ಚಾಮರಾಜನಗರ: ರಾಜ್ಯಕ್ಕೆ ಬರ ಪರಿಹಾರ ನೀಡುವಲ್ಲಿ ವಂಚಿಸಿದ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಬರುತ್ತಿರುವುದನ್ನು ವಿರೋಧಿಸಿ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಗಳು ಮತ್ತು ಕಾರ್ಯಕರ್ತರು ಶನಿವಾರ ನಗರದಲ್ಲಿ ಗೋ ಬ್ಯಾಕ್ ಚಳವಳಿ ನಡೆಸಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಮಾವೇಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ವಾಹನ ತಡೆದು ಆಕ್ರೋಶ ವ್ಯಕ್ತಪಡಿಸಿ, ಮೋದಿ ವಿರುದ್ಧ ಘೋಷಣೆ ಕೂಗಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದೆ. ಬರ ನಿರ್ವಹಣೆಗೆ ಕಳೆದ ಸೆಪ್ಟಂಬರ್ ತಿಂಗಳಿನಲ್ಲೇ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರ ಹಣ ನೀಡುವಂತೆ ಮನವಿ ಮಾಡಿದೆ. ಜೊತೆಗೆ ಕೇಂದ್ರದ ಸಚಿವರನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಮನವಿ ಮಾಡಲಾಗಿದೆ. ಹಾಗಿದ್ದರೂ, ಕೇಂದ್ರ ರಾಜ್ಯಕ್ಕೆ ನಯಾಪೈಸೆ ನೀಡಿಲ್ಲ ಎಂದು ದೂರಿದರು.
ಕೇಂದ್ರದ ಬರ ಅಧ್ಯಯನ ತಂಡ ಅಕ್ಟೋಬರ್ನಲ್ಲಿ ರಾಜ್ಯಕ್ಕೆ ಭೇಟಿ ನೀಡಿ, ಅದೇ ತಿಂಗಳು 17,901 ಕೋಟಿ ಪರಿಹಾರ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದೆ. ಆದರೂ ಇಷ್ಟು ದಿನ ಸುಮ್ಮನಿರುವುದು ಏಕೆ ಎನ್ನುವುದು ಕನ್ನಡಿಗರ ಪ್ರಶ್ನೆಯಾಗಿದೆ, ಮೋದಿಯವರು ಇದಕ್ಕೆ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಪ್ರವಾಹ, ಬರ ಬಂದಾಗ ಬಾರದ ಮೋದಿ ಚುನಾವಣೆ ಸಂದರ್ಭದಲ್ಲಿ ಮಾತ್ರ ಪ್ರಚಾರಕ್ಕೆ ಬರುತ್ತಿರುವುದು ದುರಂತ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೋದಿ ಅಬ್ಬರದ ಪ್ರಚಾರಕ್ಕೆ ರಾಜ್ಯದ ಜನರು ತಕ್ಕ ಉತ್ತರ ನೀಡಿದ್ದಾರೆ. ಇದೀಗ ಮತ್ತೆ ಮೋದಿ ಬಂದಿದ್ದಾರೆ, ಬರ ಪರಹಾರ ನೀಡದೆ ರಾಜ್ಯಕ್ಕೆ ವಂಚಿಸಿರುವ ಬಿಜೆಪಿ ಮತ್ತು ಮೋದಿಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮರಿಸ್ವಾಮಿ ಹೇಳಿದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…