ಚಾಮರಾಜನಗರ

ಮಠಾಧೀಶರನ್ನಾಗಿ ಮಾಡಲು ಕರೆತಂದಿದ್ದ ವ್ಯಕ್ತಿಗೆ ಗೇಟ್‌ಪಾಸ್

ದಾಖಲಾತಿಗಳಲ್ಲಿ ಮುಸ್ಲಿಂ ವ್ಯಕ್ತಿ ಎಂಬುದನ್ನು ತಿಳಿದು ಹೌಹಾರಿ, ವಾಪಸ್ ಕಳಿಸಿದ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಚೌಡಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಗುರುಮಲ್ಲೇಶ್ವರ ವಿರಕ್ತ ಮಠಕ್ಕೆ ಯಾದಗಿರಿ ಜಿಲ್ಲೆ ಸಹಪುರ ಗ್ರಾಮದ ನಿಜಲಿಂಗ ಸ್ವಾಮೀಜಿ ಎಂಬ ಹೆಸರಿನ ಸ್ವಾಮೀಜಿಯವರನ್ನು ಕರೆತರಲಾಗಿತ್ತು.

ಆದರೆ ಅವರ ದಾಖಲಾತಿ ಪರಿಶೀಲಿಸಿದಾಗ ಆಧಾರ್ ಕಾರ್ಡ್, ಅಂಕಪಟ್ಟಿ, ಪ್ಯಾನ್‌ಕಾರ್ಡ್‌ಗಳಲ್ಲಿ ಅವರ ಹೆಸರು ಮಹಮ್ಮದ್ ನಿಸಾರ್ ಎಂದು ಮುಸ್ಲಿಂ ವ್ಯಕ್ತಿಯ ಹೆಸರಿನಲ್ಲಿ ಇದ್ದುದನ್ನು ಕಂಡ ಗ್ರಾಮಸ್ಥರು ಹೌಹಾರಿದ್ದಾರೆ.

ಈ ಬಗ್ಗೆ ವಿಚಾರಿಸಿದಾಗ, ಅವರು ನಾನು ಮುಸ್ಲಿಂ ಆಗಿದ್ದೆ. ನಂತರ ಲಿಂಗದೀಕ್ಷೆ ಪಡೆದಿದ್ದೇನೆ ಎಂದು ತಿಳಿಸಿದ್ದಾರೆ. ಆದರೆ, ಗ್ರಾಮಸ್ಥರು ಮತ್ತು ಮಠವನ್ನು ನಿರ್ಮಾಣ ಮಾಡಿದವರು ಇದಕ್ಕೆ ಒಪ್ಪದೆ ನಿಸಾರ್ ಅವರನ್ನು ಮೂಲ ಸ್ಥಳಕ್ಕೆ ವಾಪಸ್ ಕಳಿಸಿದ್ದಾರೆ.

ವಿಶ್ವಗುರು ಬಸವಣ್ಣನವರ ತತ್ವ ಚಿಂತನೆಗಳ ಪ್ರಭಾವಕ್ಕೆ ಒಳಗಾದ ಮುಸ್ಲಿಂ ಸಮುದಾಯದ ಮಹಮ್ಮದ್ ನಿಸಾರ್ ಜಂಗಮ ದೀಕ್ಷೆ ಪಡೆದು ಬಸವ ತತ್ವ ಪ್ರಚಾರಕ್ಕಾಗಿ ಜೀವನ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.

ಅನ್ಯ ಧರ್ಮೀಯ ವ್ಯಕ್ತಿ ಕೆಲವು ವರ್ಷಗಳ ಹಿಂದೆ ಲಿಂಗದೀಕ್ಷೆ ಪಡೆದ ತಕ್ಷಣ ಅವರನ್ನು ಮಠದ ಪೀಠಾಧಿಪತಿ ಎಂದು ಒಪ್ಪಲು ಸಾಧ್ಯವಿಲ್ಲ. ಅಲ್ಲದೆ ಆಕ್ಷೇಪ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಅವರನ್ನು ಮಠದಿಂದ ವಾಪಸ್ ಕಳಿಸಲಾಗಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

8 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

8 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

9 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

10 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

11 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

11 hours ago