದ್ದರು.
ಇವರ ಸಾವಿನ ಮಾಹಿತಿಯನ್ನು ಕುಟುಂಬಸ್ಥರಿಗೆ ತಿಳಿಸಿ, ಕುಟುಂಬಸ್ಥರು ಪಂಜಾಬ್ ಗೆ ತೆರಳಿ ಅಲ್ಲಿಂದ ಮೃತ ದೇಹವನ್ನು ವಿಮಾನದ ಮೂಲಕ ಬೆಂಗಳೂರಿಗೆ ತಂದು ಅಲ್ಲಿಂದ ಆಂಬುಲೆನ್ಸ್ ಮೂಲಕ ಸ್ವಗ್ರಾಮಕ್ಕೆ ತರಲಾಯಿತು.
ನಂತರ ಕ್ರಿಶ್ಚಿಯನ್ ಸಮಾಜದ ಸಂಪ್ರದಾಯದಂತೆ ಪಾರ್ಥಿವ ಶರೀರವನ್ನು ಸುಳ್ವಾಡಿ ಗ್ರಾಮದ ಚರ್ಚ್ ನಲ್ಲಿಟ್ಟು ಫಾ ಟೆನ್ನಿ ಕುರಿಯನ್ ರವರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ನಂತರ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಸುತ್ತಮುತ್ತಲಿನ ಗ್ರಾಮಗಳ ನಿವೃತ್ತ ಸೈನಿಕರಗಳು, ಸಾರ್ವಜನಿಕರು ವಿದ್ಯಾರ್ಥಿಗಳು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಅಂತಿಮ ದರ್ಶನ ಪಡೆದರು.
ರಾಮಪುರ ಪೊಲೀಸ್ ರಿಂದ ಗಾರ್ಡ್ ಆಫ್ ಹಾನರ್: ಹೃದಯಘಾತದಿಂದ ಮೃತಪಟ್ಟ ಯೋಧ ಜ್ಞಾನ ಪ್ರಕಾಶ್ ರವರ ಅಂತ್ಯಕ್ರಿಯೆಯಲ್ಲಿ ರಾಮಪುರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಈಶ್ವರ್ ನೇತೃತ್ವದಲ್ಲಿ ಭಾಗವಹಿಸಿ ಗಾರ್ಡ್ ಆಫ್ ಹಾನರ್ ಹಾಗೂ ಗಾಳಿಯಲ್ಲಿ ಮೂರು ಬಾರಿ ಗುಂಡು ಹಾರಿಸುವ ಮೂಲಕ ಸರ್ಕಾರಿ ಗೌರವದೊಂದಿಗೆ ಶ್ರದ್ಧಾಂಜಲಿ ಅರ್ಪಿಸಿದರು.
ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯಿಂದ ಶ್ರದ್ಧಾಂಜಲಿ: ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಇಗ್ನೇಶಿ ಮುತ್ತು, ಉಪಾಧ್ಯಕ್ಷೆ, ಸದಸ್ಯರುಗಳು ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಭಾಗವಹಿಸಿ ಗೌರವ ಸಲ್ಲಿಸಿದರು. ಇದಲ್ಲದೆ ಅಂತ್ಯಕ್ರಿಯೆಗೆ ಬೇಕಾಗಿದ್ದ ಎಲ್ಲಾ ವ್ಯವಸ್ಥೆಗಳನ್ನು ಗ್ರಾಮ ಪಂಚಾಯಿತಿ ವತಿಯಿಂದ ಕಲ್ಪಿಸಲಾಗಿತ್ತು.
ಯೋಧರ ಗ್ರಾಮದಲ್ಲಿ ನೀರವ ಮೌನ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಾರ್ಟಳ್ಳಿ ಯೋಧರ ಗ್ರಾಮವೆಂದೇ ಪ್ರಸಿದ್ಧಿಯಾಗಿದೆ. ಈ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 140 ಜನ ಸೈನಿಕರಿದ್ದು 60 ಜನ ನಿವೃತ್ತಿಯಾಗಿದ್ದಾರೆ. ಲೂಯಿಸ್ ಪೆರಿಯನಾಯಗಂ ರವರು ರಾಷ್ಟ್ರಪತಿ ಪದಕವನ್ನು ಪಡೆದುಕೊಂಡು ಜಿಲ್ಲೆಗೆ ಹಾಗೂ ತಾಲೂಕಿಗೆ ಕೀರ್ತಿ ತಂದು ಗೌರವ ಹೆಚ್ಚಿಸಿದ್ದಾರೆ . ಹಲವಾರು ವರ್ಷಗಳ ಹಿಂದೆ ಕರ್ತವ್ಯದಲ್ಲಿ ಇರುವಾಗಲೇ ಮರಿಯ ಪ್ರಕಾಶ್ ಎಂಬುವವರು ಬಾಂಬ್ ಸ್ಫೋಟದಲ್ಲಿ ಮೃತಪಟ್ಟಿದ್ದರು. ಇದೀಗ ಜ್ಞಾನ ಪ್ರಕಾಶ್ ಹೃದಯಾಘಾತದಿಂದ ಮೃತಪಟ್ಟಿರುವುದು ಈ ಗ್ರಾಮಕ್ಕೆ ಬರ ಸಿಡಿಲು ಬಡಿದಂತಾಗಿದೆ. ಗ್ರಾಮದಲ್ಲಿ ಎಲ್ಲಿ ನೋಡಿದರೂ ನೀರವ ಮೌನ, ಮೃತ ಯೋಧರ ಅಂತಿಮ ದರ್ಶನ ಪಡೆಯಲು ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಹಾಗೂ ಅಧಿಕಾರಿಗಳು ಆಗಮಿಸಿ ಅಂತಿಮ ನಮನ ಸಲ್ಲಿಸಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…