ಹನೂರು: ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿ ರವರ ಜಯಂತಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ತಹಸೀಲ್ದಾರ್ ವೈ.ಕೆ ಗುರುಪ್ರಸಾದ್ ಅವರು, ಮಹಾತ್ಮ ಗಾಂಧಿ ಅವರು ಸತ್ಯಾಗ್ರಹ, ಅಹಿಂಸೆ, ಶಾಂತಿ ಮತ್ತು ತ್ಯಾಗ ಎಂಬ ಅಸ್ತ್ರಗಳನ್ನು ಬಳಸಿ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮರು. ಅವರ ತತ್ವ ಸಿದ್ಧಾಂತಗಳು ಎಲ್ಲಾ ಕಾಲಕ್ಕೂ ಮೌಲ್ಯಯುತವಾಗಿದೆ ಎಂದರು.
ಮಹಾತ್ಮ ಗಾಂಧಿಯವರು ಒಬ್ಬಂಟಿ ಮಹಿಳೆ ಮಧ್ಯರಾತ್ರಿಯಲ್ಲಿ ಸುರಕ್ಷಿತವಾಗಿ ಓಡಾಡುವಂತಾಗಬೇಕು. ಆಗ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ ಎಂದರ್ಥ ಎಂದು ತಿಳಿಸಿದ್ದರು. ಈ ನಿಟ್ಟಿನಲ್ಲಿ ಅದನ್ನು ನಾವು ಪಾಲಿಸೋಣ ಎಂದರು.
ವಿವಿಧ ಕಚೇರಿಗಳಲ್ಲಿ ಗಾಂಧಿ ಜಯಂತಿ ಆಚರಣೆ: ಪಟ್ಟಣ ಪಂಚಾಯಿತಿ ಕಚೇರಿ, ಪೊಲೀಸ್ ಠಾಣೆ, ನೋಂದಣಾಧಿಕಾರಿಗಳ ಕಚೇರಿ, ಕ್ಷೇತ್ರದ ಶಿಕ್ಷಣ ಅಧಿಕಾರಿಗಳ ಕಚೇರಿ, ತಾಲೂಕು ಪಂಚಾಯಿತಿ ಹಾಗೂ ವಿವಿಧ ಶಾಲೆಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಆಚರಣೆ ಮಾಡಲಾಯಿತು.
ಇದೇ ವೇಳೆ ಪ್ರಭಾರ ಕಂದಾಯ ನಿರೀಕ್ಷಕ ಶೇಷಣ್ಣ, ಗ್ರಾಮ ಆಡಳಿತಾಧಿಕಾರಿ ಕಾರ್ತಿಕ್, ಸಿಬ್ಬಂದಿಗಳಾದ ಸಿದ್ದರಾಜು ಪ್ರದೀಪ್, ಶಿವಕುಮಾರ್ ಹಾಜರಿದ್ದರು
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…