ಹನೂರು : ತಾಲ್ಲೂಕಿನ ಕೆ.ಗುಂಡಾಪುರ ಗ್ರಾಮದಲ್ಲಿ ಚಿರತೆಯೊಂದು ಜಮೀನಿಗೆ ಲಗ್ಗೆ ಇಟ್ಟು ಮೇವು ಮೇಯುತ್ತಿದ್ದ ಮೇಕೆಯೊಂದನ್ನು ಕೊಂದುಹಾಕಿದೆ.
ಕೆ.ಗುಂಡಾಪುರ ಗ್ರಾಮದ ಭಾಸ್ಕರ್ ಎಂಬವರ ಜಮೀನಿನಲ್ಲಿ ಈ ಘಟನೆ ಸಂಭವಿಸಿದ್ದು, ಅರಣ್ಯದಿಂದ ಹೊರಬಂದ ಚಿರತೆಯೊಂದು ಜಮೀನಿಗೆ ನುಗ್ಗಿ, ಅಲ್ಲಿ ಮೇಯುತ್ತಿದ್ದ ಮೇಕೆಯ ಮೇಲೆ ಏಕಾಏಕಿ ದಾಳಿ ನಡೆಸಿದ ಪರಿಣಾಮ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದೆ.
ದಾಳಿಯ ವೇಳೆ ಮೇಕೆಯ ಪಾಲಕರಾದ ನಾಗಣ್ಣ ಅವರು ಸಮೀಪದಲ್ಲೇ ಇದ್ದು, ಕಿರುಚಿಕೊಂಡು ಚಿರತೆಯನ್ನು ಓಡಿಸಲು ಯತ್ನಿಸಿದಾಗ ಚಿರತೆ ಅಲ್ಲಿಂದ ಓಡಿ ಹೋಗಿದೆ. ಈ ಘಟನೆಯಿಂದ ಆತಂಕಗೊಂಡ ಗ್ರಾಮಸ್ಥರು ಸಂಬಂಧಪಟ್ಟ ಅರಣ್ಯಾಧಿಕಾರಿಗಳು ತಕ್ಷಣ ಚಿರತೆ ಉಪಟಳಕ್ಕೆ ತಕ್ಷಣ ಕಡಿವಾಣ ಹಾಕಬೇಕೆಂದು ಆಗ್ರಹಿಸಿದ್ದಾರೆ. ಅಲ್ಲದೆ, ಮೇಕೆಯ ಪಾಲಕರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…