ಚಾಮರಾಜನಗರ

ಚಿರತೆ ದಾಳಿಗೆ ಮೇಕೆ ಬಲಿ : ಗ್ರಾಮಸ್ಥರಲ್ಲಿ ಆತಂಕ

ಚಾಮರಾಜನಗರ : ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ನಡೆದಿದೆ.

ಜಮೀನಿನಲ್ಲಿರುವ ಕೊಟ್ಟಿಗೆಯಲ್ಲಿ ಜಾನುವಾರುಗಳ ಜೊತೆಗೆ ಮೇಕೆಯನ್ನು ಕಟ್ಟಿದ್ದಾಗ ಚಿರತೆ ದಾಳಿ ನಡೆಸಿದೆ.

ಶುಕ್ರವಾರ ಮಧ್ಯರಾತ್ರಿ ದಾಳಿ ನಡೆಸಿರುವ ಚಿರತೆ ಮೇಕೆಯನ್ನು ಕೊಂದು ಜಮೀನಿನೊಳಗೆ ಸುಮಾರು 15 ಮೀಟರ್‌ವರೆಗೂ ಎಳೆದೊಯ್ದಿದೆ. ಅರೆಬರೆ ತಿಂದು ಕಳೇಬರವನ್ನು ಬಿಟ್ಟು ಹೋಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇರಿಸಿ ಚಿರತೆ ಸೆರೆ ಹಿಡಿಯಬೇಕು, ಮೇಕೆಯ ಸಾವಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥ ವಿಶ್ವನಾಥ್‌ ಒತ್ತಾಯಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಂಗಾಳ-ಕೇರಳದಲ್ಲಿ ಬದಲಾವಣೆಯ ಸುಳಿವು?

ಅಧಿಕಾರ ಹಿಡಿಯಲು ದಿನದ ಇಪ್ಪತ್ನಾಲ್ಕು ಗಂಟೆಯೂ ರಾಜಕೀಯ ಲೆಕ್ಕಾಚಾರ ಹಾಕುವುದರಲ್ಲಿ ನಿಪುಣರೆಂದೇ ಖ್ಯಾತಿ ಪಡೆದಿದ್ದ ಜನತಾದಳದ ಅಗ್ರಗಣ್ಯ ನಾಯಕ ಎಚ್.ಡಿ.…

3 hours ago

ಪೊದೆಗಳ ನಡುವೆ ಮರೆಯಾಗಿರುವ ಚನ್ನಕೇಶವ ದೇವಾಲಯ

ಚಿತ್ರಾ ವೆಂಕಟರಾಜು ಪಿರಿಯಾಪಟ್ಟಣದಲ್ಲಿ ಅಷ್ಟು ಪ್ರಸಿದ್ಧಿ ಪಡೆಯದ ಹೊಯ್ಸಳರ ಕಾಲದ ಚನ್ನಕೇಶವ ದೇವಾಲಯವಿದೆ. ಹೊಯ್ಸಳರ ಶೈಲಿಯ ವಾಸ್ತುಶಿಲ್ಪ ದಲ್ಲಿರುವ ಈ…

3 hours ago

ಮಂಗಳಮುಖಿಯರ ‘ಮನೆ ನ್ಯಾಯ!’

ಅಕ್ಷತಾ ತೃತೀಯ ಲಿಂಗಿಗಳ ಮೇಲೆ ದೌರ್ಜನ್ಯ, ಕಿರುಕುಳ, ಅಪಹರಣ ದಂತಹ ಪ್ರಕರಣಗಳು ದಿನೇದಿನೇ ಕೇಳಿ ಬರುತ್ತಿವೆ. ಪ್ರತೀ ಸಲ ಇಂತಹ…

3 hours ago

ನಳಂದ ಅಕಾಡೆಮಿ

ಗೋವಿಂದರಾಜು ದಲಿತ ವಿದ್ಯಾರ್ಥಿಗಳ ಉನ್ನತ ಓದಿಗೆ ಆಸರೆಯಾಗಿರುವ ಅವ್ವ  ಅದು ಉತ್ತರಪ್ರದೇಶದ ಒಂದು ಇಂಜಿನಿಯರಿಂಗ್ ಕಾಲೇಜ್. ಪದವಿ ಕಲಿತು ಬದುಕನ್ನು…

3 hours ago

ಎರಡೇ ದಿನಕ್ಕೆ 168 ಹೆಕ್ಟೇರ್ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬಿರುಗಾಳಿ ಮಳೆಗೆ ಕಮರಿದ ರೈತರ ಕನಸು ಗುಂಡ್ಲುಪೇಟೆ: ರೈತರು ಒಂದಷ್ಟು ಕನಸು ಕಟ್ಟಿಕೊಂಡು ಬೆಳೆಸಿ ಕಟಾವಿಗೆ…

3 hours ago

ಭಾರೀ ಗಾಳಿ-ಮಳೆಯಿಂದ ಬೆಳೆ, ಮನೆಗಳಿಗೆ ಹಾನಿ

ಮಂಜು ಕೋಟೆ ಕೋಟೆ: ಅಂದಾಜು ೫ ಕೋಟಿ ರೂ. ನಷ್ಟ; ಕಂಗಾಲಾದ ರೈತರು, ಸಾರ್ವಜನಿಕರು ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಶುಕ್ರವಾರ ಸಂಜೆ…

3 hours ago