ಹನೂರು: ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿ ರವರ ಜಯಂತಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ತಹಸೀಲ್ದಾರ್ ವೈ.ಕೆ ಗುರುಪ್ರಸಾದ್ ಅವರು, ಮಹಾತ್ಮ ಗಾಂಧಿ ಅವರು ಸತ್ಯಾಗ್ರಹ, ಅಹಿಂಸೆ, ಶಾಂತಿ ಮತ್ತು ತ್ಯಾಗ ಎಂಬ ಅಸ್ತ್ರಗಳನ್ನು ಬಳಸಿ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮರು. ಅವರ ತತ್ವ ಸಿದ್ಧಾಂತಗಳು ಎಲ್ಲಾ ಕಾಲಕ್ಕೂ ಮೌಲ್ಯಯುತವಾಗಿದೆ ಎಂದರು.
ಮಹಾತ್ಮ ಗಾಂಧಿಯವರು ಒಬ್ಬಂಟಿ ಮಹಿಳೆ ಮಧ್ಯರಾತ್ರಿಯಲ್ಲಿ ಸುರಕ್ಷಿತವಾಗಿ ಓಡಾಡುವಂತಾಗಬೇಕು. ಆಗ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ ಎಂದರ್ಥ ಎಂದು ತಿಳಿಸಿದ್ದರು. ಈ ನಿಟ್ಟಿನಲ್ಲಿ ಅದನ್ನು ನಾವು ಪಾಲಿಸೋಣ ಎಂದರು.
ವಿವಿಧ ಕಚೇರಿಗಳಲ್ಲಿ ಗಾಂಧಿ ಜಯಂತಿ ಆಚರಣೆ: ಪಟ್ಟಣ ಪಂಚಾಯಿತಿ ಕಚೇರಿ, ಪೊಲೀಸ್ ಠಾಣೆ, ನೋಂದಣಾಧಿಕಾರಿಗಳ ಕಚೇರಿ, ಕ್ಷೇತ್ರದ ಶಿಕ್ಷಣ ಅಧಿಕಾರಿಗಳ ಕಚೇರಿ, ತಾಲೂಕು ಪಂಚಾಯಿತಿ ಹಾಗೂ ವಿವಿಧ ಶಾಲೆಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಆಚರಣೆ ಮಾಡಲಾಯಿತು.
ಇದೇ ವೇಳೆ ಪ್ರಭಾರ ಕಂದಾಯ ನಿರೀಕ್ಷಕ ಶೇಷಣ್ಣ, ಗ್ರಾಮ ಆಡಳಿತಾಧಿಕಾರಿ ಕಾರ್ತಿಕ್, ಸಿಬ್ಬಂದಿಗಳಾದ ಸಿದ್ದರಾಜು ಪ್ರದೀಪ್, ಶಿವಕುಮಾರ್ ಹಾಜರಿದ್ದರು
ಹೊಸದಿಲ್ಲಿ : ಜೆನ್ಝೀಗಳ ನೆಚ್ಚಿನ ತಾಣವಾಗಿರುವ ಇನ್ಸ್ಟಾಗ್ರಾಂ ಈಗ ಕೇವಲ ಮನರಂಜನೆಯ ತಾಣವಾಗಂತೂ ಇಲ್ಲ. ಬದಲಾಗಿ ಸಂಚಲನ ಸೃಷ್ಟಿಸುವ ಬಹುದೊಡ್ಡ…
ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…
ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…