ಚಾಮರಾಜನಗರ

ಮಠಾಧೀಶರನ್ನಾಗಿ ಮಾಡಲು ಕರೆತಂದಿದ್ದ ವ್ಯಕ್ತಿಗೆ ಗೇಟ್‌ಪಾಸ್

ದಾಖಲಾತಿಗಳಲ್ಲಿ ಮುಸ್ಲಿಂ ವ್ಯಕ್ತಿ ಎಂಬುದನ್ನು ತಿಳಿದು ಹೌಹಾರಿ, ವಾಪಸ್ ಕಳಿಸಿದ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಚೌಡಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಗುರುಮಲ್ಲೇಶ್ವರ ವಿರಕ್ತ ಮಠಕ್ಕೆ ಯಾದಗಿರಿ ಜಿಲ್ಲೆ ಸಹಪುರ ಗ್ರಾಮದ ನಿಜಲಿಂಗ ಸ್ವಾಮೀಜಿ ಎಂಬ ಹೆಸರಿನ ಸ್ವಾಮೀಜಿಯವರನ್ನು ಕರೆತರಲಾಗಿತ್ತು.

ಆದರೆ ಅವರ ದಾಖಲಾತಿ ಪರಿಶೀಲಿಸಿದಾಗ ಆಧಾರ್ ಕಾರ್ಡ್, ಅಂಕಪಟ್ಟಿ, ಪ್ಯಾನ್‌ಕಾರ್ಡ್‌ಗಳಲ್ಲಿ ಅವರ ಹೆಸರು ಮಹಮ್ಮದ್ ನಿಸಾರ್ ಎಂದು ಮುಸ್ಲಿಂ ವ್ಯಕ್ತಿಯ ಹೆಸರಿನಲ್ಲಿ ಇದ್ದುದನ್ನು ಕಂಡ ಗ್ರಾಮಸ್ಥರು ಹೌಹಾರಿದ್ದಾರೆ.

ಈ ಬಗ್ಗೆ ವಿಚಾರಿಸಿದಾಗ, ಅವರು ನಾನು ಮುಸ್ಲಿಂ ಆಗಿದ್ದೆ. ನಂತರ ಲಿಂಗದೀಕ್ಷೆ ಪಡೆದಿದ್ದೇನೆ ಎಂದು ತಿಳಿಸಿದ್ದಾರೆ. ಆದರೆ, ಗ್ರಾಮಸ್ಥರು ಮತ್ತು ಮಠವನ್ನು ನಿರ್ಮಾಣ ಮಾಡಿದವರು ಇದಕ್ಕೆ ಒಪ್ಪದೆ ನಿಸಾರ್ ಅವರನ್ನು ಮೂಲ ಸ್ಥಳಕ್ಕೆ ವಾಪಸ್ ಕಳಿಸಿದ್ದಾರೆ.

ವಿಶ್ವಗುರು ಬಸವಣ್ಣನವರ ತತ್ವ ಚಿಂತನೆಗಳ ಪ್ರಭಾವಕ್ಕೆ ಒಳಗಾದ ಮುಸ್ಲಿಂ ಸಮುದಾಯದ ಮಹಮ್ಮದ್ ನಿಸಾರ್ ಜಂಗಮ ದೀಕ್ಷೆ ಪಡೆದು ಬಸವ ತತ್ವ ಪ್ರಚಾರಕ್ಕಾಗಿ ಜೀವನ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.

ಅನ್ಯ ಧರ್ಮೀಯ ವ್ಯಕ್ತಿ ಕೆಲವು ವರ್ಷಗಳ ಹಿಂದೆ ಲಿಂಗದೀಕ್ಷೆ ಪಡೆದ ತಕ್ಷಣ ಅವರನ್ನು ಮಠದ ಪೀಠಾಧಿಪತಿ ಎಂದು ಒಪ್ಪಲು ಸಾಧ್ಯವಿಲ್ಲ. ಅಲ್ಲದೆ ಆಕ್ಷೇಪ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಅವರನ್ನು ಮಠದಿಂದ ವಾಪಸ್ ಕಳಿಸಲಾಗಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

3 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

4 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

15 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

15 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

15 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

15 hours ago