_vs humans,
ಹನೂರು: ತಾಲ್ಲೂಕಿನ ಗಂಗನದೊಡ್ಡಿ, ರಾಮಾಪುರ ಗ್ರಾಮಗಳ ವ್ಯಾಪ್ತಿಯಲ್ಲಿ ಪ್ರತ್ಯೇಕವಾಗಿ ನಡೆದ ಚಿರತೆ ದಾಳಿಯಲ್ಲಿ ಒಂದು ಮೇಕೆ ಮತ್ತು ಒಂದು ಕುರಿ ಬಲಿಯಾಗಿರುವ ಘಟನೆ ನಡೆದಿದೆ.
ಮೊದಲ ಪ್ರಕರಣದಲ್ಲಿ ಗಂಗನದೊಡ್ಡಿ ಗ್ರಾಮದ ನೌಕತ್ ಎಂಬವರ ಜಮೀನಿನಲ್ಲಿ ಕಟ್ಟಲಾಗಿದ್ದ ಕುರಿ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ಕುರಿ ಸ್ಥಳದಲ್ಲಿಯೇ ಮೃತಪಟ್ಟಿದೆ.
ಮತ್ತೊಂದು ಪ್ರಕರಣದಲ್ಲಿ ರಾಮಾಪುರ ಗ್ರಾಮದ ರೈತ ರವಿ ಎಂಬವರ ಜಮೀನಿನಲ್ಲಿ ಕಟ್ಟಲಾಗಿದ್ದ ಮೇಕೆಯ ಮೇಲೆ ಚಿರತೆ ದಾಳಿ ನಡೆಸಿ ಕೊಂದಿದೆ.ಸ್ಥಳೀಯರಿಂದ ಮಾಹಿತಿ ಪಡೆದ ಅರಣ್ಯ ಇಲಾಖೆಯ ಸಿಬ್ಬಂದಿ ಡಿಆರ್ಎಫ್ಒ ಬಿ.ನಾಯಕ್ ನೇತೃತ್ವದಲ್ಲಿ ಸ್ಥಳಕ್ಕೆ ಮಂಗಳವಾರ ಬೆಳಿಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರೈತ ಸಂಘದ ತಾಲ್ಲೂಕು ಅಧ್ಯಕ್ಷ ಅಮ್ಜದ್ ಖಾನ್ ಮಾತನಾಡಿ, ೩ ತಿಂಗಳುಗಳಿಂದ ಅಜ್ಜೀಪುರ, ಗಂಗನ ದೊಡ್ಡಿ, ಬಸಪ್ಪನದೊಡ್ಡಿ, ರಾಮಾಪುರ, ಭಾಗಗಳಲ್ಲಿ ಚಿರತೆ ದಾಳಿ ನಡೆಸಿ ಸುಮಾರು ೨೦ಕ್ಕೂ ಹೆಚ್ಚು ಸಾಕು ಪ್ರಾಣಿಗಳನ್ನು ಬಲಿ ತೆಗೆದುಕೊಂಡಿದೆ. ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಸಲ್ಲಿಸಲಾಗಿದೆ. ಬೋನು ಇಟ್ಟು ಚಿರತೆ ಸೆರೆ ಹಿಡಿಯಲು ಕ್ರಮ ಕೈಗೊಂಡಿದ್ದಾರೆ. ಆದರೆ ಚಾಲಾಕಿ ಚಿರತೆ ಬಲೆಗೆ ಬಿದ್ದಿಲ್ಲ. ಮುಂದಿನ ದಿನಗಳಲ್ಲಿ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಂಡು ಚಿರತೆ ಸೆರೆ ಹಿಡಿಯಬೇಕು. ಕಾಡಾನೆ ದಾಳಿಯಿಂದಲೂ ರೈತರು ಬೆಳೆದ ಬೆಳೆಗಳು ನಾಶವಾಗುತ್ತಿದ್ದು, ಅರಣ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಕಾಡುಪ್ರಾಣಿಗಳ ಹಾವಳಿ ತಪ್ಪಿಸಬೇಕು. ಕುರಿ ಹಾಗೂ ಮೇಕೆಗಳನ್ನು ಕಳೆದುಕೊಂಡಿರುವ ರೈತರಿಗೆ ಕೂಡಲೇ ಪರಿಹಾರ ವಿತರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಮೈಸೂರು: ಇರಾನ್ ಮತ್ತು ಇಸ್ರೇಲ್ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ…
ಬೆಂಗಳೂರು: ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ನಿಂದ ಕೋಟ್ಯಂತರ ರೂ. ಹಣವನ್ನು…
ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ…
ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್ ಸ್ಟಾಕ್ ಇಲ್ಲ. ಹೋಟೆಲ್ನವರು ಒಂದು ವಾರ ಸಹಿಸಿಕೊಳ್ಳಲೇಬೇಕು ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.…
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದಾಗಿ ದೇಶದಲ್ಲಿ ಗ್ಯಾಸ್ ಸಿಲಿಂಡರ್ಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಹಾಗೂ ಮಾಜಿ ಸಿಎಂ…
ಟೆಹರಾನ್: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ.…