ಚಾಮರಾಜನಗರ: ಹೃದಯಘಾತದಿಂದ ಮೂರನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ.
8 ವರ್ಷದ ತೇಜಸ್ವಿನಿ ಎಂಬುವವಳೇ ಮೃತ ವಿದ್ಯಾರ್ಥಿನಿಯಾಗಿದ್ದಾರೆ. ಚಾಮರಾಜನಗರದ ಬದನಗುಪ್ಪೆಯ ನಿವಾಸಿ ಲಿಂಗರಾಜು ಮತ್ತು ಶೃತಿ ದಂಪತಿಯ ಪುತ್ರಿ ತೇಜಸ್ವಿನಿ ಎಂದು ತಿಳಿದು ಬಂದಿದೆ.
ತೇಜಸ್ವಿನಿ ಇಂದು ಶಾಲೆಯಲ್ಲಿ ಶಿಕ್ಷಕಿಗೆ ನೋಟ್ಸ್ ತೋರಿಸುವ ವೇಳೆ ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಆಕೆಯನ್ನು ಜೆಎಸ್ಎಸ್ ಆಸ್ಪತ್ರೆಗೆ ಕರೆ ತರಲಾಯಿತು. ಆದರೆ ಆಸ್ಪತ್ರೆಗೆ ಕರೆ ತರುವಷ್ಟರಲ್ಲಿಯೇ ತೇಜಸ್ವಿನಿ ಮೃತ ಪಟ್ಟಿದ್ದಾಳೆ.
ಈ ವೇಳೆ ಪರಿಶೀಲನೆ ನಡೆಸಿದ ವೈದ್ಯರು ಹೃದಯಘಾತದಿಂದ ಮೃತಪಟ್ಟಿದ್ದಾಳೆ ಎಂದು ತಿಳಿಸಿದ್ದಾರೆ. ಈ ವೇಳೆ ಪೋಷಕರ ಆಕ್ರಂದನ ಮುಗಿಲುಮುಟ್ಟಿದ್ದು, ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…