ಚಾಮರಾಜನಗರ

ಮೇಕೆ ಕದ್ದು ಮಾರಾಟ: ಸಂತೆಯಲ್ಲಿ ಮಾಲೀಕನನ್ನು ನೋಡಿ ಓಡಿ ಬಂದ ಮೇಕೆ

ಹನೂರು: ಜಮೀನಿನಲ್ಲಿ ಮೇಯುತ್ತಿದ್ದ ಮೇಕೆಯನ್ನು ಕದ್ದೊಯ್ದು ಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾಗ ಮಾಲೀಕನೇ ಪತ್ತೆ ಮಾಡಿ ಆರೋಪಿಯನ್ನು ರಾಮಾಪುರ ಪೊಲೀಸ್ ಠಾಣೆಗೆ ನೀಡಿರುವ ಘಟನೆ ಜರುಗಿದೆ.

ಹನೂರು ತಾಲ್ಲೂಕಿನ ರಾಮಾಪುರ ಗ್ರಾಮದ ರಾಜೇಶ್ ಎಂಬಾತನೇ ಮೇಕೆ ಕದ್ದೊಯ್ದಿದ್ದ ಕಳ್ಳನಾಗಿದ್ದಾನೆ.

ಘಟನೆಯ ವಿವರ: ಹನೂರು ತಾಲ್ಲೂಕಿನ ಅಜ್ಜೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಮ್ಮನಗದ್ದೆ ಗ್ರಾಮದ ಗೋಪಾಲ ನಾಯಕರವರ ಜಮೀನಿನಲ್ಲಿ ಮೇಯುತ್ತಿದ್ದ ಮೇಕೆಯನ್ನು ಕಳ್ಳನೋರ್ವ ಕದ್ದು ಪರಾರಿಯಾಗಿದ್ದಾನೆ.

ಮಾಲೀಕ ಗೋಪಾಲ್ ನಾಯ್ಕ ಕಳ್ಳತನವಾಗಿದ್ದ ಮೇಕೆಯನ್ನು ಸಂತೆಗಳಲ್ಲಿ ಹುಡುಕುತ್ತಿದ್ದಾಗ ಟಿ.ನರಸೀಪುರ ಸಂತೆಯಲ್ಲಿ ಮಾಲೀಕನನ್ನು ನೋಡಿದ ಮೇಕೆ ಓಡಿ ಬಂದಿದೆ. ತಕ್ಷಣ ಮೇಕೆ ಖರೀದಿ ಮಾಡಿದ್ದ ವ್ಯಕ್ತಿ ಮೇಕೆಯ ಹಿಂದೆ ಓಡಿ ಬಂದಿದ್ದಾರೆ. ಈ ವೇಳೆ ಮಾಲೀಕ ಗೋಪಾಲ್ ನಾಯ್ಕ ಇದನ್ನು ನಿಮಗೆ ಯಾರು ಮಾರಾಟ ಮಾಡಿದ್ದು ಎಂದು ವಿಚಾರಿಸಿದಾಗ ಮಾರಾಟ ಮಾಡಿದ್ದ ರಾಜೇಶನನ್ನು ಕರೆಯಿಸಿ ಈತನೇ ನಮಗೆ ಮಾರಾಟ ಮಾಡಿದ್ದು ಎಂದು ತಿಳಿಸಿದ್ದಾರೆ. ತಕ್ಷಣ ಗೋಪಾಲ್ ನಾಯ್ಕ ಮೇಕೆ ಹಾಗೂ ಆರೋಪಿಯನ್ನು ಕರೆತಂದು ರಾಮಾಪುರ ಪೊಲೀಸ್ ಠಾಣೆಗೆ ಒಪ್ಪಿಸಿ, ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಅಮ್ಜದ್ ಖಾನ್ ರವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಅಮ್ಜದ್ ಖಾನ್ ರಾಮಪುರ ಪೊಲೀಸ್ ಠಾಣೆಗೆ ಬಂದು ದೂರು ಕೊಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಆಂದೋಲನ ಡೆಸ್ಕ್

Recent Posts

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

14 mins ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

1 hour ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

2 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

10 hours ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

10 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

11 hours ago