ಚಾಮರಾಜನಗರ

ಹನೂರು | ಚಿರತೆ ದಾಳಿಗೆ ಮೇಕೆ, ಕುರಿ ಬಲಿ

ಹನೂರು: ತಾಲ್ಲೂಕಿನ ಗಂಗನದೊಡ್ಡಿ, ರಾಮಾಪುರ ಗ್ರಾಮಗಳ ವ್ಯಾಪ್ತಿಯಲ್ಲಿ ಪ್ರತ್ಯೇಕವಾಗಿ ನಡೆದ ಚಿರತೆ ದಾಳಿಯಲ್ಲಿ ಒಂದು ಮೇಕೆ ಮತ್ತು ಒಂದು ಕುರಿ ಬಲಿಯಾಗಿರುವ ಘಟನೆ ನಡೆದಿದೆ.

ಮೊದಲ ಪ್ರಕರಣದಲ್ಲಿ ಗಂಗನದೊಡ್ಡಿ ಗ್ರಾಮದ ನೌಕತ್ ಎಂಬವರ ಜಮೀನಿನಲ್ಲಿ ಕಟ್ಟಲಾಗಿದ್ದ ಕುರಿ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ಕುರಿ ಸ್ಥಳದಲ್ಲಿಯೇ ಮೃತಪಟ್ಟಿದೆ.

ಮತ್ತೊಂದು ಪ್ರಕರಣದಲ್ಲಿ ರಾಮಾಪುರ ಗ್ರಾಮದ ರೈತ ರವಿ ಎಂಬವರ ಜಮೀನಿನಲ್ಲಿ ಕಟ್ಟಲಾಗಿದ್ದ ಮೇಕೆಯ ಮೇಲೆ ಚಿರತೆ ದಾಳಿ ನಡೆಸಿ ಕೊಂದಿದೆ.ಸ್ಥಳೀಯರಿಂದ ಮಾಹಿತಿ ಪಡೆದ ಅರಣ್ಯ ಇಲಾಖೆಯ ಸಿಬ್ಬಂದಿ ಡಿಆರ್‌ಎಫ್‌ಒ ಬಿ.ನಾಯಕ್ ನೇತೃತ್ವದಲ್ಲಿ ಸ್ಥಳಕ್ಕೆ ಮಂಗಳವಾರ ಬೆಳಿಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರೈತ ಸಂಘದ ತಾಲ್ಲೂಕು ಅಧ್ಯಕ್ಷ ಅಮ್ಜದ್ ಖಾನ್ ಮಾತನಾಡಿ, ೩ ತಿಂಗಳುಗಳಿಂದ ಅಜ್ಜೀಪುರ, ಗಂಗನ ದೊಡ್ಡಿ, ಬಸಪ್ಪನದೊಡ್ಡಿ, ರಾಮಾಪುರ, ಭಾಗಗಳಲ್ಲಿ ಚಿರತೆ ದಾಳಿ ನಡೆಸಿ ಸುಮಾರು ೨೦ಕ್ಕೂ ಹೆಚ್ಚು ಸಾಕು ಪ್ರಾಣಿಗಳನ್ನು ಬಲಿ ತೆಗೆದುಕೊಂಡಿದೆ. ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಸಲ್ಲಿಸಲಾಗಿದೆ. ಬೋನು ಇಟ್ಟು ಚಿರತೆ ಸೆರೆ ಹಿಡಿಯಲು ಕ್ರಮ ಕೈಗೊಂಡಿದ್ದಾರೆ. ಆದರೆ ಚಾಲಾಕಿ ಚಿರತೆ ಬಲೆಗೆ ಬಿದ್ದಿಲ್ಲ. ಮುಂದಿನ ದಿನಗಳಲ್ಲಿ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಂಡು ಚಿರತೆ ಸೆರೆ ಹಿಡಿಯಬೇಕು. ಕಾಡಾನೆ ದಾಳಿಯಿಂದಲೂ ರೈತರು ಬೆಳೆದ ಬೆಳೆಗಳು ನಾಶವಾಗುತ್ತಿದ್ದು, ಅರಣ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಕಾಡುಪ್ರಾಣಿಗಳ ಹಾವಳಿ ತಪ್ಪಿಸಬೇಕು. ಕುರಿ ಹಾಗೂ ಮೇಕೆಗಳನ್ನು ಕಳೆದುಕೊಂಡಿರುವ ರೈತರಿಗೆ ಕೂಡಲೇ ಪರಿಹಾರ ವಿತರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

2 hours ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

4 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

4 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

5 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

8 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

8 hours ago