ಚಾಮರಾಜನಗರ

ಹನೂರು ತಹಸೀಲ್ದಾರ್‌ ಕಚೇರಿಯಲ್ಲಿ ಗಾಂಧಿ ಜಯಂತಿ ಆಚರಣೆ

ಹನೂರು: ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿ ರವರ ಜಯಂತಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ತಹಸೀಲ್ದಾರ್ ವೈ.ಕೆ ಗುರುಪ್ರಸಾದ್ ಅವರು, ಮಹಾತ್ಮ ಗಾಂಧಿ ಅವರು ಸತ್ಯಾಗ್ರಹ, ಅಹಿಂಸೆ, ಶಾಂತಿ ಮತ್ತು ತ್ಯಾಗ ಎಂಬ ಅಸ್ತ್ರಗಳನ್ನು ಬಳಸಿ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮರು. ಅವರ ತತ್ವ ಸಿದ್ಧಾಂತಗಳು ಎಲ್ಲಾ ಕಾಲಕ್ಕೂ ಮೌಲ್ಯಯುತವಾಗಿದೆ ಎಂದರು.

ಮಹಾತ್ಮ ಗಾಂಧಿಯವರು ಒಬ್ಬಂಟಿ ಮಹಿಳೆ ಮಧ್ಯರಾತ್ರಿಯಲ್ಲಿ ಸುರಕ್ಷಿತವಾಗಿ ಓಡಾಡುವಂತಾಗಬೇಕು. ಆಗ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ ಎಂದರ್ಥ ಎಂದು ತಿಳಿಸಿದ್ದರು. ಈ ನಿಟ್ಟಿನಲ್ಲಿ ಅದನ್ನು ನಾವು ಪಾಲಿಸೋಣ ಎಂದರು.

ವಿವಿಧ ಕಚೇರಿಗಳಲ್ಲಿ ಗಾಂಧಿ ಜಯಂತಿ ಆಚರಣೆ: ಪಟ್ಟಣ ಪಂಚಾಯಿತಿ ಕಚೇರಿ, ಪೊಲೀಸ್ ಠಾಣೆ, ನೋಂದಣಾಧಿಕಾರಿಗಳ ಕಚೇರಿ, ಕ್ಷೇತ್ರದ ಶಿಕ್ಷಣ ಅಧಿಕಾರಿಗಳ ಕಚೇರಿ, ತಾಲೂಕು ಪಂಚಾಯಿತಿ ಹಾಗೂ ವಿವಿಧ ಶಾಲೆಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಆಚರಣೆ ಮಾಡಲಾಯಿತು.

ಇದೇ ವೇಳೆ ಪ್ರಭಾರ ಕಂದಾಯ ನಿರೀಕ್ಷಕ ಶೇಷಣ್ಣ, ಗ್ರಾಮ ಆಡಳಿತಾಧಿಕಾರಿ ಕಾರ್ತಿಕ್, ಸಿಬ್ಬಂದಿಗಳಾದ ಸಿದ್ದರಾಜು ಪ್ರದೀಪ್, ಶಿವಕುಮಾರ್ ಹಾಜರಿದ್ದರು

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

7 mins ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

1 hour ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

2 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

6 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

8 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

8 hours ago