ಚಾಮರಾಜನಗರ: ಹೃದಯಘಾತದಿಂದ ಮೂರನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ.
8 ವರ್ಷದ ತೇಜಸ್ವಿನಿ ಎಂಬುವವಳೇ ಮೃತ ವಿದ್ಯಾರ್ಥಿನಿಯಾಗಿದ್ದಾರೆ. ಚಾಮರಾಜನಗರದ ಬದನಗುಪ್ಪೆಯ ನಿವಾಸಿ ಲಿಂಗರಾಜು ಮತ್ತು ಶೃತಿ ದಂಪತಿಯ ಪುತ್ರಿ ತೇಜಸ್ವಿನಿ ಎಂದು ತಿಳಿದು ಬಂದಿದೆ.
ತೇಜಸ್ವಿನಿ ಇಂದು ಶಾಲೆಯಲ್ಲಿ ಶಿಕ್ಷಕಿಗೆ ನೋಟ್ಸ್ ತೋರಿಸುವ ವೇಳೆ ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಆಕೆಯನ್ನು ಜೆಎಸ್ಎಸ್ ಆಸ್ಪತ್ರೆಗೆ ಕರೆ ತರಲಾಯಿತು. ಆದರೆ ಆಸ್ಪತ್ರೆಗೆ ಕರೆ ತರುವಷ್ಟರಲ್ಲಿಯೇ ತೇಜಸ್ವಿನಿ ಮೃತ ಪಟ್ಟಿದ್ದಾಳೆ.
ಈ ವೇಳೆ ಪರಿಶೀಲನೆ ನಡೆಸಿದ ವೈದ್ಯರು ಹೃದಯಘಾತದಿಂದ ಮೃತಪಟ್ಟಿದ್ದಾಳೆ ಎಂದು ತಿಳಿಸಿದ್ದಾರೆ. ಈ ವೇಳೆ ಪೋಷಕರ ಆಕ್ರಂದನ ಮುಗಿಲುಮುಟ್ಟಿದ್ದು, ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…