ಚಾಮರಾಜನಗರ

ಗಣೇಶ ಹಬ್ಬ: ಯಾವುದೇ ಅನಾಹುತಗಳಿಗೆ ಅವಕಾಶ ಮಾಡಿಕೊಡದೇ ಹಬ್ಬ ಆಚರಿಸಿ: ಶಾಸಕ ಮಂಜುನಾಥ್

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಶಾಸಕ ಎಂಆರ್ ಮಂಜುನಾಥ್ ವೈಯಕ್ತಿಕವಾಗಿ ಆರ್ಥಿಕ ಸಹಾಯ ಮಾಡಿದರು.

ನಂತರ ಮಾತನಾಡಿದ ಅವರು ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಗ್ರಾಮಗಳ ಬಡಾವಣೆಗಳಲ್ಲಿ ಪ್ರತ್ಯೇಕವಾಗಿ ಯುವಕರ ಬಳಗ ಗೌರಿ ಗಣೇಶ ಹಬ್ಬದ ಪ್ರಯುಕ್ತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುತ್ತಿದ್ದಾರೆ. ಕಳೆದ ಏಳು ವರ್ಷಗಳಿಂದ ನನ್ನ ಕೈಲಾದ ಮಟ್ಟಿಗೆ ಆರ್ಥಿಕವಾಗಿ ಸಹಾಯ ಮಾಡುತ್ತಿದ್ದೇನೆ. ಶ್ರಾವಣ ಮಾಸ ಮುಕ್ತಾಯವಾದ ನಂತರ ಗೌರಿ ಗಣೇಶ ಹಬ್ಬ ಮೊದಲು ಬರುವುದರಿಂದ, ಸಾವಿರಾರು ವರ್ಷಗಳಿಂದ ಸಾಂಪ್ರದಾಯವಾಗಿ ಗಣೇಶ ಚತುರ್ಥಿ ಹಬ್ಬವನ್ನು ವಿಜೃಂಭಣೆಯಿಂದ ಆಚರಣೆ ಮಾಡುತ್ತಿದ್ದೇವೆ. ಹಬ್ಬ ಆಚರಣೆ ಮಾಡುವುದರಿಂದ ಶಾಂತಿ ನೆಮ್ಮದಿ ಸಿಗುತ್ತದೆ. ಹಬ್ಬ ಆಚರಣೆ ಸಂದರ್ಭದಲ್ಲಿ ಯಾವುದೇ ಅನಾಹುತಗಳಿಗೂ ಅವಕಾಶ ಮಾಡಿಕೊಡದೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿ ವಿಸರ್ಜನೆ ಮಾಡಬೇಕು ಎಂದು ತಿಳಿಸಿದರು.

ನಮ್ಮ ರಾಜ್ಯದಲ್ಲಿ ಉತ್ತಮ ಮಳೆಯಾಗಿ ರೈತಾಪಿ ವರ್ಗಕ್ಕೆ ಬೆಳೆದಿರುವ ಎಲ್ಲಾ ಬೆಳೆಗಳಿಗೆ ನಿಗದಿತ ಬೆಲೆ ಸಿಕ್ಕಿ, ಆರ್ಥಿಕವಾಗಿ ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲಿ ಎಂದು ಪ್ರಾರ್ಥಿಸಿದರು.

ಇದೇ ವೇಳೆ ಕ್ಷೇತ್ರದ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಶುಭಾಶಯ ಕೋರಿದರು. ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳ ಬಡಾವಣೆಗಳಲ್ಲಿ 300ಕ್ಕೂ ಹೆಚ್ಚು ಕಡೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಸಹಾಯ ಮಾಡಿದ್ದಾರೆ.

ಈ ವೇಳೆ ಪಟ್ಟಣ ಪಂಚಾಯ್ತಿ ಸದಸ್ಯರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಹಾಗೂ ಜಾದಳ ಮುಖಂಡರು ಹಾಜರಿದ್ದರು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

8 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

9 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

9 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

9 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

9 hours ago